• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

1984ರ ಸಿಖ್ ಹತ್ಯೆ ವೇಳೆ ರಾಜೀವ್ ಗಾಂಧಿ ಮೇಲ್ವಿಚಾರಣೆ ಮಾಡುತ್ತಿದ್ದರು ಎಂದು ಹೇಳಿದ್ದು ಯಾರು ಗೊತ್ತೇ?

TNN Correspondent Posted On January 30, 2018
0


0
Shares
  • Share On Facebook
  • Tweet It

ದೆಹಲಿ: 1984ರಲ್ಲಿ ಅಂದಿನ ಪ್ರಧಾನಿಯಾಗಿದ್ದ ಇಂದಿರಾಗಾಂಧಿ ಹತ್ಯೆಯಾದ ಬಳಿಕ ದೆಹಲಿ ಸೇರಿ ದೇಶದ ಹಲವೆಡೆ ಮೂರು ಸಾವಿರಕ್ಕೂ ಅಧಿಕ ಸಿಖ್ಖರ ಮಾರಣಹೋಮವಾಗಿದ್ದು ದೇಶದ ಇತಿಹಾಸದಲ್ಲಿ ಕರಾಳ ಅಧ್ಯಾಯ.

ಈ ಅಧ್ಯಾಯದ ಕೆಲವೊಂದಿಷ್ಟು ಪುಟಗಳನ್ನು ಪಂಜಾಬಿನ ಮಾಜಿ ಉಪ ಮುಖ್ಯಮಂತ್ರಿ, ಅಕಾಲಿದಳ ಪಕ್ಷದ ಮುಖಂಡ ಸುಖಬೀರ್ ಸಿಂಗ್ ಬಾದಲ್ ಅವರು ತೆರೆದಿದ್ದು, “ಸಿಖ್ಖರ ಹತ್ಯೆಗೆ ರಾಜೀವ್ ಗಾಂಧಿ ಅವರ ಮೇಲ್ವಿಚಾರಣೆ ಇತ್ತು” ಎಂದು ಆರೋಪಿಸುವ ಮೂಲಕ ಹಳೆ ಘಟನೆಗೆ ಹೊಸ ತಿರುವು ನೋಡಿದ್ದಾರೆ.

ಅಲ್ಲದೆ ಈ ಕುರಿತು ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಅವರ ಹೇಳಿಕೆಯನ್ನು ಉಲ್ಲೇಖಿಸಿರುವ ಬಾದಲ್, “ಹತ್ಯೆ ನಡೆಯುತ್ತಿದ್ದ ವೇಳೆ ರಾಜೀವ್ ಗಾಂಧಿ ಅವರು ದೆಹಲಿಯ ಹಲವು ಪ್ರದೇಶಗಳಲ್ಲಿ ಸುತ್ತಾಡಿದ್ದಾರೆ” ಎಂದು ಟೈಟ್ಲರ್ ಹೇಳಿದ್ದಾರೆ. ಹಾಗಾದರೆ ಹತ್ಯೆಗೆ ರಾಜೀವ್ ಮೇಲ್ವಿಚಾರಣೆ ಇತ್ತು ಎಂದಾಯಿತಲ್ಲ ಎಂದು ಬಾದಲ್ ಹೇಳಿಕೆ ನೀಡಿದ್ದಾರೆ.

ಅಲ್ಲದೆ ಇದೊಂದು ಗಂಭೀರ ಪ್ರಕರಣವಾಗಿದ್ದು, ಜಗದೀಶ್ ಟೈಟ್ಲರ್ ಅವರು ಹೇಳಿರುವ ಹೇಳಿಕೆಯನ್ನು ಪಡೆದು ಕೇಂದ್ರ ತನಿಖಾ ದಳ ಈ ಕುರಿತು ಸಮಗ್ರವಾಗಿ ತನಿಖೆ ಮಾಡಬೇಕು ಎಂದು ಸಹ ಬಾದಲ್ ಒತ್ತಾಯಿಸಿದ್ದಾರೆ.

ಇದೇ ತಿಂಗಳು ಸಿಖ್ಖರ ಹತ್ಯೆ ಆರೋಪದಲ್ಲಿ ಸಿಲುಕಿದ 186 ಜನರ ವಿರುದ್ಧದ ಪ್ರಕರಣಗಳನ್ನು ಮರುತನಿಖೆ ಮಾಡಲು ಸುಪ್ರೀಂ ಕೋರ್ಟ್ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿರುವ ಬೆನ್ನಲ್ಲೇ ಟೈಟ್ಲರ್ ಹಾಗೂ ಬಾದಲ್ ಅವರು ಈ ಹೇಳಿಕೆ ನೀಡಿದ್ದು, ಪ್ರಕರಣಕ್ಕೆ ಹಲವು ತಿರುವು ಸಿಗುವ ಲಕ್ಷಣಗಳನ್ನು ಅಲ್ಲಗಳೆಯುವಂತಿಲ್ಲ.

ಆದಾಗ್ಯೂ, “ದೊಡ್ಡ ಆಲದ ಮರ ಉರುಳಿದಾಗ, ಭೂಮಿ ನಲುಗುವುದು ಸಹಜ” ಎಂದು ಇಂದಿರಾ ಗಾಂಧಿ ಹತ್ಯೆಯಾದ ಬಳಿಕ ಉಂಟಾದ ಗಲಭೆ ಕುರಿತು ರಾಜೀವ್ ಗಾಂಧಿ ಈ ಮಾತು ಹೇಳುವ ಮೂಲಕ ಹತ್ಯಾಕಾಂಡ ಸ್ಪಷ್ಟಪಡಿಸಿಕೊಂಡಿದ್ದರು ಎಂಬ ಮಾತು ಸಹ ಚಾಲ್ತಿಯಲ್ಲಿದೆ.

0
Shares
  • Share On Facebook
  • Tweet It




Trending Now
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Tulunadu News September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
  • Popular Posts

    • 1
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 2
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 3
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 4
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 5
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ

  • Privacy Policy
  • Contact
© Tulunadu Infomedia.

Press enter/return to begin your search