• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

1984ರ ಸಿಖ್ ಹತ್ಯೆ ವೇಳೆ ರಾಜೀವ್ ಗಾಂಧಿ ಮೇಲ್ವಿಚಾರಣೆ ಮಾಡುತ್ತಿದ್ದರು ಎಂದು ಹೇಳಿದ್ದು ಯಾರು ಗೊತ್ತೇ?

TNN Correspondent Posted On January 30, 2018
0


0
Shares
  • Share On Facebook
  • Tweet It

ದೆಹಲಿ: 1984ರಲ್ಲಿ ಅಂದಿನ ಪ್ರಧಾನಿಯಾಗಿದ್ದ ಇಂದಿರಾಗಾಂಧಿ ಹತ್ಯೆಯಾದ ಬಳಿಕ ದೆಹಲಿ ಸೇರಿ ದೇಶದ ಹಲವೆಡೆ ಮೂರು ಸಾವಿರಕ್ಕೂ ಅಧಿಕ ಸಿಖ್ಖರ ಮಾರಣಹೋಮವಾಗಿದ್ದು ದೇಶದ ಇತಿಹಾಸದಲ್ಲಿ ಕರಾಳ ಅಧ್ಯಾಯ.

ಈ ಅಧ್ಯಾಯದ ಕೆಲವೊಂದಿಷ್ಟು ಪುಟಗಳನ್ನು ಪಂಜಾಬಿನ ಮಾಜಿ ಉಪ ಮುಖ್ಯಮಂತ್ರಿ, ಅಕಾಲಿದಳ ಪಕ್ಷದ ಮುಖಂಡ ಸುಖಬೀರ್ ಸಿಂಗ್ ಬಾದಲ್ ಅವರು ತೆರೆದಿದ್ದು, “ಸಿಖ್ಖರ ಹತ್ಯೆಗೆ ರಾಜೀವ್ ಗಾಂಧಿ ಅವರ ಮೇಲ್ವಿಚಾರಣೆ ಇತ್ತು” ಎಂದು ಆರೋಪಿಸುವ ಮೂಲಕ ಹಳೆ ಘಟನೆಗೆ ಹೊಸ ತಿರುವು ನೋಡಿದ್ದಾರೆ.

ಅಲ್ಲದೆ ಈ ಕುರಿತು ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಅವರ ಹೇಳಿಕೆಯನ್ನು ಉಲ್ಲೇಖಿಸಿರುವ ಬಾದಲ್, “ಹತ್ಯೆ ನಡೆಯುತ್ತಿದ್ದ ವೇಳೆ ರಾಜೀವ್ ಗಾಂಧಿ ಅವರು ದೆಹಲಿಯ ಹಲವು ಪ್ರದೇಶಗಳಲ್ಲಿ ಸುತ್ತಾಡಿದ್ದಾರೆ” ಎಂದು ಟೈಟ್ಲರ್ ಹೇಳಿದ್ದಾರೆ. ಹಾಗಾದರೆ ಹತ್ಯೆಗೆ ರಾಜೀವ್ ಮೇಲ್ವಿಚಾರಣೆ ಇತ್ತು ಎಂದಾಯಿತಲ್ಲ ಎಂದು ಬಾದಲ್ ಹೇಳಿಕೆ ನೀಡಿದ್ದಾರೆ.

ಅಲ್ಲದೆ ಇದೊಂದು ಗಂಭೀರ ಪ್ರಕರಣವಾಗಿದ್ದು, ಜಗದೀಶ್ ಟೈಟ್ಲರ್ ಅವರು ಹೇಳಿರುವ ಹೇಳಿಕೆಯನ್ನು ಪಡೆದು ಕೇಂದ್ರ ತನಿಖಾ ದಳ ಈ ಕುರಿತು ಸಮಗ್ರವಾಗಿ ತನಿಖೆ ಮಾಡಬೇಕು ಎಂದು ಸಹ ಬಾದಲ್ ಒತ್ತಾಯಿಸಿದ್ದಾರೆ.

ಇದೇ ತಿಂಗಳು ಸಿಖ್ಖರ ಹತ್ಯೆ ಆರೋಪದಲ್ಲಿ ಸಿಲುಕಿದ 186 ಜನರ ವಿರುದ್ಧದ ಪ್ರಕರಣಗಳನ್ನು ಮರುತನಿಖೆ ಮಾಡಲು ಸುಪ್ರೀಂ ಕೋರ್ಟ್ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿರುವ ಬೆನ್ನಲ್ಲೇ ಟೈಟ್ಲರ್ ಹಾಗೂ ಬಾದಲ್ ಅವರು ಈ ಹೇಳಿಕೆ ನೀಡಿದ್ದು, ಪ್ರಕರಣಕ್ಕೆ ಹಲವು ತಿರುವು ಸಿಗುವ ಲಕ್ಷಣಗಳನ್ನು ಅಲ್ಲಗಳೆಯುವಂತಿಲ್ಲ.

ಆದಾಗ್ಯೂ, “ದೊಡ್ಡ ಆಲದ ಮರ ಉರುಳಿದಾಗ, ಭೂಮಿ ನಲುಗುವುದು ಸಹಜ” ಎಂದು ಇಂದಿರಾ ಗಾಂಧಿ ಹತ್ಯೆಯಾದ ಬಳಿಕ ಉಂಟಾದ ಗಲಭೆ ಕುರಿತು ರಾಜೀವ್ ಗಾಂಧಿ ಈ ಮಾತು ಹೇಳುವ ಮೂಲಕ ಹತ್ಯಾಕಾಂಡ ಸ್ಪಷ್ಟಪಡಿಸಿಕೊಂಡಿದ್ದರು ಎಂಬ ಮಾತು ಸಹ ಚಾಲ್ತಿಯಲ್ಲಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search