• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೋಮೂತ್ರದಿಂದ ಔಷಧಿ ತಯಾರಿಸಲು ಮುಂದಾದ ಯೋಗಿ ಸರ್ಕಾರ

TNN Correspondent Posted On February 5, 2018
0


0
Shares
  • Share On Facebook
  • Tweet It

ಲಖನೌ: ಹಲವು ರೋಗಗಳಿಗೆ ರಾಮಬಾಣವಾಗಿರುವ ಗೋಮೂತ್ರದ ಮೂಲಕ ಔಷಧ ತಯಾರಿಸಲು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧರಿಸಿದೆ. ನಾನಾ ರೋಗಗಳಿಗೆ ಚಿಕಿತ್ಸೆ ನೀಡುವ ಎಂಟು ಔಷಧಗಳನ್ನು ಈಗಾಗಲೇ ಯೋಗಿ ಸರ್ಕಾರ ಸಿದ್ಧಪಡಿಸಿದೆ. ದೇಶದ ಹಲವು ಖಾಸಗಿ ಸಂಸ್ಥೆಗಳು ಮತ್ತು ಫಾರ್ಮಸಿಗಳು ಗೋಮೂತ್ರದಿಂದ ಔಷಧ ತಯಾರಿಸುತ್ತಿವೆಯಾದರೂ ಸರಕಾರವೇ  ಪ್ರೋತ್ಸಾಹಿಸುತ್ತಿರುವುದು ಇದೇ ಮೊದಲು.

ಆಯುಷ್ ಇಲಾಖೆ ನಿರ್ದೇಶಕ ಡಾ. ಆರ್‌.ಆರ್‌. ಚೌಧರಿ ಮಾತಾಡಿ, ಆರಂಭದಲ್ಲಿ ಗೋಮೂತ್ರದಿಂದ ಸ್ವಚ್ಛತೆ ಮಾಡುವ ವಸ್ತುಗಳನ್ನು ತಯಾರಿಸುವ ಪ್ರಸ್ತಾವನೆ ಹೊಂದಲಾಗಿತ್ತು. ಆದರೆ ನಂತರ ಔಷಧಗಳನ್ನು ಸಿದ್ಧಡಿಸಲು ಮುಂಎದಾಗಿದೆ ಎಂದು ತಿಳಿಸಿದ್ದಾರೆ. ಆಯುರ್ವೇದ ಇಲಾಖೆಯು ಲಖನೌ ಮತ್ತು ಪಿಲಿಭಿತ್‌ನಲ್ಲಿರುವ ಎರಡು ಸರಕಾರಿ ಫಾರ್ಮಸಿ ಮತ್ತು ಖಾಸಗಿ ಘಟಕಗಳ ಸಹಯೋಗದಲ್ಲಿ ಔಷಧಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದ್ಧಾರೆ.

ಬಾಂಡಾ, ಝಾನ್ಸಿ, ಮುಜಫ್ಫರ್‌ ನಗರ, ಅಲಹಾಬಾದ್‌, ವಾರಾಣಸಿ, ಬರೇಲಿ, ಲಖನೌ ಮತ್ತು ಪಿಲಿಭಿತ್‌ಗಳಲ್ಲಿ ರುವ ಎಂಟು ಮೆಡಿಕಲ್‌ ಕಾಲೇಜುಗಳಲ್ಲಿ ಆಯುರ್ವೇದ ಕೋರ್ಸ್‌ ಆರಂಭಿಸಲಾಗಿದ್ದು, ಇಲ್ಲಿಗೆ ನಿತ್ಯ ಸಾವಿರಾರು ರೋಗಿಗಳು ಚಿಕಿತ್ಸೆ ಬರುತ್ತಾರೆ. ಲೌಖನೌ ಆಸ್ಪತ್ರೆಯಗೆ ನಿತ್ಯ 700 ಜನರು ಔಷಧ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದುವರೆಗೆ ಲಿವರ್‌ ಸಮಸ್ಯೆ, ಗಂಟು ನೋವು ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ 8 ಔಷಧ ತಯಾರಿಸಿದ್ದೇವೆ. ಇತರ ಸಮಸ್ಯೆ ಮತ್ತು ರೋಗಗಳಿಗೆ ಗೋಮೂತ್ರ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ನಡೆಯುತ್ತಿದೆ ಎಂದು ಆರ್‌.ಆರ್‌. ಚೌಧರಿ ತಿಳಿಸಿದ್ದಾರೆ.

ಆದಿತ್ಯನಾಥ ಸರಕಾರ ಏಳು ಜಿಲ್ಲೆಗಳು ಮತ್ತು 16 ನಗರ ಪ್ರದೇಶಗಳಲ್ಲಿ ತಲಾ 1000 ಸಾಮರ್ಥ್ಯ‌ದ ಗೋಶಾಲೆಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಮುಂದೆ ಪ್ರತಿ ಬ್ಲಾಕ್‌ನಲ್ಲಿ ಒಂದು ಗೋಶಾಲೆ ನಿರ್ಮಾಣವಾಗಲಿದೆ. ಸರಕಾರಿ ಭೂಮಿಯ ಅತಿಕ್ರಮಣವನ್ನು ತೆರವುಗೊಳಿಸಿ ಗೋಶಾಲೆಗೆ ನೀಡಲು ಆದಿತ್ಯನಾಥ್ ಸರಕಾರ ಚಿಂತಿಸುತ್ತಿದೆ.

 

0
Shares
  • Share On Facebook
  • Tweet It




Trending Now
ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
Tulunadu News July 15, 2025
ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
Tulunadu News July 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
  • Popular Posts

    • 1
      ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • 2
      ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • 3
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 4
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 5
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!

  • Privacy Policy
  • Contact
© Tulunadu Infomedia.

Press enter/return to begin your search