• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ ಇಸ್ಲಾಮಿಕ್ ರಾಷ್ಟ್ರವಾಗುವುದನ್ನು ತಡೆಯಲು ಹಿಂದೂಗಳು ಒಂದಾಗಲಿ ಎಂದ ಮುಸ್ಲಿಂ ಮಹಿಳೆ ಯಾರು ಗೊತ್ತಾ?

TNN Correspondent Posted On February 13, 2018
0


0
Shares
  • Share On Facebook
  • Tweet It

ತಿರುವನಂತಪುರ: ಭಾರತದಲ್ಲಿರುವ ಜಾತ್ಯತೀತ ಮನೋಭಾವನೆ ತೊಲಗಿ ಭಾರತ ಇಸ್ಲಾಮಿಕ್ ರಾಷ್ಟ್ರವಾಗಲಿ ಎಂದು ಕೆಲವು ಇಸ್ಲಾಂ ಮೂಲಭೂತವಾಗಿಗಳು ಬಯಸುತ್ತಿರುವ ಬೆನ್ನಲ್ಲೇ ಮುಸ್ಲಿಂ ಮಹಿಳೆಯೊಬ್ಬರು ಭಾರತ ಇಸ್ಲಾಮಿಕ್ ರಾಷ್ಟ್ರವಾಗಬಾರದು ಎಂದು ಇಂಗಿತ ವ್ಯಕ್ತಪಡಿಸಿದ್ದಾರೆ.

ಭಾರತ ಜಾತ್ಯತೀತ ರಾಷ್ಟ್ರವಾಗಿಯೇ ಉಳಿಯಬೇಕು. ಹಾಗಾಗಬೇಕಾದರೆ ಭಾರತದ ಎಲ್ಲ ಜಾತಿಯ ಹಿಂದೂಗಳು ಒಂದಾಗಬೇಕು ಎಂದು ದೇಶದಲ್ಲೇ ಮೊದಲ ಬಾರಿಗೆ ನಮಾಜ್ ಮಾಡುವ ಉಸ್ತುವಾರಿ ವಹಿಸಿಕೊಂಡ, ಕುರಾನ್ ಸುನ್ನತ್ ಸೊಸೈಟಿಯ ಪ್ರಧಾನ ಕಾರ್ಯದರ್ಶಿ ಕೆ.ಜಮಿದಾ ತಿಳಿಸಿದ್ದಾರೆ.

ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು , “ಹಿಂದೂಗಳ ಹೊರತಾಗಿ ಭಾರತ ಎಂದಿಗೂ ಜಾತ್ಯತೀತ ರಾಷ್ಟ್ರವಾಗಲು ಸಾಧ್ಯವೇ ಇಲ್ಲ. ಹಾಗಾಗಿ ಹಿಂದೂಗಳೆಲ್ಲರೂ ಒಗ್ಗಟ್ಟಾಗಿ ಇರಬೇಕು” ಎಂದು ಹೇಳಿದ್ದಾರೆ.

ನಾನು ಸಮಾಜ ಸುಧಾರಣೆ ಮಾಡುವ ದಿಸೆಯಲ್ಲಿ ಕುರಾನ್ ಸುನ್ನತ್ ಸೇರಿ ಹಲವು ಕ್ರಮಗಳನ್ನು ಕೈಗೊಂಡಾಗ ಕೆಲವರು ನನ್ನನ್ನೇ ಗುರಿಯಾಗಿಸಿದರು. ಬೆದರಿಕೆ ಹಾಕಿದ್ದರು. ಇದೇ ದಾರಿಯಲ್ಲಿದ್ದ ಪಂಡಿತ್ ದೀನದಯಾಳ್ ಉಪಾಧ್ಯಾಯ ಹಾಗೂ ಸುನ್ನತ್ ಸಂಸ್ಥಾಪಕ ಚೆಕನ್ನೂರ್ ಮೌಲ್ವಿ ಅವರಿಗೂ ಹೀಗೆಯೇ ಆಗಿತ್ತು ಎಂದು ಸ್ಮರಿಸಿದರು.

ಆದರೂ ಈ ಸಮಾಜ ಸುಧಾಕರು ಯಾವ ಬೆದರಿಕೆಗೂ ಹೆದರದೆ ಸಮಾಜ ಸುಧಾರಣೆ ಮಾಡಿದರಲ್ಲದೆ, ಅದಕ್ಕಾಗಿ ತಮ್ಮ ಪ್ರಾಣವನ್ನೇ ತೆತ್ತರು ಎಂದು ಕೆ.ಜಮಿದಾ ತಿಳಿಸಿದರು. ಕಳೆದ ಜನವರಿ 26ರಂದು ಜಮಿದಾ ಅವರು ನಮಾಜ್ ಉಸ್ತುವಾರಿ ವಹಿಸಿಕೊಂಡಾಗ ಮುಸ್ಲಿಂ ಮುಖಂಡರಿಂದ ವಿರೋಧ ವ್ಯಕ್ತವಾಗಿತ್ತು, ಆದರೂ ಅವರು ಹಿಂಜರಿದಿರಲಿಲ್ಲ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search