• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ತುಳು ಭಾಷೆಯನ್ನು ನಿಂಧಿಸಿದ ಮುಖಂಡನ ಉಚ್ಚಾಟಿಸಿದ ಕರವೇ

TNN Correspondent Posted On January 26, 2018
0


0
Shares
  • Share On Facebook
  • Tweet It

ಬೆಂಗಳೂರು: ಫೇಸ್‌ಬುಕ್‌ ‘ ನಲ್ಲಿ ತುಳು ಹಾಗೂ ತುಳು ಭಾಷಿಕರನ್ನು ಅವಾಚ್ಯ, ಅಶಬ್ಧ, ಅಸಂವಿಧಾನಿಕ ಪದಗಳಿಂದ ನಿಂದಿಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತ ಜಾನ್‌ ನನ್ನು ಕರವೇ ಅಧ್ಯಕ್ಷ ಟಿ.ಎ ನಾರಾಯಣ ಗೌಡ ಉಚ್ಚಾಟಿಸಿ, ಆದೇಶ ಹೊರಡಿಸಿದ್ದಾರೆ.
ಕನ್ನಡದ ಸೋದರ ಭಾಷೆಯಾದ ತುಳು ಭಾಷೆ ಮತ್ತು ತುಳುನಾಡಿನ ಜನರ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಅಪಾರ ಗೌರವ ಹೊಂದಿದೆ. ತುಳು ಮತ್ತು ಕೊಡವ ಭಾಷೆಗೆ ಸಾಂವಿಧಾನಿಕ ಸ್ಥಾನಮಾನ ನೀಡಲು 8ನೇ ಪರೀಚ್ಛೇದಕ್ಕೆ ಸೇರಿಸುವಂತೆ ಕರವೇ ಕೇಂದ್ರ ಸರಕಾರವನ್ನು ಹಲವು ಬಾರಿ ಒತ್ತಾಯಿಸಿದೆ ಎಂದು ನಾರಾಯಣ ಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಇತ್ತೀಚೆಗೆ ಕನ್ನಡಪರ ಹೋರಾಟಗಳ ಕುರಿತಾಗಿ ಅತ್ಯಂತ ಕೀಳು ಶಬ್ದಗಳಲ್ಲಿ ನಿಂದನೆ ಮಾಡುವ ಕೆಲಸ ಕನ್ನಡಿಗರಿಂದಲೇ ನಡೆಯುತ್ತಿರುವುದು ನೋವಿನ ಸಂಗತಿ. ಕರವೇ ಕಾರ್ಯಕರ್ತ ಜಾನ್‌ ಎಂಬುವರು ಸಾಮಾಜಿಕ ಜಾಲತಾಣದಲ್ಲಿ ತುಳು ಭಾಷೆ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂಧಿಸಿರುವುದು ತಪ್ಪಾಗಿದೆ. ಇದು ಜಾನ್ ಹೇಳಿಕೆಯೇ ಹೊರತು ಕರ್ನಾಟಕ ರಕ್ಷಣಾ ವೇದಿಕೆ ನಿಲುವಲ್ಲ. ಆದ್ದರಿಂದ ತುಳು ಭಾಷೆ ಬಗ್ಗೆ ಅವಹೇಳನಕಾರಿ ಶಬ್ದ ಬಳಸಿರುವ ಜಾನ್‌ ಅವರನ್ನು ಕರವೇಯಿಂದ ಉಚ್ಚಾಟಿಸಲಾಗಿದೆ ಎಂದು ತಿಳಿಸಿದ್ದಾರೆ.

ಕರವೇ ಮುಖಂಡರಿಂದಲೇ ಛೀಮಾರಿ

ಜಾನ್ ಕರವೇ ಫೇಸ್ ಬುಕ್ ಹೆಸರಿನ ಈತ ತುಳು ಭಾಷೆ ವಿರುದ್ಧ ಕೆಟ್ಟ ಪದಗಳನ್ನು ಬಳಸಿದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೇ ಕರವೇ ಮುಖಂಡರೇ ಜಾನ್ ಗೆ ಛೀಮಾರಿ ಹಾಕಿದ್ದರು. ಅಲ್ಲದೇ ತುಳುನಾಡಿನ ಸಂಘಟನೆಗಳು ಮತ್ತು ಕೊಡವ ಸಂಘಟನೆಗಳು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದರು.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search