• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾನು ಮೋದಿಯಾಗಿ ದೇಶವನ್ನು ಪ್ರತಿನಿಧಿಸಲ್ಲ, 125 ಕೋಟಿ ಜನರ ಜನಪ್ರತಿನಿಧಿಯಾಗುವೆ

TNN Correspondent Posted On January 20, 2018
0


0
Shares
  • Share On Facebook
  • Tweet It

ನಾನು ಕೇವಲ ನರೇಂದ್ರ ಮೋದಿಯಾಗಿ ಭಾರತವನ್ನು ಪ್ರತಿನಿಧಿಸಲ್ಲ. ಬದಲಾಗಿ 125 ಕೋಟಿ ಜನರ ಪ್ರತಿನಿಧಿಯಾಗಿ, ಅವರ ಧ್ವನಿಯಾಗಿ ಪ್ರತಿನಿಧಿಸ ಬಯಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಜೀ ನ್ಯೂಸ್ ಖಾಸಗಿ ಸುದ್ದಿವಾಹಿನಿಗೆ ಸಂದರ್ಶನದಲ್ಲಿ ಈ ಕುರಿತು ಉಲ್ಲೇಖಿಸಿರುವ ಅವರು, ನಾನು ಪ್ರತಿ ಭಾರತೀಯನ ಪ್ರತಿನಿಧಿ ಎಂದು ಹೇಳಿದ್ದಾರೆ.

ಪ್ರಸಕ್ತ ವರ್ಷದಲ್ಲಿ ಸ್ವಿಡ್ಜರ್ ಲೆಂಡ್ ನಲ್ಲಿ ನಡೆಯುವ ವಿಶ್ವ ಆರ್ಥಿಕ ಫೋರಂನಲ್ಲಿ ಭಾರತದ ಸ್ಥಾನ ಎಂಥಾದ್ದು ಎಂದು ವಾಹಿನಿಯ ಸುದ್ದಿ ಸಂಪಾದಕರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮೋದಿ ಅವರು, “ಇಡೀ ವಿಶ್ವವೇ ಭಾರತದೊಂದಿಗೆ ನೇರವಾಗಿ ಸಂಪರ್ಕಿಸಲು ಬಯಸುತ್ತಿದೆ” ಎಂದು ತಿಳಿಸಿದ್ದಾರೆ.

ಪರೋಕ್ಷವಾಗಿ ಕಾಂಗ್ರೆಸ್ಸಿನ ಭ್ರಷ್ಟಾಚಾರವನ್ನು ಕುಟುಕಿದ ಪ್ರಧಾನಿ, “2014ರಲ್ಲಿ ಜಗತ್ತಿನ ಮಾಧ್ಯಮಗಳಲ್ಲಿ ಭಾರತದ ಕುರಿತು ಯಾವ ವಿಷಯ ವರದಿಯಾಗುತ್ತಿತ್ತು ಎಂಬುದು ಎಲ್ಲರಿಗೂ ಗೊತ್ತಿದೆ. ಆದರೆ 2014ರಲ್ಲಿ ಭಾರತದಲ್ಲಿ 30 ವರ್ಷಗಳ ಬಳಿಕ ಜನ ಒಂದೇ ಪಕ್ಷಕ್ಕೆ ಬಹುಮತ ನೀಡಿದ್ದು, ಪ್ರಸ್ತುತ ಭಾರತ ಎಂದರೇನೆ ಜಗತ್ತಿನಲ್ಲಿ ವಿಶಿಷ್ಟ ಸ್ಥಾನಮಾನ ಸಿಕ್ಕಿದೆ. ಭಾರತ ಎಂದರೆ ಎಲ್ಲರೂ ಕುತೂಹಲದ ಕಣ್ಣುಗಳನ್ನು ಅರಳಿಸುತ್ತಾರೆ” ಎಂದಿದ್ದಾರೆ.

