• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತೀಯ ಮುಸ್ಲಿಮರು ಪ್ರತ್ಯೇಕ ರಾಷ್ಟ್ರದ ಬೇಡಿಕೆ ಇಡಬೇಕಂತೆ, ಇದೆಂಥಾ ದಾರಿದ್ರ್ಯ?

TNN Correspondent Posted On January 31, 2018
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮೀರದ ವಿಷಯದಲ್ಲಿ ಯಾವಾಗ ಮೂಗು ತೂರಿಸಲು ಆರಂಭಿಸಿತೋ, ಯಾವಾಗ ಶೇಖ್ ಅಬ್ದುಲ್ಲಾ (ಮಾಜಿ ಮುಖ್ಯಮಂತ್ರಿ, ಫಾರೂಕ್ ಅಬ್ದುಲ್ಲಾ ತಂದೆ) ಪಾಕಿಸ್ತಾನದ ಕೈಗೊಂಬೆಯಾಯಿತೋ ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು, ಉಗ್ರರ ಅಡಿಯಾಳುಗಳು, ಕಲ್ಲು ತೂರಾಟಗಾರರು ಉದಯಿಸಿದರು. ಸ್ವಾತಂತ್ರ್ಯ ಬಳಿಕ ನೆಹರೂ, ಶೇಖ್ ಅಬ್ದುಲ್ಲಾ ಮಾಡಿದ ತಪ್ಪಿಗೆ ಇಂದಿಗೂ ಕಾಶ್ಮೀರ ಪರಿತಪಿಸುತ್ತಿದೆ.

ಇದಕ್ಕೆ ಮುನ್ನುಡಿಯಾಗಿ ಜಮ್ಮು ಕಾಶ್ಮೀರದ ಡೆಪ್ಯೂಟಿ, ಜಮ್ಮು-ಕಾಶ್ಮೀರ ಮುಸ್ಲಿಂ ವೈಯಕ್ತಿಕ ಮಂಡಳಿ ಉಪಾಧ್ಯಕ್ಷ ನಾಸೀರ್ ಉಲ್ ಇಸ್ಲಾಂ ತನ್ನ ಎಲುಬಿಲ್ಲದ ನಾಲಗೆ ಹರಿಬಿಟ್ಟಿದ್ದು, “ಭಾರತೀಯ ಮುಸ್ಲಿಮರೆಲ್ಲರೂ ಒಗ್ಗೂಡಿ ಪ್ರತ್ಯೇಕ ರಾಷ್ಟ್ರದ ಬೇಡಿಕೆ ಇಡಬೇಕು” ಎಂದು ಹೇಳಿಕೆ ನೀಡುವ ಮೂಲಕ ಉದ್ಧಟತನ ಮೆರೆದಿದ್ದಾನೆ.

ಸುದ್ದಿಗಾರರೊಂದಿಗೆ ಮಾತನಾಡಿದ ಆತ, “ಭಾರತದಲ್ಲಿ ಲವ್ ಜಿಹಾದ್ ಹಾಗೂ ಗೋ ರಕ್ಷಣೆ ಹೆಸರಲ್ಲಿ ಮುಸ್ಲಿಮರ ಮೇಲೆ ಹಲ್ಲೆಗಳಾಗುತ್ತಿವೆ. ದೇಶದಲ್ಲಿ 2ನೇ ಅತಿಹೆಚ್ಚು ಜನಸಂಖ್ಯೆಯಾಗಿ ಮುಸ್ಲಿಮರಿದ್ದೇವೆ. ಆದರೂ ಹಲ್ಲೆಯಾಗುತ್ತಿದೆ. ಪಾಕಿಸ್ತಾನ ಕೇವಲ 17 ಕೋಟಿ ಜನಸಂಖ್ಯೆಯನ್ನಿಟ್ಟುಕೊಂಡು ಪ್ರತ್ಯೇಕ ರಾಷ್ಟ್ರವಾಯಿತು. ಹಾಗೆಯೇ ಭಾರತದಲ್ಲಿ ಮುಸ್ಲಿಮರಿಗೆ ಭದ್ರತೆ ಇಲ್ಲವೆಂತಾದರೆ ಪ್ರತ್ಯೇಕ ರಾಷ್ಟ್ರಕ್ಕಾಗಿ ಬೇಡಿಕೆ ಇಡಬೇಕು” ಎಂದಿದ್ದಾನೆ.

