• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭರವಸೆ ಈಡೇರಿಸಿದ ಸಚಿವ ಹೆಗಡೆ, ದೀಪಕ ಸಹೋದರನಿಗೆ ಸರ್ಕಾರಿ ಉದ್ಯೋಗ

TNN Correspondent Posted On February 12, 2018
0


0
Shares
  • Share On Facebook
  • Tweet It

ಮಂಗಳೂರು : ಮತಾಂಧರ ಅಟ್ಟಹಾಸಕ್ಕೆ ಬಲಿಯಾಗಿದ್ದ ಸುರತ್ಕಲ್ ನ ಹಿಂದೂ ಕಾರ್ಯಕರ್ತ ದೀಪಕ್ ರಾವ್ ಕುಟುಂಬಕ್ಕೆ ಕೇಂದ್ರ ಸರ್ಕಾರ ಆಧಾರವಾಗಿ ನಿಲ್ಲಲ್ಲು ಮುಂದಾಗಿದ್ದು, ಕುಟುಂಬಕ್ಕೆ ಆಶ್ರಯವಾಗಿದ್ದ ದೀಪಕ್ ಕೊಲೆಯಾದ ನಂತರ ಇಡೀ ಕುಟುಂಬ ಸಂಕಷ್ಟಕ್ಕೆ ಸಿಲುಕಿತ್ತು. ಇದೀಗ ದೀಪಕ್ ರಾವ್ ಸಹೋದರ್ ಸತೀಶ್ ಗೆ ಕೇಂದ್ರ ಸರ್ಕಾರ ಸ್ವಾಮ್ಯದ ಕುದುರೆ ಮುಖ ಕಬ್ಬಿಣ ಅದಿರು ಕಂಪನಿಯಲ್ಲಿ ಆಫರ್ ಬಂದಿದೆ. ಇತ್ತೀಚೆಗೆ ದೀಪಕ್ ಕುಟುಂಬಕ್ಕೆ ಭೇಟಿ ನೀಡಿದ ಕೇಂದ್ರ ಕೌಶಲ ಅಭಿವೃದ್ಧಿ ಸಚಿವ ಅನಂತಕುಮಾರ ಹೆಗಡೆ ‘ದೀಪಕ್ ಸಹೋದರನಿಗೆ ಮಾನವೀಯ ನೆಲೆಯಲ್ಲಿ ನೌಕರಿ ಕೊಡಿಸುವ ಭರವಸೆ ನೀಡಿದ್ದರು.

ದೀಪಕ್ ಸಹೋದರ ಸತೀಶ್ ಶಾಲೆ ಕಲಿತ್ತಿಲ್ಲ. ಜನ್ಮತಃ ಸತೀಶ್‌ಗೆ ಮಾತೂ ಬರುವುದಿಲ್ಲ, ಕಿವಿಯೂ ಕೇಳುವುದಿಲ್ಲ. ಆದ್ದರಿಂದ ಅವರನ್ನು ಶಾಲೆಗೆ ಕಳುಹಿಸಲು ಹೆತ್ತವರಿಗೆ ಸಾಧ್ಯವಾಗಿಲ್ಲ. ಈಗ ಸತೀಶ್‌ಗೆ 28 ವರ್ಷ. ಸತೀಶ್‌ಗೆ ಪಣಂಬೂರಿನಲ್ಲಿರುವ ಕೆಐಒಸಿಎಲ್ ಕಂಪನಿಯಲ್ಲಿ ಮಾನವೀಯ ನೆಲೆಯಲ್ಲಿ ಕೆಲಸ ನೀಡಲು ಆಹ್ವಾನಿಸಲಾಗಿದೆ.

ದೀಪಕ್ ಕುಟುಂಬಕ್ಕೆ ಭೇಟಿ ನೀಡಿದ ದಿನವೇ ಕೆಐಒಸಿಎಲ್‌ಗೆ ತೆರಳಿದ್ದ ಹೆಗಡೆ, ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದರು. ನಂತರ ಸತೀಶ್ ಅವರಿಂದ ಸೂಕ್ತ ದಾಖಲೆ ತರಿಸಿಕೊಂಡ ಕೆಐಒಸಿಎಲ್ ಅಧಿಕಾರಿಗಳು, ಸತೀಶ್ ಗೆ ಕಂಪನಿಯಲ್ಲಿ ಕಾಯಂ ಉದ್ಯೋಗ ನೀಡುವುದಾಗಿ ಸಮ್ಮತಿ ಸೂಚಿಸಿದರು. ಮಾತಿನಂತೆ ಇದೀಗ ಸತೀಶ್ ಗೆ ಉದ್ಯೋಗಕ್ಕೆ ಆಹ್ವಾನಿಸಿದ್ದಾರೆ.

ಇನ್ನು ಒಂದು ವಾರದೊಳಗೆ ಉದ್ಯೋಗ ನೇಮಕಾತಿ ಪತ್ರ ಸತೀಶ್ ಅವರ ಕೈಸೇರುವ ನಿರೀಕ್ಷೆ ಇದೆ ಎಂದು ಕುಟುಂಬ ಮೂಲ  ತಿಳಿಸಿವೆ. ಅಟೆಂಡರ್ ಅಥವಾ ಗ್ರೂಪ್ ಡಿ ಹುದ್ದೆ ನೀಡುವ ಸಾಧ್ಯತೆ ಇದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮುಖಂಡ ಸತ್ಯಜಿತ್ ಸುರತ್ಕಲ್ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search