• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

35 ದಿನದಲ್ಲೇ 240 ಬಾರಿ ಕದನ ವಿರಾಮ ಉಲ್ಲಂಘಿಸಿದ ಪಾಪಿ ಪಾಕಿಸ್ತಾನ!

TNN Correspondent Posted On February 6, 2018
0


0
Shares
  • Share On Facebook
  • Tweet It

ಶ್ರೀನಗರ: ಕೇಂದ್ರದಲ್ಲಿ ಪ್ರಧಾನಿ ಮೋದಿ ಅವರ ನೇತೃತ್ವ ಹಾಗೂ ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಬೆಂಬಲದಿಂದ ಪಿಡಿಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಉಗ್ರರ ಸಂಹಾರವಾಗುತ್ತಿದೆ ಎನ್ನುತ್ತಿರುವ ಬೆನ್ನಲ್ಲೇ ಪಾಕಿಸ್ತಾನ ತನ್ನ ಎಂದಿನ ಕುತುಂತ್ರ ಬುದ್ಧಿಯನ್ನು ಮುಂದುವರಿಸಿದೆ.

ಹೌದು, ಕಳೆದ 35 ದಿನಗಳಲ್ಲಿ ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನ ಇನ್ನಿಲ್ಲದ ಕುತಂತ್ರ ಮಾಡುತ್ತಿದ್ದು, ಈ ಕಿರು ಅವಧಿಯಲ್ಲೇ ಸುಮಾರು 240 ಬಾರಿ ಕದನ ವಿರಾಮ ಉಲ್ಲಂಘಿಸಿ ಭಾರತದೊಳಕ್ಕೆ ದಾಳಿ ಮಾಡಿದೆ ಎಂದು ತಿಳಿದುಬಂದಿದೆ.

ಇದು ಕಳೆದ ವರ್ಷಗಳಲ್ಲೇ ಅತಿ ಕಡಿಮೆ ಅವಧಿಯಲ್ಲೇ ಹೆಚ್ಚು ಬಾರಿ ಪಾಕಿಸ್ತಾನ ಅಂತರಾಷ್ಟ್ರೀಯ ಗಡಿ ನಿಯಮ ಉಲ್ಲಂಘಿಸಿದೆ ಎಂದು ದಾಖಲಾಗಿದೆ. 2016ರಲ್ಲಿ ಪಾಕಿಸ್ತಾನ 228 ಬಾರಿ ಹಾಗೂ 2017ರಲ್ಲಿ ಬರೊಬ್ಬರಿ 860 ಬಾರಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿತ್ತು. ಆದರೆ ಪ್ರಸಕ್ತ ವರ್ಷದಲ್ಲಿ ಅಂದರೆ, ಈ 35 ದಿನದಲ್ಲೇ ಪಾಕಿಸ್ತಾನ 240 ಬಾರಿ ಕದನ ವಿರಾಮ ಉಲ್ಲಂಘಿಸಿ ಉದ್ಧಟತನ ಮೆರೆದಿದೆ ಎಂದು ತಿಳಿದುಬಂದಿದೆ.

ಆದರೂ ಭಾರತೀಯ ಸೈನ್ಯ ಪಾಕಿಸ್ತಾನದ ಯಾವ ದಾಳಿಗೂ ಜಗ್ಗದೇ ಪ್ರತಿ ದಾಳಿ ಮಾಡುತ್ತಿದ್ದು, ಮುಂದೆ ಮಾಡುವ ಯಾವ ದಾಳಿಯನ್ನೂ ನಾವು ಹಿಮ್ಮೆಟ್ಟಿಸದೆ ಬಿಡುವುದಿಲ್ಲ ಎಂದು ಸೇನೆಯ ಲೆಫ್ಟಿನೆಂಟ್ ಜನರಲ್ ಶರತ್ ಚಂದ್ರ ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಕದನ ವಿರಾಮ ಉಲ್ಲಂಘಿಸಿ ರಾಜೌರಿ ಜಿಲ್ಲೆಯಲ್ಲಿ ಪಾಕಿಸ್ತಾನ ಮಾಡಿದ್ದ ದಾಳಿಯಲ್ಲಿ ಭಾರತದ ನಾಲ್ವರು ಯೋಧರು ಹುತಾತ್ಮರಾಗಿದ್ದರು. 2017ರಲ್ಲಿ ಭಾರತ 209ಕ್ಕೂ ಹೆಚ್ಚು ಪಾಕಿಸ್ತಾನಿ ಉಗ್ರರನ್ನು ಹತ್ಯೆ ಮಾಡಿದೆ. ಇಷ್ಟಾದರೂ ಪಾಕಿಸ್ತಾನ ಪಾಠ ಕಲಿತಿಲ್ಲ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search