ನನ್ನನ್ನು ಮೊದಲು ಗುಜರಾತಿನ ಜನರ ನಾಡಿಮಿಡಿತ ಅಷ್ಟೇ ಗೊತ್ತಿರುವವ ಎಂದು ಟೀಕಿಸಿದರು. ಆದರೆ ನಾನು ನನ್ನ ಬಲವನ್ನು ತೋರಿಸಿದೆ. ಇಡೀ ದೇಶದ ಜನರ ನಾಡಿಮಿಡಿತ ಅರಿತೆ. ಪ್ರಸ್ತುತ ಜಗತ್ತಿನ ಎಲ್ಲ ರಾಷ್ಟ್ರಗಳಿಗೂ ನಾನು ಗೆಳೆಯ. ವಿಶ್ವವೇ ಭಾರತವನ್ನು ಗುರುತಿಸುವಂತಾಗಿದೆ ಎಂದು ಸಂದರ್ಶನದ ವೇಳೆ ಪ್ರಧಾನಿಯವರು ಹೆಮ್ಮೆಯಿಂದ ಹೇಳಿದ್ದಾರೆ.

ಟೀಕೆಗೊಳಗಾಗಿದ್ದ ಜಿಎಸ್ಟಿ ಕುರಿತು ಸಹ ಉಲ್ಲೇಖಿಸಿರುವ ಅವರು, “ಭಾರತದಲ್ಲಿ ಕ್ಷಿಪ್ರ ಗತಿಯಲ್ಲಿ ಆರ್ಥಿಕ ಸುಧಾರಣೆಗಳಾಗುತ್ತಿವೆ. ಕಳೆದ ಕೆಲವು ತಿಂಗಳುಗಳಿಂದಲಂತೂ ಭಾರತದ ಆರ್ಥಿಕತೆ ಭಾರಿ ಸುಧಾರಣೆ ಕಾಣುತ್ತಿದೆ ಎಂದು ತಿಳಿಸಿದ್ದಾರೆ.

ದೇಶದ ಎಲ್ಲ ರಾಷ್ಟ್ರಗಳೊಂದಿಗೆ ಭಾರತ ಉತ್ತಮ ಸಂಬಂಧ ಹೊಂದಿದೆ. ವಿಶ್ವದ ಪ್ರಮುಖ ನಾಯಕರಾದ ಪುಟಿನ್, ಟ್ರಂಪ್ ಸೇರಿ ಹಲವರ ಪಕ್ಕದಲ್ಲಿ ನಿಂತಾಗಲೆಲ್ಲ ನನಗೆ ಹೆಮ್ಮೆಯಾಗುತ್ತದೆ. 125 ಕೋಟಿ ಜನರ ಪ್ರತಿನಿಧಿಯಾಗಿ ನಿಲ್ಲುತ್ತೀನಲ್ಲ, ದೇಶದ ಜನ ನನಗೆ ಇಂಥದ್ದೊಂದು ಅವಕಾಶ ನೀಡಿದರಲ್ಲ ಎಂದು ಹೆಮ್ಮೆ ಎನಿಸುತ್ತದೆ. ಆಗೆಲ್ಲ ನಮ್ಮ ದೇಶವನ್ನು ಮತ್ತಷ್ಟು ಅಭಿವೃದ್ಧಿಗೊಳಿಸಬೇಕು ಎಂಬ ಮಹದಾಸೆ ಪಕಳೆಯೊಡೆಯುತ್ತಿದೆ ಎಂದು ಮೋದಿ ಮನದಾಳ ಬಿಚ್ಚಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು 2018ರಲ್ಲಿ ಟಿವಿಯೊಂದಕ್ಕೆ ನೀಡಿದ ಮೊದಲ ಸಂದರ್ಶನ ಇದಾಗಿದ್ದು, ಹಲವು ವಿಷಯಗಳ ಬಗ್ಗೆ ಮೋದಿ ಅವರು ಮಾತನಾಡಿದ್ದಾರೆ. ಇಂದು ಸಂಜೆ 8 ಗಂಟೆಗೆ ಜೀ ನ್ಯೂಸ್ ನಲ್ಲಿ ಸಂದರ್ಶನದ ಪೂರ್ಣ ಭಾಗ ಪ್ರಸಾರವಾಗಲಿದೆ.

ಕೃಪೆ-ಜೀ ನ್ಯೂಸ್

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search