• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

35 ದಿನದಲ್ಲೇ 240 ಬಾರಿ ಕದನ ವಿರಾಮ ಉಲ್ಲಂಘಿಸಿದ ಪಾಪಿ ಪಾಕಿಸ್ತಾನ!

TNN Correspondent Posted On February 6, 2018


  • Share On Facebook
  • Tweet It

ಶ್ರೀನಗರ: ಕೇಂದ್ರದಲ್ಲಿ ಪ್ರಧಾನಿ ಮೋದಿ ಅವರ ನೇತೃತ್ವ ಹಾಗೂ ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಬೆಂಬಲದಿಂದ ಪಿಡಿಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಉಗ್ರರ ಸಂಹಾರವಾಗುತ್ತಿದೆ ಎನ್ನುತ್ತಿರುವ ಬೆನ್ನಲ್ಲೇ ಪಾಕಿಸ್ತಾನ ತನ್ನ ಎಂದಿನ ಕುತುಂತ್ರ ಬುದ್ಧಿಯನ್ನು ಮುಂದುವರಿಸಿದೆ.

ಹೌದು, ಕಳೆದ 35 ದಿನಗಳಲ್ಲಿ ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನ ಇನ್ನಿಲ್ಲದ ಕುತಂತ್ರ ಮಾಡುತ್ತಿದ್ದು, ಈ ಕಿರು ಅವಧಿಯಲ್ಲೇ ಸುಮಾರು 240 ಬಾರಿ ಕದನ ವಿರಾಮ ಉಲ್ಲಂಘಿಸಿ ಭಾರತದೊಳಕ್ಕೆ ದಾಳಿ ಮಾಡಿದೆ ಎಂದು ತಿಳಿದುಬಂದಿದೆ.

ಇದು ಕಳೆದ ವರ್ಷಗಳಲ್ಲೇ ಅತಿ ಕಡಿಮೆ ಅವಧಿಯಲ್ಲೇ ಹೆಚ್ಚು ಬಾರಿ ಪಾಕಿಸ್ತಾನ ಅಂತರಾಷ್ಟ್ರೀಯ ಗಡಿ ನಿಯಮ ಉಲ್ಲಂಘಿಸಿದೆ ಎಂದು ದಾಖಲಾಗಿದೆ. 2016ರಲ್ಲಿ ಪಾಕಿಸ್ತಾನ 228 ಬಾರಿ ಹಾಗೂ 2017ರಲ್ಲಿ ಬರೊಬ್ಬರಿ 860 ಬಾರಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿತ್ತು. ಆದರೆ ಪ್ರಸಕ್ತ ವರ್ಷದಲ್ಲಿ ಅಂದರೆ, ಈ 35 ದಿನದಲ್ಲೇ ಪಾಕಿಸ್ತಾನ 240 ಬಾರಿ ಕದನ ವಿರಾಮ ಉಲ್ಲಂಘಿಸಿ ಉದ್ಧಟತನ ಮೆರೆದಿದೆ ಎಂದು ತಿಳಿದುಬಂದಿದೆ.

ಆದರೂ ಭಾರತೀಯ ಸೈನ್ಯ ಪಾಕಿಸ್ತಾನದ ಯಾವ ದಾಳಿಗೂ ಜಗ್ಗದೇ ಪ್ರತಿ ದಾಳಿ ಮಾಡುತ್ತಿದ್ದು, ಮುಂದೆ ಮಾಡುವ ಯಾವ ದಾಳಿಯನ್ನೂ ನಾವು ಹಿಮ್ಮೆಟ್ಟಿಸದೆ ಬಿಡುವುದಿಲ್ಲ ಎಂದು ಸೇನೆಯ ಲೆಫ್ಟಿನೆಂಟ್ ಜನರಲ್ ಶರತ್ ಚಂದ್ರ ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಕದನ ವಿರಾಮ ಉಲ್ಲಂಘಿಸಿ ರಾಜೌರಿ ಜಿಲ್ಲೆಯಲ್ಲಿ ಪಾಕಿಸ್ತಾನ ಮಾಡಿದ್ದ ದಾಳಿಯಲ್ಲಿ ಭಾರತದ ನಾಲ್ವರು ಯೋಧರು ಹುತಾತ್ಮರಾಗಿದ್ದರು. 2017ರಲ್ಲಿ ಭಾರತ 209ಕ್ಕೂ ಹೆಚ್ಚು ಪಾಕಿಸ್ತಾನಿ ಉಗ್ರರನ್ನು ಹತ್ಯೆ ಮಾಡಿದೆ. ಇಷ್ಟಾದರೂ ಪಾಕಿಸ್ತಾನ ಪಾಠ ಕಲಿತಿಲ್ಲ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search