• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇನ್ನೊಬ್ಬ ಮಗನಿದ್ದರೂ ಸೈನ್ಯಕ್ಕೆ ಸೇರಿಸುತ್ತಿದ್ದೇ ಎಂದ ಹುತಾತ್ಮ ಯೋಧನ ತಾಯಿ

TNN Correspondent Posted On February 6, 2018
0


0
Shares
  • Share On Facebook
  • Tweet It

ಗುರುಗ್ರಾಮ್: ನನಗೆ ಇನ್ನೊಬ್ಬ ಮಗನಿದ್ದರೂ ಸೈನ್ಯಕ್ಕೆ ಸೇರಿಸುತ್ತಿದೆ ಎಂದು ಹೇಳುವ ಮೂಲಕ ಜಮ್ಮು ಕಾಶ್ಮೀರದ ಪಾಕಿಸ್ತಾನದ ಅಪ್ರಚೋಧಿತ ಸೆಲ್ ದಾಳಿಗೆ ಹುತಾತ್ಮರಾದ ಕ್ಯಾಪ್ಟನ್ ಕಪಿಲ್ ಖಂಡು ತಾಯಿ ಸೈನಿಕರ ಕುಟುಂಬದ ದೇಶಭಕ್ತಿಯನ್ನು ಅನಾವರಣಗೊಳಿಸಿದ್ದಾರೆ.

ತನ್ನ ಮಗನನ್ನು ಕಳೆದುಕೊಂಡರೂ ದೃತಿಗೆಡದ 52 ವರ್ಷದ ಸುನಿತಾ ಖಂಡು ಅವರು ‘ನನ್ನ ಮಗ ಯಾವಾಗಲೂ ದೇಶಕ್ಕಾಗಿ ಜೀವನ ಮುಡಿಪಾಗಿಟ್ಟಿದ್ದ. ಸೈನ್ಯಕ್ಕೆ ಸೇರಿದ್ದರಿಂದ ಖುಷಿಯಾಗಿದ್ದ. ಕಪೀಲ್ ನಮ್ಮ ಜೀವನ ಸಾರ್ಥಕವಾಗಬೇಕು ಎನ್ನುತ್ತಿದ್ದ. ಧೈರ್ಯವಂತನಾಗಿದ್ದ. ದೇಶದ ರಕ್ಷಣೆಗಾಗಿ ಹೋರಾಡಿದವನ ತಾಯಿ ಎಂದು ಹೇಳಿಕೊಳ್ಳಲು ನನಗೆ ಹೆಮ್ಮೆ ಎನಿಸುತ್ತದೆ.

ಕಪಿಲ್ ಜೀವನ ಸಾಹಸದಿಂದ ಕೂಡಿರಬೇಕು ಎಂದು ಬಯಸುತ್ತಿದ್ದ. ದೇಶಭಕ್ತಿಯನ್ನು ಕವನ ರಚಿಸುವ ಮೂಲಕ ವ್ಯಕ್ತಪಡಿಸುತ್ತಿದ್ದ. ನಿಸರ್ಗವನ್ನು ಪ್ರೀತಿಸುತ್ತಿದ್ದ. ದೇಶವೇ ನನ್ನ ಮೊದಲ ಆದ್ಯತೆ ಎಂದು ಹೇಳುತ್ತಿದ್ದ. ಅಂತಹ ಮಗನನ್ನು ಕಳೆದುಕೊಂಡಿದ್ದು ದುಖಃವೆನ್ನಿಸುತ್ತಿದೆ.

ಪಾಕ್ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಆಗಲಿ

ನಿತ್ಯ ದೇಶಕ್ಕೆ ಕಂಟಕವಾಗಿರುವ ಪಾಕಿಸ್ತಾನದ ವಿರುದ್ಧ ಸರ್ಕಾರ ಸೇಡು ತೀರಿಸಿಕೊಳ್ಳಬೇಕು. ಪಾಕಿಸ್ತಾನದ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಂತಹ ಕಾರ್ಯಾಚರಣೆಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರತೀಕಾರ ತೀರಿಸಿಕೊಳ್ಳಬೇಕು. ಈ ಮೂಲಕ ಹುತಾತ್ಮ ಸೈನಿಕರ ಆತ್ಮಕ್ಕೆ ಗೌರವ ಸಲ್ಲಿಸಬೇಕು. ನನ್ನ ಮಗ ಇನ್ನು 15-20 ವರ್ಷವಿದ್ದರೇ ದೇಶಕ್ಕೆ ಅವನು ಹೆಚ್ಚಿನ ಕೊಡುಗೆ ನೀಡುತ್ತಿದ್ದ ಎಂದು ಹೇಳುವ ಮೂಲಕ ಸುನಿತಾ ಖಂಡು ಮಾದರಿಯಾಗಿದ್ದಾರೆ. ಹರ್ಯಾಣದ ಗುರುಗ್ರಾಮ್ ನಿಂದ  ಪಟೌಡಿ ಸಮೀಪದ ರನ್ಸಿಕಾ ಗ್ರಾಮದಲ್ಲಿ ಕ್ಯಾಪ್ಟನ್ ಕಪಿಲ್ ಖಂಡು ಕುಟುಂಬ ಜೀವನ ಸಾಗಿಸುತ್ತಿದೆ.

ಫೆ.10ಕ್ಕೆ ಜನ್ಮದಿನ

ಕಪಿಲ್ ಖಂಡು ಫೆ.10ರಂದು 23ನೇ ವರ್ಷದ ಜನ್ಮದಿನ ಆಚರಿಸಿಕೊಳ್ಳುವ ಸಂಭ್ರಮದಲ್ಲಿದ್ದರು. ಇತ್ತೀಚೆಗೆ ಮನಗೆ ಫೋನ್ ಮಾಡಿದಾಗ ‘ಶೀಘ್ರದಲ್ಲಿ ಮನೆಗೆ ಬರುವೆ. ಇಲ್ಲಿ ಎಲ್ಲವೂ ಚೆನ್ನಾಗಿದೆ. ನನ್ನ ಜನ್ಮದಿನದಂದು ಭೇಟಿ ನೀಡಿ ತಾಯಿಗೆ ಅಚ್ಚರಿ ಮೂಡಿಸುವೆ ಎಂದು ಹೇಳಿದ್ದರು ಎಂದು ಕಪಿಲ್ ಸಹೋದರಿ ಸೊನಿಯಾ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search