• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಟೀಕೆಗೆ ಮಣಿದ ಸರ್ಕಾರ, ಮುಗ್ಧ ಅಲ್ಪಸಂಖ್ಯಾತರು ಎಂಬುದನ್ನು ಮುಗ್ಧ ಜನರು ಎಂದು ತಿದ್ದುಪಡಿ

TNN Correspondent Posted On January 28, 2018
0


0
Shares
  • Share On Facebook
  • Tweet It

ಬೆಂಗಳೂರು: ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಬಳಿಕ ಮಾಡಿಕೊಂಡ ಎಡವಟ್ಟುಗಳು ಒಂದೆರಡಲ್ಲ. ಮೊದಲು ಸೀಮಿತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರವಾಸ ಭಾಗ್ಯ ಕಲ್ಪಿಸಿ ಉಗಿಸಿಕೊಂಡ ಬಳಿಕ ಯೋಜನೆ ಕೈಬಿಟ್ಟರು. ವಿಧಾನಸೌಧ ವಜ್ರ ಮಹೋತ್ಸವಕ್ಕೆ ಅಪಾರ ಹಣ ಖರ್ಚು ಮಾಡುವುದಾಗಿ ಘೋಷಿಸಿ, ಟೀಕೆಗಳು ವ್ಯಕ್ತವಾದ ಬಳಿಕ ಕಡಿಮೆ ಖರ್ಚಿನಲ್ಲಿ ಮಹೋತ್ಸವ ಆಚರಿಸಿದರು.

ಮೊದಲು ಹೊರಡಿಸಿದ ಸುತ್ತೋಲೆ

ಈಗ ಹಲವು ಗಲಾಟೆಗಳಲ್ಲಿ ಬರೀ ಅಲ್ಪಸಂಖ್ಯಾತರ ವಿರುದ್ಧವಷ್ಟೇ ದಾಖಲಾದ ಪ್ರಕರಣ ಕೈಬಿಡುವ ಸುತ್ತೋಲೆ ಹೊರಡಿಸಿ ಟೀಕೆಗೊಳಗಾದ ಬಳಿಕ ಮತ್ತೆ ತಮ್ಮ ತಪ್ಪು ತಿದ್ದಿಕೊಂಡಿದ್ದಾರೆ. ಆ ಮೂಲಕ ತಮ್ಮ ಸರ್ಕಾರ ಯೋಚನೆ ಮಾಡದೇ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಹೌದು, ಟಿಪ್ಪು ಜಯಂತಿ, ಕಾವೇರಿ ಗಲಾಟೆ ವೇಳೆ ಹಲವು ಅಲ್ಪಸಂಖ್ಯಾತರ ವಿರುದ್ಧದ ಪ್ರಕರಣ ಹಿಂಪಡೆಯುವ ಕುರಿತು ಸರ್ಕಾರ ಹೊರಡಿಸಿದ ಸುತ್ತೋಲೆಯನ್ನು ತಿದ್ದುಪಡಿ ಮಾಡಲಾಗಿದೆ. ಸುತ್ತೋಲೆಯಲ್ಲಿದ್ದ, “ಮುಗ್ಧ ಅಲ್ಪಸಂಖ್ಯಾತರು” ಎಂಬ ಪದವನ್ನು ಕಿತ್ತುಹಾಕಿ, “ಮುಗ್ಧ ಜನರು” ಎಂದು ಬದಲಾಯಿಸಿದ್ದಾರೆ.

ಆದರೆ ಮೊದಲು ಮುಖ್ಯಮಂತ್ರಿಯವರ ನಿರ್ಧಾರವನ್ನು ಬೆಂಬಲಿಸಿದ್ದ ಗೃಹಸಚಿವ ಕೆ.ಜೆ.ಜಾರ್ಜ್ ಅವರು ಈಗ ಯೂ ಟರ್ನ್ ತೆಗೆದುಕೊಂಡಿದ್ದು, “ಹಿಂದೆ ಕಣ್ತಪ್ಪಿನಿಂದ ಸುತ್ತೋಲೆಯಲ್ಲಿ ಮುಗ್ಧ ಅಲ್ಪಸಂಖ್ಯಾತರು ಎಂದು ಮುದ್ರಣವಾಗಿತ್ತು. ಈಗ ಸುತ್ತೋಲೆಯನ್ನು ತಿದ್ದುಪಡಿ ಮಾಡಲಾಗಿದೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಆದರೆ ಮುಗ್ಧ ಜನರು ಎಂದು ಇರುವ ಸುತ್ತೋಲೆಯಲ್ಲಿ ಹಿಂದೂಗಳ ವಿರುದ್ಧದ ಪ್ರಕರಣಗಳನ್ನೂ ವಾಪಸ್ ತೆಗೆದುಕೊಳ್ಳಲಾಗುತ್ತದೆ ಎಂಬುದರ ಕುರಿತು ಸ್ಪಷ್ಟನೆ ಇಲ್ಲದಿರುವುದು ಅನುಮಾನ ಹುಟ್ಟಿಸಿದೆ. ಈ ಕುರಿತು ರಾಜ್ಯ ಸರ್ಕಾರವೇ ಮಾಹಿತಿ ನೀಡಬೇಕಾಗಿದೆ.

0
Shares
  • Share On Facebook
  • Tweet It




Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search