• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯಶಸ್ವಿಯಾಗಲಿಲ್ಲ ಕೃತಕ ಬಂದ್, ಉತ್ತರ ಕರ್ನಾಟಕದಲ್ಲೇ ಇಲ್ಲ ಬೆಂಬಲ

TNN Correspondent Posted On January 25, 2018
0


0
Shares
  • Share On Facebook
  • Tweet It

ಬೆಂಗಳೂರು: ಮಹದಾಯಿ ವಿಚಾರವಾಗಿ ರಾಜಕೀಯ ಪ್ರೇರಿತವಾಗಿ ಕರೆ ನೀಡಿದ್ದ ಕರ್ನಾಟಕ ಬಂದ್ ಎಂಬ ಕೃತಕ ನಾಟಕಕ್ಕೆ ರಾಜ್ಯದ ಜನ ಬೆಂಬಲ ನೀಡಿಲ್ಲ. ಇದರಿಂದ ಸರ್ಕಾರದ ಮಾತು ಕೇಳಿದ್ದ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹಾಗೂ ಬಿಜೆಪಿ ಪರಿವರ್ತನಾ ರ್ಯಾಲಿ ಹಿನ್ನೆಲೆಯಲ್ಲಿ ಜನವರಿ 27ರಂದು ನಿಗದಿಯಾಗಿದ್ದ ಕರ್ನಾಟಕ ಬಂದ್ಅನ್ನು ಜನವರಿ 25ರಂದೇ ಮಾಡಲು ಸೂಚಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಿನ್ನಡೆಯಾದಂತಾಗಿದೆ.

ರಾಜ್ಯದ ಬಹುತೇಕ ಕಡೆ ಮಹದಾಯಿ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನಜೀವನ ಸುಗಮವಾಗಿ ಸಾಗುತ್ತಿದೆ. ಉತ್ತರ ಮಹದಾಯಿ ನದಿ ನೀರಿನ ಪ್ರಮುಖ ಫಲಾನುಭವಿಗಳಾದ ಉತ್ತರ ಕರ್ನಾಟಕದಲ್ಲೇ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಹಾವೇರಿ, ಕೊಪ್ಪಳ, ವಿಜಯಪುರದಲ್ಲಂತೂ ಬಂದ್ ಬಿಸಿ ತಟ್ಟದೆ, ವ್ಯಾಪಾರ ವಹಿವಾಟು ಸುಗಮವಾಗಿ ಸಾಗುತ್ತಿದೆ. ಅಂಗಡಿಮುಂಗಟ್ಟು ತೆರೆದಿದ್ದು, ಜನ ಎಂದಿನಂತೆ ತಿರುಗಾಡುತ್ತಿದ್ದಾರೆ. ಸರ್ಕಾರದ ಮಾತು ಕೇಳಿದ ತಪ್ಪಿಗೆ ಹಲವು ಕನ್ನಡಪರ ಸಂಘಟನೆಗಳು ಮಾತ್ರ ಸಾಂಕೇತಿಕವಾಗಿ ಪ್ರತಿಭಟನೆ ನಡೆಸುತ್ತಿರುವುದು ಬಿಟ್ಟರೆ ಇನ್ನಾವುದೇ ತೊಂದರೆಯಾಗಿಲ್ಲ.

ಇದು ಉತ್ತರ ಕರ್ನಾಟಕದ ಪರಿಸ್ಥಿತಿಯಾದರೆ, ಬೇರೆ ಭಾಗದಲ್ಲೂ ಪರಿಸ್ಥಿತಿ ಭಿನ್ನವಾಗೇನಿಲ್ಲ. ದಕ್ಷಿಣ ಕನ್ನಡ, ಉತ್ತರ ಕನ್ನಡದ ಶಿರಸಿ, ಚಿಕ್ಕಬಳ್ಳಾಪುರ, ಬಾಗಲಕೋಟೆ, ಕೊಡಗು ಜಿಲ್ಲೆಗಳಲ್ಲೂ ಬಂದ್ ಗೆ ಅತೀ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸರ್ಕಾರದ ಆಣತಿ ಮೇರೆಗೆ ಬಂದ್ ಗೆ ಕೆಎಸ್ಆರ್ಟಿಸಿ ಬೆಂಬಲ ನೀಡಿರುವುದರಿಂದ ಬೆಂಗಳೂರು ಸುತ್ತಲೂ ಬಸ್ ಸಂಚಾರ ಅಸ್ತವ್ಯಸ್ತವಾಗಿದ್ದು ಬಿಟ್ಟರೆ ಅಷ್ಟೇನೂ ಪ್ರಭಾವ ಬೀರಿಲ್ಲ.

ಒಟ್ಟಿನಲ್ಲಿ ಸರ್ಕಾರದ ರಾಜಕೀಯ ಪ್ರೇರಿತ ಮಾತು ಕೇಳಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ ಎಂಬ ಆರೋಪಕ್ಕೆ ಪುಷ್ಟಿ ನೀಡುವಂತೆ ರಾಜ್ಯದಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search