• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಷ್ಟ್ರಪತಿ ಒಪ್ಪಿಗೆಗೆ ಮಣಿದ ಆಪ್ ಶಾಸಕರು, ದೆಹಲಿ ಹೈಕೋರ್ಟಿಗೆ ಸಲ್ಲಿಸಿದ ಅರ್ಜಿ ಹಿಂಪಡೆತ

TNN Correspondent Posted On January 23, 2018
0


0
Shares
  • Share On Facebook
  • Tweet It

ದೆಹಲಿ: ಲಾಭದಾಯಕ ಹುದ್ದೆ ಹೊಂದಿದ ಆರೋಪದಲ್ಲಿ ಆಮ್ ಆದ್ಮಿ ಪಕ್ಷದ 20 ಶಾಸಕರನ್ನು ಅನರ್ಹಗೊಳಿಸಲು ಚುನಾವಣೆ ಆಯೋಗದ ಶಿಫಾರಸಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಕಿತ ಹಾಕಿದ ಬೆನ್ನಲ್ಲೇ ಅನರ್ಹಗೊಂಡ ಶಾಸಕರು ಮೆತ್ತಗಾಗಿದ್ದಾರೆ.

ರಾಷ್ಟ್ರಪತಿ ಅವರು ಅಂಕಿತ ಹಾಕಿದ ಹಿನ್ನೆಲೆಯಲ್ಲಿ ಚುನಾವಣೆ ಆಯೋಗದ ಶಿಫಾರಸು ಪ್ರಶ್ನಿಸಿ ದೆಹಲಿಗೆ ಹೈಕೋರ್ಟಿಗೆ ಸಲ್ಲಿಸಿದ ಅರ್ಜಿಯನ್ನು ಹಿಂಪಡೆದಿದ್ದಾರೆ.

ಆಮ್ ಆದ್ಮಿಪಕ್ಷದ ಶಾಸಕರು ಸಂಸದೀಯ ಕಾರ್ಯದರ್ಶಿ ಎಂಬ ಲಾಭದಾಯಕ ಹುದ್ದೆಯಲ್ಲಿದ್ದು, ಹಲವು ಸೌಲಭ್ಯ ಪಡೆದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಆಪ್ ನ 20 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ರಾಷ್ಟ್ರಪತಿಯವರಿಗೆ ಶಿಫಾರಸು ಮಾಡಿತ್ತು.

ಇದರಿಂದ ತೀವ್ರ ಮುಜುಗರಕ್ಕೊಳಗಾಗಿದ್ದ ಆಪ್ ನ 6 ಶಾಸಕರು ಕಳೆದ ಶುಕ್ರವಾರವೇ ಚುನಾವಣೆ ಆಯೋಗದ ತೀರ್ಮಾನಕ್ಕೆ ಕೂಡಲೇ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಹೊರಡಿಸಬೇಕು ಎಂದು ದೆಹಲಿ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಚುನಾವಣೆ ಆಯೋಗ ಸೋಮವಾರ ವಿಚಾರಣೆ ಆರಂಭಿಸುವುದಾಗಿ ತಿಳಿಸಿತ್ತು.

ಆದರೆ ಭಾನುವಾರವೇ ರಾಷ್ಟ್ರಪತಿಯವರು ಆಪ್ ಶಾಸಕರ ಅನರ್ಹಗೊಳಿಸುವ ಶಿಫಾರಸಿಗೆ ಅಂಕಿತ ಹಾಕಿದ್ದಾರೆ. ಹಾಗಾಗಿ ನಾವು ಸಲ್ಲಿಸಿರುವ ಅರ್ಜಿ ರಾಷ್ಟ್ರಪತಿಗಳ ಆದೇಶ ವಿರುದ್ಧವಾಗಿ ಬದಲಾಗುವುದರಿಂದ ಮನವಿ ಹಿಂಪಡೆಯಲಾಗಿದೆ ಎಂದು ಅನರ್ಹಗೊಂಡಿರುವ ಶಾಸಕರೊಬ್ಬರು ಮಾಹಿತಿ ನೀಡಿದ್ದಾರೆ.

ಆದಾಗ್ಯೂ ಆಮ್ ಆದ್ಮಿ ಪಕ್ಷವು ಚುನಾವಣೆ ಆಯೋಗದ ಪ್ರಕ್ರಿಯೆ, ವಿಚಾರಣೆ ವಿಧಾನದ ಉಸ್ತುವಾರಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಮಾರ್ಚ್ 20ರಂದು ವಿಚಾರಣೆ ನಡೆಸುವುದಾಗಿ ದೆಹಲಿ ಹೈಕೋರ್ಟ್ ತಿಳಿಸಿದೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • 2
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search