• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ತ್ರಿವಳಿ ತಲಾಖ್ ಗೆ ಕೊನೆ ಮೊಳೆ ಹೊಡೆಯುವವರೆಗೆ ಹೋರಾಟ ಎಂದವರಾರು ಗೊತ್ತೆ..?

TNN Correspondent Posted On January 30, 2018


  • Share On Facebook
  • Tweet It

ಮಲ್ಲಪುರಂ: ಮುಸ್ಲಿಂ ಮಹಿಳೆಯರನ್ನು ಮದುವೆ ಮಾಡಿಕೊಂಡು ಬೀದಿಗೆ ತಳ್ಳುತ್ತಿರುವ ಕೊಳಕು ಪದ್ಧತಿಯಾದ ತ್ರಿವಳಿ ತಲಾಖ್ ನ್ನು ನಿಷೇಧಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಆದರೆ ವಿರೋಧ ಪಕ್ಷಗಳು ಮುಸ್ಲಿಂ ಮಹಿಳೆಯರನ್ನು ರಕ್ಷಿಸುವ ತ್ರಿವಳಿ ತಲಾಖ್ ನಿಷೇಧದ ಮಸೂದೆಗೆ ಅಡ್ಡಿಪಡಿಸುತ್ತಿವೆ. ಆದರೆ ಇದೀಗ ಮುಸ್ಲಿಂ ಮಹಿಳೆಯರು ಜಾಗೃತಿಯಾಗಿದ್ದು, ತ್ರಿವಳಿ ತಲಾಖ್ ನಿಷೇಧವಾಗುವವರೆಗೆ ಹೋರಾಟ ಮುಂದುವರಿಸುತ್ತೇನೆ ಎಂದು ಪಣ ತೊಟ್ಟಿದ್ದಾರೆ. ಇದೀಗ ಅವರ ಸಾಲಿಗೆ ಸೇರಿರುವುದು ದೇಶದ ಪ್ರಥಮ ಮುಸ್ಲಿಂ ಇಮಾಮ್ ಆಗಿ ನೇಮಕವಾಗಿರುವ ಜಮೀದಾ.

ಪುರುಷರಿಗಷ್ಟೇ ಸೀಮಿತವಾಗಿದ್ದ ಇಮಾಮ್ ಸ್ಥಾನವನ್ನು ಆಕ್ರಮಿಸಿಕೊಂಡಿರುವ ಜಮೀದಾ ತ್ರಿವಳಿ ತಲಾಖ್ ನಿಷೇಧ ಮಾಡುವವರೆಗೆ ಹೋರಾಟ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಖುರಾನ್ ಸುನ್ನತ್ ಸೊಸೈಟಿಯ ರಾಜ್ಯ ಕಾರ್ಯದರ್ಶಿಯಾಗಿರುವ ಜಮೀದಾ ಭಾರತದ ಇತಿಹಾಸದಲ್ಲೆ ಮೊದಲ ಬಾರಿಗೆ ಇಮಾಮ್ ಆಗಿ ಕಾರ್ಯನಿರ್ವಹಿಸುವ ಜವಾಬ್ದಾರಿ ಹೊತ್ತಿದ್ದಾರೆ. ಶುಕ್ರವಾರದ ಪ್ರಾರ್ಥನೆಯನ್ನು ಜಮಿದಾ ನೇತೃತ್ವಹಿಸಿಕೊಳ್ಳುವ ಮೂಲಕ ಮುಸ್ಲಿಂ ವ್ಯವಸ್ಥೆಯಲ್ಲಿದ್ದ ಪುರುಷ ಪ್ರಧಾನ ಪದ್ಧತಿಗೆ ಕೊನೆ ಮೊಳೆ ಹೊಡೆದಿದ್ದು, ತ್ರಿವಳಿ ತಲಾಖ್ ಪದ್ಧತಿ ನಿಷೇಧದವರೆಗೆ ವಿರಮಿಸುವುದಿಲ್ಲ ಎಂದು ಘೋಷಿಸಿದ್ದಾರೆ.

ಜಮೀದಾ ಅವರ ಈ ದಿಟ್ಟ ನಿಲುವುಗಳಿಂದ ಕೆಲವು ಮುಸ್ಲಿಂ ಮೂಲಭೂತವಾದಿಗಳು ಬೆದರಿಕೆ ಒಡ್ಡಿದ್ದು, ಅವರ ಮೇಲೆ ದಾಳಿ, ಹಲ್ಲೆ ನಡೆಸಲು ಕೂಡ ಯತ್ನಿಸಿದ್ದಾರೆ. ಆದರೆ ವಿರೋಧಿಗಳಿಗೆ ತಕ್ಕ ಉತ್ತರ ನೀಡಿರುವ ಜಮೀದಾ ಇಮಾಮ್ ಕೇವಲ ಪುರುಷರಷ್ಠೇ ಆಗಬೇಕು ಎಂಬ ನಿಯಮ ಷರಿಯಾದಲ್ಲಿ ಇಲ್ಲ ಎಂದು ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆ ನಿಷೇಧಕ್ಕೆ ಪ್ರಧಾನಿ ನರೇಂದ್ರ ಮೋದಿ ಶ್ರಮಿಸುತ್ತಿರುವುದಕ್ಕೆ ಜಮೀದಾ ಬೆಂಬಲ ವ್ಯಕ್ತಪಡಿಸಿದ್ದು. ತ್ರಿವಳಿ ತಲಾಖ್ ಪದ್ಧತಿಗೆ ಕಡಿವಾಣ ಬೀಳುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search