ಪ್ರಸ್ತುತ ಭಾರತೀಯ ಮುಸ್ಲಿಮರು ಭೀತಿಯಲ್ಲೇ ಬದುಕುತ್ತಿದ್ದಾರೆ. ಸರ್ಕಾರ ನಮ್ಮ ಧ್ವನಿಯನ್ನು ಕೇಳುತ್ತಿಲ್ಲ. ಹಾಗಾಗಿ ನಮ್ಮ ಮುಂದೆ ಪ್ರತ್ಯೇಕ ರಾಷ್ಟ್ರದ ಕೂಗು ಬಿಟ್ಟರೆ ಬೇರಾವ ದಾರಿಯಿದೆ? ಎಂದು ನಾಸೀರ್ ಪ್ರಶ್ನಿಸಿದ್ದಾನೆ.

ಆದರೆ ನಾಸೀರ್ ಹೇಳಿದಂತೆ ಭಾರತದಲ್ಲಿ ಮುಸ್ಲಿಮರಿಗೆ ಯಾವ ಭೀತಿಯಿದೆ? ಮುಸ್ಲಿಂ ಮಹಿಳೆಯರಿಗೆ ಅಡ್ಡವಾಗಿದ್ದ ತ್ರಿವಳಿ ತಲಾಖ್ ರದ್ದುಗೊಳಿಸಲು ಕೇಂದ್ರ ಸರ್ಕಾರ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಹಜ್ ಯಾತ್ರೆ ಸಬ್ಸಿಡಿ ಹಣವನ್ನು ಮುಸ್ಲಿಂ ಮಹಿಳೆಯರ ಶಿಕ್ಷಣಕ್ಕೆ ಮೀಸಲಿಡುವುದಾಗಿ ಘೋಷಿಸಿದೆ. ಗೋ ರಕ್ಷಣೆ ಹೆಸರಲ್ಲಿ ಅಹಿಂಸೆ ಕೂಡದು ಎಂದು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಎಚ್ಚರಿಸಿದ್ದಾರೆ.

ಭಾರತದಲ್ಲಿ ಮುಸ್ಲಿಮರಿಗೆ ಇಷ್ಟೆಲ್ಲ ಸೌಲಭ್ಯವಿರುವಾಗ, ಸರ್ಕಾರದ ಅಭಯ ಇರುವಾಗ ನಾಸೀರ್ ನಂಥ ಕುತ್ಸಿತ ಮನಸ್ಸಿನವರು ಪ್ರತ್ಯೇಕ ರಾಷ್ಟ್ರದ ಕರೆ ನೀಡುತ್ತಾರೆ ಎಂದರೆ ಇದೆಂಥ ಬೌದ್ಧಿಕ ದಾರಿದ್ರ್ಯ ಇರಬೇಕು? ನಾಚಿಕೆಯಾಗಬೇಕು ಇವರಿಗೆ. ಇಂಥಾ ಮನಸ್ಥಿತಿಗಳ ವಿರುದ್ಧ ಮಾತನಾಡುವ ತಾಕತ್ತು ಆ ಪ್ರಕಾಶ್ ರೈಗಿದೆಯೋ?

0
Shares
  • Share On Facebook
  • Tweet It




Trending Now
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Tulunadu News September 16, 2025
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
  • Popular Posts

    • 1
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 2
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 3
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 4
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 5
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search