• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದ ಹಿಂದೂಗಳ ಮತಕ್ಕಾಗಿ ರಾಹುಲ್ ಗಾಂಧಿ ಹೂಡಿದ ತಂತ್ರ ತಿಳಿಯರಿ, ಡೋಂಗಿ ಹಿಂದುತ್ವವಾದಕ್ಕೆ ಮರುಳಾಗಿದಿರಿ

TNN Correspondent Posted On February 8, 2018
0


0
Shares
  • Share On Facebook
  • Tweet It

ಬೆಂಗಳೂರು: ಈ ಕಾಂಗ್ರೆಸ್ಸಿನವರೇ ಹಾಗೆ. ಯಾವುದೇ ರಾಜದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಹಲವು ತಂತ್ರ ಹೆಣೆಯಲು ಶುರುವಿಟ್ಟುಕೊಳ್ಳುತ್ತದೆ. ಇದರಲ್ಲಿ ಗುಜರಾತ್ ಚುನಾವಣೆ ವೇಳೆ ರಾಹುಲ್ ಗಾಂಧಿ ಹಿಂದೂಗಳ ಮತ ಸೆಳೆಯಲು ಪದೇ ಪದೇ ದೇವಾಲಯಗಳಿಗೆ ಭೇಟಿ ನೀಡಿ ಹಿಂದೂಗಳ ಮರುಳು ಮಾಡಲು ಮುಂದಾದರು. ಆದರೇನಾಯಿತು? ಕೊನೆಗೂ ಜನ ಬಿಜೆಪಿಯನ್ನೇ ಗೆಲ್ಲಿಸಿದರು.

ಇಂತಹ ಡೋಂಗಿ ಹಿಂದುತ್ವ ಪ್ರತಿಪಾದಿಸುವ ರಾಹುಲ್ ಗಾಂಧಿ, ಗುಜರಾತಿನ ವರಸೆಯನ್ನೇ ಕರ್ನಾಟಕದಲ್ಲಿ ಆರಂಭಿಸಲು ಹೊರಟಿದ್ದಾರ. ಫೆ.10ರಿಂದ ಕರ್ನಾಟಕದಲ್ಲಿ ಅವರು ಚುನಾವಣಾ ಪ್ರವಾಸ ಆರಂಭಿಸಿದ್ದು, ಅದರಲ್ಲಿ ಹಿಂದೂ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿ ಹಿಂದೂಗಳ ಮತ ಸೆಳೆಯಲು ತಂತ್ರ ಹೂಡಿದ್ದಾರೆ.

ಹೌದು, ಫೆ.10ರಿಂದ 13ರವರೆಗೆ ರಾಹುಲ್ ಗಾಂಧಿ ರಾಜ್ಯ ಪ್ರವಾಸದಲ್ಲಿ ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಈ ಭಾಗದಲ್ಲಿ ಲಿಂಗಾಯತರು ಜಾಸ್ತಿ ಇದ್ದಾರೆ ಎಂಬುದು ಧಾರ್ಮಿಕ ಅಂಶವಾಗಿದ್ದು, ಸಾಫ್ಟ್ ಹಿಂದುತ್ವ ಪ್ರತಿಪಾದಿಸುವ ಹುನ್ನಾರ ನಡೆಸಿದ್ದಾರೆ. ಈ ಜಿಲ್ಲೆಗಳ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವುದು ರಾಹುಲ್ ಉದ್ದೇಶ.

ಇದರ ಭಾಗವಾಗಿ ರಾಹುಲ್ ಗಾಂಧಿ ಮೊದಲಿಗೆ ಕೊಪ್ಪಳ ಜಿಲ್ಲೆ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲದೆ ಇದೇ ಜಿಲ್ಲೆಯ, ಸುಮಾರು 800 ವರ್ಷಗಳ ಇತಿಹಾಸವಿರುವ ಹಾಗೂ ಅಪಾರ ಲಿಂಗಾಯತ ಅನುಯಾಯಿಗಳನ್ನು ಹೊಂದಿರುವ ಗವಿಸಿದ್ದೇಶ್ವರ ಮಠಕ್ಕೆ ರಾಹುಲ್ ಎರಡನೇ ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಇನ್ನು ಬರೀ ಹಿಂದೂ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿದರೆ ಮುಸ್ಲಿಮರು ಮುನಿಸಿಕೊಳ್ಳುತ್ತಾರಲ್ಲ? ಅದೇ ಕಾರಣಕ್ಕಾಗಿ ರಾಹುಲ್ ಗಾಂಧಿ ಮೂರನೇ ಧಾರ್ಮಿಕ ಸ್ಥಳದ ಭೇಟಿಗಾಗಿ ಕಲಬುರಗಿಯ ಪ್ರಸಿದ್ಧ ಖಾಜಾ ಬಂದೇನವಾಜ್ ದರ್ಗಾಕ್ಕೆ ಭೇಟಿ ನೀಡಲಿದ್ದಾರೆ.

ನಾಲ್ಕನೇ ಹಾಗೂ ಕೊನೆಯ ಧಾರ್ಮಿಕ ಸ್ಥಳವಾಗಿ ಬೀದರ್ ಜಿಲ್ಲೆ ಬಸವ ಕಲ್ಯಾಣದ ಅನುಭವ ಮಂಟಪಕ್ಕೆ ಭೇಟಿ ನೀಡಲಿದ್ದು, ಈ ಭಾಗದ ಬಸವಣ್ಣನ ಅನುಯಾಯಿಗಳನ್ನು ಸೆಳೆಯುವ ಹುನ್ನಾರ ರಾಹುಲ್ ಗಾಂಧಿಯವರದ್ದು.

ಒಟ್ಟಿನಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಹಿಂದೂ ಪರ ಎಂದು ಡೋಂಗಿತನ ಮೆರೆಯಲು ಆರಂಭಿಸಿದ್ದಾರೆ. ಇದುವರೆಗೆ ರಾಜ್ಯಕ್ಕೆ ಬಂದರೂ ರ್ಯಾಲಿ ನಡೆಸಿಯೋ, ಕಾರ್ಯಕರ್ತರನ್ನು ಭೇಟಿಯಾಗಿಯೋ ಹೋಗುತ್ತಿದ್ದ ರಾಹುಲ್ ಗಾಂಧಿ ಈಗ ಹಿಂದೂಗಳ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿ ಕುತಂತ್ರ ಮೆರೆಯಲು ಮುಂದಾಗಿದ್ದಾರೆ. ಆದರೆ ಹಿಂದೂಗಳು ಇಂತಹ ಡೋಂಗಿ ಹಿಂದುತ್ವಕ್ಕೆ ಮರುಳಾಗಬಾರದು.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search