• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

2 ವರ್ಷದಲ್ಲಿ ಕಾಶ್ಮೀರ ಕಣಿವೆಯಲ್ಲಿ ಕಲ್ಲೆಸೆಯುತ್ತಿದ್ದ 11,290 ಜನರ ಬಂಧನ

TNN Correspondent Posted On January 19, 2018
0


0
Shares
  • Share On Facebook
  • Tweet It

ಜಮ್ಮು: ಕಾಶ್ಮೀರ ಪ್ರತ್ಯೇಕ ರಾಷ್ಟ್ರದ ನೆಪದಲ್ಲಿ ಕಣಿವೆ ರಾಜ್ಯದಲ್ಲಿ ಪೊಲೀಸರು, ಸೈನಿಕರು ಮತ್ತು ಅಧಿಕಾರಿಗಳ ಮೇಲೆ ಕಲ್ಲೆಸೆದು ಜನರ ನೆಮ್ಮದಿಗೆ ಭಂಗ ಉಂಟು ಮಾಡುತ್ತಿದ್ದ 11,290 ಜನರನ್ನು ಎರಡು ವರ್ಷದಲ್ಲಿ ಬಂಧಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರ ವಿಧಾನಸಭೆಗೆ ತಿಳಿಸಿದೆ.

ಬಿಜೆಪಿ ಶಾಸಕ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಮೆಹೆಬೂಬಾ ಮುಫ್ತಿ ‘ಎರಡು ವರ್ಷದಲ್ಲಿ 11,290 ಜನರನ್ನು ಬಂಧಿಸಿದ್ದು,  ಕಲ್ಲು ಎಸೆಯುತ್ತಿದ್ದವರ ವಿರುದ್ಧ 3773 ಎಫ್ ಐ ಆರ್ ದಾಖಲಿಸಲಾಗಿದೆ. ಅದರಲ್ಲಿ ಕೆಲವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

2008 ರಿಂದ 2017ರ ವರೆಗೆ ಬಂಧಿಸಲಾಗಿರುವವರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ನಿರ್ಧರಿಸಿದೆ. ಆದರೆ ಅದಕ್ಕೆ ಕೆಲವು ನಿಬಂಧನೆಗಳನ್ನು ಹೇರಲಾಗಿದೆ. ಪ್ರಕರಣದಲ್ಲಿ ದಾಖಲಾದವರ ಪೋಷಕರು ಮತ್ತೊಮ್ಮೆ ನಮ್ಮ ಮಕ್ಕಳನ್ನು ಇಂತಹ ಹೀನ ಕೃತ್ಯಕ್ಕೆ ಇಳಿಸುವುದಿಲ್ಲ ಎಂದು ಹೇಳಬೇಕು. ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಆರೋಪಿಗಳು ಹೇಳಬೇಕು. ಭವಿಷ್ಯದಲ್ಲಿ ಮತ್ತೆ ಇಂತಹ ಕಾರ್ಯದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದರೇ ಮಾತ್ರ ಅವರ ವಿರುದ್ಧ ಪ್ರಕರಣ ಹಿಂಪಡೆಯಲಾಗುವುದು ಎಂದು ತಿಳಿಸಿದರು.

ರಾಷ್ಟ್ರ ವಿರೋಧಿ ಚಟುವಟಿಕೆಯಲ್ಲಿ ಭಾಗವಹಿಸುವ ಯುವಕರನ್ನು ಸಾಮಾಜದ ಮುನ್ನೆಲೆಗೆ ತರಬೇಕು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ಯುವಕರನ್ನು ಮೂಲಭೂತವಾದಿಗಳತ್ತ ಸೆಳೆಯಲು ಸಾಮಾಜಿಕ ಜಾಲತಾಣ ಪ್ರಮುಖ ಪಾತ್ರ ವಹಿಸುತ್ತಿದೆ.

ಆಯಾ ಪೊಲೀಸ್ ಠಾಣೆಯಲ್ಲಿ ಗ್ರಾಮದ ಹಿರಿಯ ಸಭೆ ಕರೆದು ರಾಜ್ಯದ ಅಭಿವೃದ್ಧಿಗೆ ಯುವಕರ ಸೇವೆಯನ್ನು ಬಳಸಿಕೊಳ್ಳುವ ಕುರಿತು ಜಾಗೃತಿ ಮೂಡಿಸಲು ನಿರ್ಧರಿಸಲಾಗಿದೆ. ಯುವಕರು ಮೂಲಭೂತವಾದಿಗಳ ಹಿಡಿತದಿಂದ ಹೊರ ಬರಲು, ತಪ್ಪು ದಾರಿ ತುಳಿಯದಂತೆ ಕ್ರಮ ಕೈಗೊಳ್ಳಲು ಶ್ರಮಿಸಲಾಗುತ್ತಿದೆ ಎಂದು ಮುಫ್ತಿ ಹೇಳಿದರು.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search