• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯಶಸ್ವಿಯಾಗಲಿಲ್ಲ ಕೃತಕ ಬಂದ್, ಉತ್ತರ ಕರ್ನಾಟಕದಲ್ಲೇ ಇಲ್ಲ ಬೆಂಬಲ

TNN Correspondent Posted On January 25, 2018
0


0
Shares
  • Share On Facebook
  • Tweet It

ಬೆಂಗಳೂರು: ಮಹದಾಯಿ ವಿಚಾರವಾಗಿ ರಾಜಕೀಯ ಪ್ರೇರಿತವಾಗಿ ಕರೆ ನೀಡಿದ್ದ ಕರ್ನಾಟಕ ಬಂದ್ ಎಂಬ ಕೃತಕ ನಾಟಕಕ್ಕೆ ರಾಜ್ಯದ ಜನ ಬೆಂಬಲ ನೀಡಿಲ್ಲ. ಇದರಿಂದ ಸರ್ಕಾರದ ಮಾತು ಕೇಳಿದ್ದ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹಾಗೂ ಬಿಜೆಪಿ ಪರಿವರ್ತನಾ ರ್ಯಾಲಿ ಹಿನ್ನೆಲೆಯಲ್ಲಿ ಜನವರಿ 27ರಂದು ನಿಗದಿಯಾಗಿದ್ದ ಕರ್ನಾಟಕ ಬಂದ್ಅನ್ನು ಜನವರಿ 25ರಂದೇ ಮಾಡಲು ಸೂಚಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಿನ್ನಡೆಯಾದಂತಾಗಿದೆ.

ರಾಜ್ಯದ ಬಹುತೇಕ ಕಡೆ ಮಹದಾಯಿ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನಜೀವನ ಸುಗಮವಾಗಿ ಸಾಗುತ್ತಿದೆ. ಉತ್ತರ ಮಹದಾಯಿ ನದಿ ನೀರಿನ ಪ್ರಮುಖ ಫಲಾನುಭವಿಗಳಾದ ಉತ್ತರ ಕರ್ನಾಟಕದಲ್ಲೇ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಹಾವೇರಿ, ಕೊಪ್ಪಳ, ವಿಜಯಪುರದಲ್ಲಂತೂ ಬಂದ್ ಬಿಸಿ ತಟ್ಟದೆ, ವ್ಯಾಪಾರ ವಹಿವಾಟು ಸುಗಮವಾಗಿ ಸಾಗುತ್ತಿದೆ. ಅಂಗಡಿಮುಂಗಟ್ಟು ತೆರೆದಿದ್ದು, ಜನ ಎಂದಿನಂತೆ ತಿರುಗಾಡುತ್ತಿದ್ದಾರೆ. ಸರ್ಕಾರದ ಮಾತು ಕೇಳಿದ ತಪ್ಪಿಗೆ ಹಲವು ಕನ್ನಡಪರ ಸಂಘಟನೆಗಳು ಮಾತ್ರ ಸಾಂಕೇತಿಕವಾಗಿ ಪ್ರತಿಭಟನೆ ನಡೆಸುತ್ತಿರುವುದು ಬಿಟ್ಟರೆ ಇನ್ನಾವುದೇ ತೊಂದರೆಯಾಗಿಲ್ಲ.

ಇದು ಉತ್ತರ ಕರ್ನಾಟಕದ ಪರಿಸ್ಥಿತಿಯಾದರೆ, ಬೇರೆ ಭಾಗದಲ್ಲೂ ಪರಿಸ್ಥಿತಿ ಭಿನ್ನವಾಗೇನಿಲ್ಲ. ದಕ್ಷಿಣ ಕನ್ನಡ, ಉತ್ತರ ಕನ್ನಡದ ಶಿರಸಿ, ಚಿಕ್ಕಬಳ್ಳಾಪುರ, ಬಾಗಲಕೋಟೆ, ಕೊಡಗು ಜಿಲ್ಲೆಗಳಲ್ಲೂ ಬಂದ್ ಗೆ ಅತೀ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸರ್ಕಾರದ ಆಣತಿ ಮೇರೆಗೆ ಬಂದ್ ಗೆ ಕೆಎಸ್ಆರ್ಟಿಸಿ ಬೆಂಬಲ ನೀಡಿರುವುದರಿಂದ ಬೆಂಗಳೂರು ಸುತ್ತಲೂ ಬಸ್ ಸಂಚಾರ ಅಸ್ತವ್ಯಸ್ತವಾಗಿದ್ದು ಬಿಟ್ಟರೆ ಅಷ್ಟೇನೂ ಪ್ರಭಾವ ಬೀರಿಲ್ಲ.

ಒಟ್ಟಿನಲ್ಲಿ ಸರ್ಕಾರದ ರಾಜಕೀಯ ಪ್ರೇರಿತ ಮಾತು ಕೇಳಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ ಎಂಬ ಆರೋಪಕ್ಕೆ ಪುಷ್ಟಿ ನೀಡುವಂತೆ ರಾಜ್ಯದಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

0
Shares
  • Share On Facebook
  • Tweet It




Trending Now
ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
Tulunadu News July 3, 2025
ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
Tulunadu News July 3, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
  • Popular Posts

    • 1
      ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • 2
      ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • 3
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 4
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 5
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!

  • Privacy Policy
  • Contact
© Tulunadu Infomedia.

Press enter/return to begin your search