• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಲಿತರೇ ಜಾಸ್ತಿ ಇರುವ ಉತ್ತರ ಪ್ರದೇಶದ ಗೌತಮ್ ನಗರ ಆಗುತ್ತಿದೆ ಇಸ್ಲಾಂ ನಗರ, ಎಲ್ಲಿದ್ದಾರೆ ದಲಿತ ಹೋರಾಟಗಾರರು?

TNN Correspondent Posted On February 7, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶ ಸೇರಿ ಇತ್ತೀಚೆಗೆ ದಲಿತ ಮಹಿಳೆಯರ ಮೇಲೆ ಅತ್ಯಾಚಾರ, ಬಲವಂತದ ಮತಾಂತರ ಸೇರಿ ಹಲವು ಪ್ರಕರಣಗಳು ಸುದ್ದಿಯಾಗುತ್ತಿರುವ ಬೆನ್ನಲ್ಲೇ, ಉತ್ತರ ಪ್ರದೇಶದ ಗೌತಮ್ ನಗರ ಎಂಬುದನ್ನು ಇಸ್ಲಾಂ ನಗರ ಎಂದು ಅಂಗಡಿಗಳ ಬೋರ್ಡ್, ಮನೆಗಳ ವಿಳಾಸದಲ್ಲಿ ಮುಸ್ಲಿಮರು ಬಳಸುತ್ತಿದ್ದು, ಜನರನ್ನು ಬೆಚ್ಚಿಬೀಳಿಸುತ್ತಿದೆ.

ಹೌದು, ಮೊದಲಿನಿಂದಲೂ ಗೌತಮ್ ನಗರ ಎಂದೇ ಕರೆಯುತ್ತಿದ್ದು, 12 ಲಕ್ಷ ಜನರಿರುವ ನಗರದಲ್ಲಿ ಶೇ.42ರಷ್ಟು ಜನ ಮುಸ್ಲಿಮರಿದ್ದಾರೆ. ಶೇ.21ರಂದು ಜನ ದಲಿತರಿದ್ದಾರೆ. ಇದನ್ನೇ ಬಂಡವಾಳವನ್ನಾಗಿಸಿಕೊಂಡಿರುವ ಮುಸ್ಲಿಮರು ತಮ್ಮ ಅಂಗಡಿಗಳ ವಿಳಾಸದಲ್ಲಿ ಗೌತಮ್ ನಗರವನ್ನು ಇಸ್ಲಾಂ ನಗರ ಎಂದೇ ಮುದ್ರಿಸುತ್ತಿದ್ದಾರೆ, ಬೋರ್ಡ್ ಮೇಲೆ ಬರೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಅಷ್ಟೇ ಅಲ್ಲ, ಜನರನ್ನು ಬಲವಂತವಾಗಿ ಇಸ್ಲಾಮಿಗೆ ಮತಾಂತರಗೊಳಿಸಲು ಪ್ರಯತ್ನಿಸುತ್ತಿದ್ದು, ಸುಮಾರು 1500ಕ್ಕೂ ಹೆಚ್ಚು ದಲಿತರಿಗೆ ಮತಾಂತರಗೊಳ್ಳದಿದ್ದರೆ ಹತ್ಯೆ ಮಾಡುವುದಾಗಿ ಬೆದರಿಕೆ ಒಡ್ಡಲಾಗಿದೆ ಎಂಬ ಮಾಹಿತಿ ಬಹಿರಂಗವಾಗಿದೆ.

ಗೌತಮ್ ನಗರದಲ್ಲಿ ಸುಮಾರು 50ಕ್ಕೂ ಹೆಚ್ಚು ಮುಸ್ಲಿಮರ ಅಂಗಡಿಗಳಿವೆ. ಮುಸ್ಲಿಮರೇ ಜಾಸ್ತಿ ಇದ್ದಾರೆ. ಹಾಗಾಗಿ ಅವರು ನಗರವನ್ನು ಇಸ್ಲಾಂ ನಗರ ಎಂದು ಮರುನಾಮಕರಣ ಮಾಡಲು ಬಯಸುತ್ತಿದ್ದು, 20-25 ಅಂಗಡಿಗಳ ವಿಳಾಸದಲ್ಲಿ ಇಸ್ಲಾಂ ನಗರ ಎಂದೇ ಬರೆಸಲಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ನಗರದ ಹೆಸರು ಬದಲಾವಣೆ ಹಾಗೂ ಬಲವಂತದ ಮತದಾನಕ್ಕೆ ಯತ್ನಿಸುತ್ತಿರುವ ಮುಸ್ಲಿಂ ಮೂಲಭೂತವಾದಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ. ಒಟ್ಟಿನಲ್ಲಿ ಬಡ ದಲಿತರು, ದಲಿತ ಮಹಿಳೆಯರು ಇಸ್ಲಾಮಿಕ್ ಮೂಲಭೂತವಾದಕ್ಕೆ ಕುತ್ತಾಗುವ ಎಲ್ಲ ಲಕ್ಷಣಗಳಿದ್ದು, ಇಷ್ಟಾದರೂ ಜಿಗ್ನೇಶ್ ಮೇವಾನಿಯಂತಹ ದಲಿತ ನಾಯಕರು ತುಟಿ ಬಿಚ್ಚದೇ ಇರುವುದು ದುರಂತ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search