• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಕ್ಕಳಾಗಿಲ್ಲ ಎಂದು ಫೋನ್ ಮೂಲಕ ತಲಾಖ್

TNN Correspondent Posted On January 30, 2018


  • Share On Facebook
  • Tweet It

ಲಖನೌ: ತ್ರಿವಳಿ ತಲಾಖ್ ನಿಷೇಧ ಮಸೂದೆ ಕೇಂದ್ರ ಸರ್ಕಾರ ಶ್ರಮಿಸುತ್ತೀರುವಾಗಲೇ ಮತ್ತೊಂದು ತ್ರಿವಳಿ ತಲಾಖ್ ಘಟನೆ ಬಹಿರಂಗವಾಗಿದೆ. ಉತ್ತರ ಪ್ರದೇಶದ ಬಾರಾಬಂಕಿಯ ಬಡಪುರ ಕ್ಷೇತ್ರದ ಸಲೇಮಪುರದಲ್ಲಿ ಮಕ್ಕಳು ಆಗಲಿಲ್ಲ ಎಂದು ಪತ್ನಿಗೆ ಪತಿ ಫೋನ್ ನಿಂದಲೇ ತ್ರಿವಳಿ ತಲಾಖ್ ನೀಡಿ, ಧರ್ಪ ಮೆರೆದಿದ್ದಾನೆ.

ಮದುವೆಯಾಗಿ ಐದು ವರ್ಷವಾದರೂ ಮಕ್ಕಳಿಗೆ ಜನ್ಮ ನೀಡಿಲ್ಲ ಎಂದು ಅಮರಿನ್ ಬಾನೋ ಎಂಬ ಮಹಿಳೆಗೆ ಪತಿ ಮೋಬಿನ್ ಫೋನ್ ಮೂಲಕ ತಲಾಖ್ ನೀಡಿದ್ದು, ಇದೀಗ ಮಹಿಳೆ ಬೀದಿಗೆ ಬರುವ ಸ್ಥಿತಿ ನಿರ್ಮಾಣವಾಗಿದೆ. ಪೊಲೀಸರು ತಲಾಖ್ ನೀಡಿರುವ ಮೋಬಿನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯ ಪತ್ತೆಗೆ ಜಾಲ ಬೀಸಿದ್ದಾರೆ.

ಗುಜರಾತ್ ನಲ್ಲಿ ಟ್ರಕ್ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿರುವ ಮೋಬಿನ್ ಫೋನ್ ಮೂಲಕ ತಲಾಖ್ ನೀಡಿದ್ದಲ್ಲದೇ, ಅಲ್ಲೇ ಮತ್ತೊಬ್ಬ ಮಹಿಳೆಯೊಂದಿಗೆ ಮದುವೆಯಾಗುತ್ತಿರುವುದಾಗಿ ತಿಳಿಸಿದ್ದಾನೆ. ಇದರಿಂದ ಕಂಗಾಲಾಗಿರುವ ಮಹಿಳೆ ಜನವರಿ 25ರಂದು ಪೊಲೀಸರಿಗೆ ದೂರು ನೀಡಿದ್ದಾಳೆ.

ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದು ಗುಜರಾತ್ ನ ಅಹ್ಮದಾಬಾದ್ ನಲ್ಲಿ ಟ್ರಕ್ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿರುವುದನ್ನು ಪತ್ತೇ ಹಚ್ಚಿದ್ದಾರೆ. ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈ ಕುರಿತು ಪೀಡಿತ ಮಹಿಳೆ ಮತ್ತು ಅವಳ ತಾಯಿ ನಿತ್ಯ ಕಣ್ಣೀರಿಡುತ್ತಿದ್ದು ‘ಐದು ವರ್ಷದ ಹಿಂದೆ ನನ್ನ ಮಗಳನ್ನು ಮೋಬಿನ್ ಮದುವೆಯಾಗಿದ್ದ. ಎರಡು ವರ್ಷದ ವರೆಗೆ ಎಲ್ಲವೂ ಚೆನ್ನಾಗಿತ್ತು. ಆದರೆ ನಂತರ ಗಂಡು ಮಗು ಆಗಲಿಲ್ಲ ಎಂದು ಮೋಬಿನ್ ಮಗಳ ಜತೆ ಜಗಳ ತೆಗೆಯುತ್ತಿದ್ದ, ಕಿರುಕುಳ ನೀಡುತ್ತಿದ್ದ. ಅದನ್ನು ಸಹಿಸಿಕೊಂಡು ಮಗಳು ಇದ್ದಳು. ಆದರೆ ಇದೀಗ ತಲಾಖ್ ನೀಡಿದ್ದರಿಂದ ನನ್ನ ಮಗಳು ಬೀದಿಗೆ ಬರುವಂತಾಗಿದೆ ಎಂದು ಅಮರಿನ್ ಬಾನೋ ತಾಯಿ ದುಖಿಃಸುತ್ತಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search