• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಖ್ಯಮಂತ್ರಿಯವರೇ ಈ ಸರ್ಕಾರಿ, ಅನುದಾನಿತ ಶಾಲೆಯ ಮಕ್ಕಳ ಪರಿಸ್ಥಿತಿ ಬಗ್ಗೆ ಏನು ಹೇಳುತ್ತೀರಿ?

TNN Correspondent Posted On February 1, 2018
0


0
Shares
  • Share On Facebook
  • Tweet It

ಬೆಂಗಳೂರು: ಕಳೆದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಕರ್ನಾಟಕಕ್ಕೆ ಬಂದು ರಾಜ್ಯ ಸರ್ಕಾರದ ವೈಫಲ್ಯದ ಕುರಿತು ಮಾತನಾಡಿದ್ದಕ್ಕೇ ಕೆಂಡಾಮಂಡಲರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಇದು ಕನ್ನಡರಿಗೆ ಮಾಡುವ ಅನ್ಯಾಯ” ಎಂದುಬಿಟ್ಟರು.

ಆದರೆ ಇಂಥ ಕನ್ನಡ ಪ್ರೇಮಿ ಸಿದ್ದರಾಮಯ್ಯನವರು ರಾಜ್ಯದ ಕನ್ನಡ ಶಾಲೆಗಳು ಅರ್ಥಾತ್ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪರಿಸ್ಥಿತಿ ಹದಗೆಟ್ಟಿದ್ದರೂ, ಸಿಎಂ ಏಕೆ ಈ ಶಾಲೆಗಳತ್ತ ಗಮನಹರಿಸುತ್ತಿಲ್ಲ ಎಂಬ ಪ್ರಶ್ನೆ ಮೂಡಿದೆ.

ಹೌದು, ಸ್ಟೇಟ್ ಅಚೀವ್ ಮೆಂಟ್ ಸರ್ವೇ (ಎಸ್ ವಿಎಸ್) ಸಂಸ್ಥೆ ಕಳೆದ ವರ್ಷದ ನವೆಂಬರ್ ನಲ್ಲಿ ನಡೆಸಿದ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ನಾಲ್ಕರಿಂದ ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಸುಮಾರು 10 ಲಕ್ಷ ವಿದ್ಯಾರ್ಥಿಗಳು ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ತರಗತಿಯ ಅವಶ್ಯವಿದೆ ಎಂದು ತಿಳಿಸಿದ್ದು, ಕನ್ನಡ ಶಾಲೆಗಳ ವೈಫಲ್ಯ ಎತ್ತಿ ತೋರಿಸುವಂತಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಇದೇ ಮೊದಲ ಬಾರಿಗೆ ಎಸ್ ವಿಎಸ್ ಸಂಸ್ಥೆಯಿಂದ ಸಮೀಕ್ಷೆ ನಡೆಸಿದ್ದು, ರಾಜ್ಯದ ಸುಮಾರು 36 ಲಕ್ಷ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ವಿದ್ಯಾರ್ಥಿಗಳನ್ನು ಸಂದರ್ಶಿಸಿದ್ದು, ಬಹುತೇಕ ವಿದ್ಯಾರ್ಥಿಗಳು ತಮಗೆ  ವಿಶೇಷ ತರಗತಿಗಳ ಅಗತ್ಯವಿದ್ದಾರೆ ಎಂದು ತಿಳಿಸಿದ್ದಾರೆ ಎಂಬುದಾಗಿ ವರದಿಯಲ್ಲಿ ತಿಳಿಸಲಾಗಿದೆ.

ಈ ಎಲ್ಲ ವಿದ್ಯಾರ್ಥಿಗಳಲ್ಲಿ ಬಹುತೇಕ ವಿದ್ಯಾರ್ಥಿಗಳು ವಿಶೇಷ ತರಗತಿಗಳ ಕೊರತೆ, ಶಾಲಾ ಕೊಠಡಿ, ವಿಜ್ಞಾನ ಹಾಗೂ ಇಂಗ್ಲಿಷ್ ವಿಷಯದ ಕಠಿಣತೆ ಬಿಡಿಸಲು ಸಂಪನ್ಮೂಲ ಶಿಕ್ಷಕರ ಅಭಾವವಿದೆ ಎಂದು ತಿಳಿಸಿರುವುದು ರಾಜ್ಯ ಸರ್ಕಾರ ಎಷ್ಟರಮಟ್ಟಿಗೆ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ನಿರ್ವಹಣೆ ಮಾಡುತ್ತಿದೆ ಎಂಬುದು ಬಹಿರಂಗವಾಗಿದೆ.

36 ಲಕ್ಷ ವಿದ್ಯಾರ್ಥಿಗಳಲ್ಲಿ 4.22 ಲಕ್ಷ ವಿದ್ಯಾರ್ಥಿಗಳು ತಮಗೆ ವಿಜ್ಞಾನ ಬೋಧಿಸುವ ಸಮರ್ಥ ಶಿಕ್ಷಕರ ಕೊರತೆ ಇದೆ ಎಂದು ತಿಳಿಸಿದ್ದರೆ, 4.61 ಲಕ್ಷ ವಿದ್ಯಾರ್ಥಿಗಳು ಇಂಗ್ಲಿಷ್ ವಿಷಯ ಕಷ್ಟವಾಗುತ್ತಿದೆ ಎಂದಿದ್ದಾರೆ. ಇನ್ನು ಗಣಿತ, ತೃತೀಯ ಭಾಷೆ, ಸಮಾಜ ವಿಜ್ಞಾನ ವಿಷಯಗಳು ಸಹ ಕಠಿಣವಾಗುತ್ತಿವೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದು ನಾಲ್ಕೂವರೆ ವರ್ಷವಾದರೂ ಕನ್ನಡ ಶಾಲೆಗಳ ವಿದ್ಯಾರ್ಥಿಗಳಿಗೆ ಸಮರ್ಪಕ ಶಿಕ್ಷಣ ವಾತಾವರಣ ನಿರ್ಮಿಸದೇ ಇರುವುದು ದುರಂತ. ಚುನಾವಣೆ ಹಿನ್ನೆಲೆ ಬ್ಯುಸಿಯಾಗಿರುವ ಸಿದ್ದರಾಮಯ್ಯನವರಿಗೆ ಇದು ತಿಳಿಯುತ್ತಾ? ಇನ್ನಾದರೂ ಕ್ರಮ ಕೈಗೊಳ್ಳಲಿದ್ದಾರಾ?

0
Shares
  • Share On Facebook
  • Tweet It




Trending Now
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Tulunadu News February 11, 2026
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
  • Popular Posts

    • 1
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 2
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 3
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search