• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಆಗಮನಕ್ಕೆ ಅರಮನೆ ಮೈದಾನ ಸಜ್ಜು, ಸರ್ಕಾರದ ತಂತ್ರ ನುಜ್ಜು ನುಜ್ಜು!

TNN Correspondent Posted On February 2, 2018
0


0
Shares
  • Share On Facebook
  • Tweet It

ಬೆಂಗಳೂರು: ಜನವರಿ 25ರಂದು ರಾಜ್ಯಕ್ಕೆ ಅಮಿತ್ ಶಾ ಆಗಮನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬಂದ್ ಮಾಡಿಸಿ ಉಪಟಳ ಮಾಡಿದರೂ ಅಪಾರ ಜನ ಸೇರಿ ರಾಜ್ಯ ಸರ್ಕಾರಕ್ಕೆ ಮುಖಭಂಗ ಮಾಡಿದ ಬೆನ್ನಲ್ಲೇ, ಫೆ.4ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದು, ಅರಮನೆ ಮೈದಾನ ಸಜ್ಜಾಗಿದೆ.

ಭಾನುವಾರ ಅರಮನೆ ಮೈದಾನದಲ್ಲಿ ನಡೆಯುವ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಮೋದಿ ಆಗಮಿಸಲಿದ್ದು, ರಾಜ್ಯ ಬಿಜೆಪಿಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಅಂತಿಮ ಹಂತ ತಲುಪಿದೆ.

ಬಂದ್ ನಡುವೆಯೇ ಜನಸಾಗರ

ಮೋದಿ ಆಗಮನದ ಹಿನ್ನೆಲೆಯಲ್ಲಿ ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕನ್ನಡಪರ ಸಂಘಟನೆಗಳು ಭಾನುವಾರವೂ ಬಂದ್ ಗೆ ಕರೆ ನೀಡಿದ್ದು, ಇದರ ಹಿಂದೆ ರಾಜ್ಯ ಸರ್ಕಾರದ ಷಡ್ಯಂತ್ರವಿದೆ ಎಂಬ ಆರೋಪವಿದೆ. ಆದರೆ ಇದಕ್ಕೆ ಸೆಡ್ಡು ಹೊಡೆದಿರುವ ಬಿಜೆಪಿ ಬಂದ್ ಇದ್ದರೂ ಸುಮಾರು 4 ಲಕ್ಷ ಜನರನ್ನು ಒಗ್ಗೂಡಿಸುವ ಯೋಜನೆ ರೂಪಿಸಿದೆ. ನಿರೀಕ್ಷೆಯಷ್ಟು ಜನ ಬಂದರೆ ಅಲ್ಲಿಗೆ ಸರ್ಕಾರಕ್ಕೆ ಮತ್ತೊಂದು ಮುಖಭಂಗವಾದಂತೆಯೇ ಸರಿ.

ರಾಜ್ಯ ಸರ್ಕಾರಕ್ಕೇಕೆ ನಡುಕ?

ನರೇಂದ್ರ ಮೋದಿ ಹಾಗೂ ಅಮಿತ್ ಶಾ ಜೋಡಿ ದೇಶದ ಹಲವು ವಿಧಾನಸಭೆ ಚುನಾವಣೆಗಳಲ್ಲಿ ಮೋಡಿ ಮಾಡಿರುವುದು ರಾಜ್ಯ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ಎಲ್ಲಿ ಈ ಜೋಡಿ ಕರ್ನಾಟಕದಲ್ಲಿ ಯಶಸ್ವಿಯಾಗಿ ರ್ಯಾಲಿ ಮಾಡಿ ಜನರ ಮನಸೆಳೆದರೆ ತಮ್ಮಪಟ್ಟಕ್ಕೆ ಕುತ್ತು ಬರುತ್ತದೆ ಎಂಬ ಭೀತಿಗೊಳಗಾಗಿರುವ ಸಿದ್ದರಾಮಯ್ಯನವರು ಬಂದ್ ನಾಟಕದ ಮೂಲಕ ಇಬ್ಬರನ್ನೂ ಹೆಣೆಯಲು ಮುಂದಾಗಿದ್ದಾರೆ. ಮೈಸೂರಿನಲ್ಲಿ ಜನವರಿ 25ರಂದು ಅಮಿತ್ ಷಾ ಆಗಮನದ ಹಿನ್ನೆಲೆಯಲ್ಲಿ 27ಕ್ಕೆ ನಿಗದಿಯಾಗಿದ್ದ ರಾಜ್ಯ ಬಂದ್ 25ಕ್ಕೇ ನಡೆಯುವಂತೆ ಮಾಡಿದ್ದರು ಸಿಎಂ ಸಿದ್ದರಾಮಯ್ಯ.

ಹೇಗೆ ನಡೆಯುತ್ತಿದೆ ಸಿದ್ಧತೆ?

ರಾಜ್ಯ ಸರ್ಕಾರದ ತಂತ್ರಗಳೆಲ್ಲವನ್ನೂ ಮೀರಿ ಮೋದಿ ಆಗಮಿಸುವ ಸಮಾವೇಶ ಭರ್ಜರಿಯಾಗಿ ನಡೆಸಲು ಬಿಜೆಪಿ ಟೊಂಕಕಟ್ಟಿ ನಿಂತಿದ್ದು, ಸಿದ್ಧತೆ ಕೊನೆ ಹಂತಕ್ಕೆ ಬಂದಿದೆ. 40 ಅಡಿ ಉದ್ದ, 80 ಅಡಿ ಅಗಲ ಹಾಗೂ 20 ಅಡಿ ಎತ್ತರದ ವೇದಿಕೆ ಸಿದ್ಧವಾಗಿದ್ದು, ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಭದ್ರತಾ ಉಸ್ತುವಾರಿಗೆ 300 ಕಾರ್ಯಕರ್ತರನ್ನೊಳಗೊಂಡ ಭದ್ರತಾ ತಂಡ, ಜನರನ್ನು ಕರೆತರಲು ಸಮಿತಿ, ಪೊಲೀಸ್ ಬಂದೋಬಸ್ತ್, ಪಾರ್ಕಿಂಗ್, ಮಿನಿ ಆಸ್ಪತ್ರೆ, ಊಟ, ನೀರಿನ ವ್ಯವಸ್ಥೆ ಸೇರಿ ಸಕಲ ಸಿದ್ಧತೆ ಮಾಡಿದೆ.

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!

  • Privacy Policy
  • Contact
© Tulunadu Infomedia.

Press enter/return to begin your search