• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಲಾಂ ಅವರಲ್ಲಿದ್ದ ಸರಳತೆ ನರೇಂದ್ರ ಮೋದಿ ಅವರಲ್ಲಿ ಕಂಡೆ ಎಂದು ಹೇಳಿದ್ದು ಯಾರು ಬಲ್ಲಿರಾ?

TNN Correspondent Posted On January 28, 2018


  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೆಂದೆರೇನೆ ಹಾಗೆ. ಅವರು ವಿಶ್ವದ ನಾಯಕರನ್ನೂ ಭಾರತದ ಗಣರಾಜ್ಯೋತ್ಸವಕ್ಕೆ ಕರೆಸಬಲ್ಲರು ಹಾಗೂ ಭಾರತದ ಸಾಮಾನ್ಯರೊಂದಿಗೆ ಸೇರಿ ಸಾಮಾನ್ಯರಾಗಿಯೂ ಬೆರೆಯಬಲ್ಲರು.

ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಈ ಮಾತು ನಿಜವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕರೀಮ್ ಉಲ್ ಹಕ್ ಅವರೊಂದಿಗೆ ಸೆಲ್ಫೀ ತೆಗೆಸಿಕೊಂಡಿದ್ದು ದೇಶದ ಗಮನ ಸೆಳೆದಿದೆ.

ಅಷ್ಟೇ ಅಲ್ಲ, “ನಾನು ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರಲ್ಲಿದ್ದ ಸರಳತೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಕಂಡೆ” ಎಂದು ಕರೀಮ್ ಉಲ್ ಹಕ್ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಜನತೆಗೆ ಉಚಿತವಾಗಿ ಬೈಕ್ ಸೇವೆ ನೀಡುವ ಮೂಲಕ ಕೇಂದ್ರ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದು, ಪ್ರಶಸ್ತಿ ಸ್ವೀಕರಿಸಿದ ಬಳಿಕ ಕರೀಮ್ ಉಲ್ ಹಕ್ ಮೋದಿ ಜತೆ ಸೆಲ್ಫೀ ತೆಗೆಸಿಕೊಂಡ ನಂತರ ಈ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ನಾನು ಈಗೀಗ ಸ್ಮಾರ್ಟ್ ಫೋನ್ ಬಳಸುತ್ತಿದ್ದೇನೆ. ನನಗೆ ಇನ್ನೂ ಸರಿಯಾಗಿ ಸೆಲ್ಫೀ ತೆಗೆದುಕೊಳ್ಳಲು ಬರುವುದಿಲ್ಲ. ಆದರೂ ಮೋದಿ ಅವರ ಜತೆ ಒಂದು ಸೆಲ್ಫೀ ತೆಗೆದುಕೊಳ್ಳಲು ಬಯಸಿದೆ. ಆಗ ಪ್ರಧಾನಿಯವರು ಅದಕ್ಕೆ ಒಪ್ಪಿದ್ದಲ್ಲದೆ, ಸೆಲ್ಫೀ ಹೇಗೆ ತೆಗೆಯಬೇಕು ಎಂಬುದನ್ನು ಸಹ ಕಲಿಸಿದರು. ಇದಕ್ಕಿಂತ ಸರಳತೆ ಇನ್ನೇನು ಬೇಕು ಎಂದು ಕರೀಂ ಉಲ್ಲಾ ಶ್ಲಾಘಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search