• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗಡಿಯಲ್ಲಿ ಪಾಕ್ ಯುದ್ಧೋತ್ಸಾಹ 4 ಯೋಧರು ಹುತಾತ್ಮ, 6 ಸಾರ್ವಜನಿಕರ ಸಾವು

TNN Correspondent Posted On January 21, 2018


  • Share On Facebook
  • Tweet It

ಜಮ್ಮು ಕಾಶ್ಮೀರ: ಗಡಿ ಭಾಗದಲ್ಲಿ ಪಾಕಿಸ್ತಾನ ತನ್ನ ಪುಂಡಾಟ ಮುಂದುವರಿಸಿದೆ. ಪಾಕ್ ಪಾತಕತನ ನಾಲ್ಕನೇ ದಿನ ತಲುಪಿದ್ದು, ನಾಲ್ವರು ಯೋಧರು, 6 ಸಾರ್ವಜನಿಕರು ಸೇರಿ 10 ಜನರು ಮೃತಪಟ್ಟಿದ್ದಾರೆ. ಪಾಕಿಸ್ತಾನದ ಸೈನ್ಯ ಕಾಶ್ಮೀರದ ಸಂಬಾ, ಕತುವಾ, ರಜೌರಿ ಹಾಗೂ ಜಮ್ಮು ಗಡಿಯಲ್ಲಿ ಶೆಲ್ ದಾಳಿ ನಡೆಸಿದ್ದರಿಂದ ಇಬ್ಬರು ಭಾರತೀಯ ಯೋಧರು ಇಬ್ಬರು ಸ್ಥಳೀಯರು ಮೃತಪಟ್ಟಿದ್ದರು. 35 ಜನರು ಗಾಯಗೊಂಡಿದ್ದರು. ಬುಧವಾರ ನಡೆದ ದಾಳಿಯಲ್ಲಿ ಬಿಎಸ್ ಎಫ್ ಯೋಧ ಹಾಗೂ ಒಬ್ಬ ಬಾಲಕಿ ಬಲಿಯಾಗಿ, 8 ಜನರಿಗೆ ಗಾಯಗಳಾಗಿದ್ದವು.

ಪಾಕಿಸ್ತಾನದವರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಪಂಜಾಬ್ ನ ಸಂಗ್ರುರ್ ಜಿಲ್ಲೆಯ ಅಲಂಪೂರದ 23 ವರ್ಷದ ಯಧ ಮನದೀಪ್ ಸಿಂಗ್ ಹುತಾತ್ಮರಾಗಿದ್ದಾರೆ. ಶನಿವಾರವೂ ಪಾಕಿಸ್ತಾನ ತನ್ನ ನೀಚತನ ಮುಂದುವರಿಸಿದೆ.ಜಮ್ಮು ಕಾನಚಕ್ ವಲಯದ ಗಜನ್ಸೂ ಪ್ರದೇಶದಲ್ಲಿ ಶೆಲ್ ದಾಳಿಗೆ ಮೂವರು ಮೃತಪಟ್ಟಿದ್ದರು.

ಗಡಿಯಲ್ಲಿ ಯುದ್ಧದ ವಾತಾವರಣ, ರೆಡ್ ಅಲರ್ಟ್ ಘೋಷಣೆ

ಪಾಕಿಸ್ತಾನದ ಪದೇ ಪದೆ ಕದನ ವಿರಾಮ ಉಲ್ಲಂಘಿಸುತ್ತಿದ್ದು, ಗಡಿಯಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದೆ.  ಪಾಕಿಸ್ತಾನದ ನಿರಂತರವಾಗಿ ಕದನ ವಿರಾಮ ಉಲ್ಲಂಘಿಸುತ್ತಿರುವ ಹಿನ್ನೆಲೆಯಲ್ಲಿ ಸುರಕ್ಷಿತ ತಾಣಗಳಿಗೆ ತೆರಳುವಂತೆ ಸಾರ್ವಜನಿಕರಿಗೆ ಭಾರತೀಯ ಅಧಿಕಾರಿಗಳು ಸೂಚಿಸಿದ್ದಾರೆ. ಪಾಕಿಸ್ತಾನದ ಪುಂಡಾಟಕ್ಕೆ ಭಯಭೀತರಾಗಿರುವ 10 ಸಾವಿರ ಜನರು ಗಡಿ ಪ್ರದೇಶದಿಂದ ವಲಸೆ ಹೋಗಿದ್ದಾರೆ ಎನ್ನಲಾಗಿದೆ. ಗಡಿಯಲ್ಲಿ ಯುದ್ಧದ ವಾತಾವರ ನಿರ್ಮಾಣವಾಗಿದ್ದರಿಂದ ಗಡಿಯಲ್ಲಿರುವ 300 ಶಾಲೆಗಳನ್ನು ಮುಚ್ಚಲು ಸೂಚಿಸಲಾಗಿದೆ.

ಆರೋಗ್ಯ ಇಲಾಖೆಯಿಂದ ಭಾರಿ ಸಿದ್ಧತೆ

ಗಡಿಯಲ್ಲಿ ನಿರಂತರವಾಗಿ ಪಾಕ್ ಅಪ್ರಚೋಧಿತ ದಾಳಿ ನಡೆಸುತ್ತಿರುವುದರಿಂದ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ಕೈಗೊಂಡಿದ್ದೆ. ತುರ್ತು ಚಿಕಿತ್ಸೆಗೆ ಬೇಕಾಗುವ ಎಲ್ಲ ಸಿದ್ಧತೆಗಳನ್ನು ಕೈಗೊಂಡಿದೆ. ಹೆಚ್ಚುವರಿಯಾಗಿ 197 ಆ್ಯಂಬುಲೆನ್ಸ್ ಗಳನ್ನು ನೀಡಲಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search