• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲಂಡನ್ ನಲ್ಲಿ  ಪ್ರತ್ಯೇಕ ಕಾಶ್ಮೀರಕ್ಕೆ ಬೆಂಬಲಿಸಿದವನ ನೀರಿಳಿಸಿದ ಭಾರತೀಯರು

TNN Correspondent Posted On January 27, 2018
0


0
Shares
  • Share On Facebook
  • Tweet It

ದೆಹಲಿ: ಲಂಡನ್ ನಲ್ಲಿ  ಭಾರತದ ಗಣರಾಜ್ಯೋತ್ಸವಂದು ಬ್ರಿಟಿಷ್ ಹೌಸ್ ಆಫ್ ಲಾರ್ಡ್ ನ ಸದಸ್ಯ ನಾಝೀರ್ ಅಹ್ಮದ್ ಕಾಶ್ಮೀರ ಮತ್ತು ಖಲೀಸ್ತಾನ ಪ್ರತ್ಯೇಕ ರಾಷ್ಟ್ರಕ್ಕೆ ಆಗ್ರಹಿಸಿದ ಕರಾಳ ದಿನ ಘೋಷಿಸಿದಕ್ಕೆ ಭಾರತೀಯರು ಆತನ ನೀರಿಳಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಂಡನ್‌ ನ ಭಾರತೀಯ ರಾಯಭಾರಿ ಕಚೇರಿ ಬಳಿ ನಾಝೀರ್ ನ ನೂರಾರು ಬೆಂಬಲಿಗರು ಭಾರತದ ವಿರುದ್ಧ ಪ್ರತಿಭಟನೆ ನಡೆಸಲು ಬೀದಿಗಿಳಿದಿದ್ದರು. ಈ ವೇಳೆ ಸುದ್ದಿ ಅರಿತು ಸ್ಥಳಕ್ಕೆ ಬಂದ ಭಾರತದ ಹೆಮ್ಮೆಯ ಭಾರತೀಯರು ನಾಝೀರ್ ಬೆಂಬಲಗರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಂದೇ ಮಾತರಂ, ಬೋಲೋ ಭಾರತ ಮಾತಾಕಿ ಜೈ ಎಂದು ಘೋಷಣೆ ಕೂಗಿ ನಾಝೀರ್ ನ ನೀರಿಳಿಸಿದರು.

ಭಾರತ ಗಣರಾಜ್ಯೋತ್ಸವದಂದೇ ನಾಝೀರ್ ಅಹ್ಮದ ಹಮ್ಮಿಕೊಂಡಿರುವ ಪ್ರತಿಭಟನೆ ಭಾರತದ ವಿರುದ್ಧದ ದಬ್ಬಾಳಿಕೆಯನ್ನು ಎತ್ತಿ ತೋರುತ್ತದೆ ಎಂದು ಎಎನ್‌ಐ ವರದಿ ಮಾಡಿದೆ.

ಇನ್ನು ನಾಝೀರ್ ಪಾಕಿಸ್ತಾನದ ಪರ ಬಹಿರಂಗವಾಗಿ ಘೋಷಣೆ ನೀಡಿದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಭಾರತೀಯರು ‘ನಾಝೀರ್ ಅವರೇ ನೀವು ಬ್ರಿಟಿಷ್ ಆಡಳಿತ ವ್ಯವಸ್ಥೆಯನ್ನು ಹಾಸ್ಯಾಸ್ಪದಗೊಳಿಸುತ್ತಿದ್ದೀರಿ. ನಾಝೀರ್‌ ನೀವು ಜಮ್ಮು ಮತ್ತು ಕಾಶ್ಮೀರ ಭಾರತದಿಂದ ಪ್ರತ್ಯೇಕವಾಗಲು ಬಯುತ್ತೀರಿ. ಆದರೆ ನಾನು ಜಮ್ಮು ಕಾಶ್ಮೀರದಲ್ಲಿ ಪಾಕ್‌ ಪ್ರಾಯೋಜಿತ ಭಯೋತ್ಪಾದನೆ, ಕದನ ವಿರಾಮ ಉಲ್ಲಂಘನೆ ಮತ್ತು ಪರೋಕ್ಷ ಸಮರ ಕೊನೆಗಾಣಬೇಕೆಂದು ಬಯಸುತ್ತೇನೆ,’ ಎಂದು ಭಾರತೀಯರು ನಾಝೀರ್ ನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

#WATCH Clashes erupted outside Indian High Commission in London as British Lord Nazir called for Azad Kashmir on India's Republic Day pic.twitter.com/IJQb3XajIu

— ANI (@ANI) January 26, 2018

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search