• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ ಇಸ್ಲಾಮಿಕ್ ರಾಷ್ಟ್ರವಾಗುವುದನ್ನು ತಡೆಯಲು ಹಿಂದೂಗಳು ಒಂದಾಗಲಿ ಎಂದ ಮುಸ್ಲಿಂ ಮಹಿಳೆ ಯಾರು ಗೊತ್ತಾ?

TNN Correspondent Posted On February 13, 2018
0


0
Shares
  • Share On Facebook
  • Tweet It

ತಿರುವನಂತಪುರ: ಭಾರತದಲ್ಲಿರುವ ಜಾತ್ಯತೀತ ಮನೋಭಾವನೆ ತೊಲಗಿ ಭಾರತ ಇಸ್ಲಾಮಿಕ್ ರಾಷ್ಟ್ರವಾಗಲಿ ಎಂದು ಕೆಲವು ಇಸ್ಲಾಂ ಮೂಲಭೂತವಾಗಿಗಳು ಬಯಸುತ್ತಿರುವ ಬೆನ್ನಲ್ಲೇ ಮುಸ್ಲಿಂ ಮಹಿಳೆಯೊಬ್ಬರು ಭಾರತ ಇಸ್ಲಾಮಿಕ್ ರಾಷ್ಟ್ರವಾಗಬಾರದು ಎಂದು ಇಂಗಿತ ವ್ಯಕ್ತಪಡಿಸಿದ್ದಾರೆ.

ಭಾರತ ಜಾತ್ಯತೀತ ರಾಷ್ಟ್ರವಾಗಿಯೇ ಉಳಿಯಬೇಕು. ಹಾಗಾಗಬೇಕಾದರೆ ಭಾರತದ ಎಲ್ಲ ಜಾತಿಯ ಹಿಂದೂಗಳು ಒಂದಾಗಬೇಕು ಎಂದು ದೇಶದಲ್ಲೇ ಮೊದಲ ಬಾರಿಗೆ ನಮಾಜ್ ಮಾಡುವ ಉಸ್ತುವಾರಿ ವಹಿಸಿಕೊಂಡ, ಕುರಾನ್ ಸುನ್ನತ್ ಸೊಸೈಟಿಯ ಪ್ರಧಾನ ಕಾರ್ಯದರ್ಶಿ ಕೆ.ಜಮಿದಾ ತಿಳಿಸಿದ್ದಾರೆ.

ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು , “ಹಿಂದೂಗಳ ಹೊರತಾಗಿ ಭಾರತ ಎಂದಿಗೂ ಜಾತ್ಯತೀತ ರಾಷ್ಟ್ರವಾಗಲು ಸಾಧ್ಯವೇ ಇಲ್ಲ. ಹಾಗಾಗಿ ಹಿಂದೂಗಳೆಲ್ಲರೂ ಒಗ್ಗಟ್ಟಾಗಿ ಇರಬೇಕು” ಎಂದು ಹೇಳಿದ್ದಾರೆ.

ನಾನು ಸಮಾಜ ಸುಧಾರಣೆ ಮಾಡುವ ದಿಸೆಯಲ್ಲಿ ಕುರಾನ್ ಸುನ್ನತ್ ಸೇರಿ ಹಲವು ಕ್ರಮಗಳನ್ನು ಕೈಗೊಂಡಾಗ ಕೆಲವರು ನನ್ನನ್ನೇ ಗುರಿಯಾಗಿಸಿದರು. ಬೆದರಿಕೆ ಹಾಕಿದ್ದರು. ಇದೇ ದಾರಿಯಲ್ಲಿದ್ದ ಪಂಡಿತ್ ದೀನದಯಾಳ್ ಉಪಾಧ್ಯಾಯ ಹಾಗೂ ಸುನ್ನತ್ ಸಂಸ್ಥಾಪಕ ಚೆಕನ್ನೂರ್ ಮೌಲ್ವಿ ಅವರಿಗೂ ಹೀಗೆಯೇ ಆಗಿತ್ತು ಎಂದು ಸ್ಮರಿಸಿದರು.

ಆದರೂ ಈ ಸಮಾಜ ಸುಧಾಕರು ಯಾವ ಬೆದರಿಕೆಗೂ ಹೆದರದೆ ಸಮಾಜ ಸುಧಾರಣೆ ಮಾಡಿದರಲ್ಲದೆ, ಅದಕ್ಕಾಗಿ ತಮ್ಮ ಪ್ರಾಣವನ್ನೇ ತೆತ್ತರು ಎಂದು ಕೆ.ಜಮಿದಾ ತಿಳಿಸಿದರು. ಕಳೆದ ಜನವರಿ 26ರಂದು ಜಮಿದಾ ಅವರು ನಮಾಜ್ ಉಸ್ತುವಾರಿ ವಹಿಸಿಕೊಂಡಾಗ ಮುಸ್ಲಿಂ ಮುಖಂಡರಿಂದ ವಿರೋಧ ವ್ಯಕ್ತವಾಗಿತ್ತು, ಆದರೂ ಅವರು ಹಿಂಜರಿದಿರಲಿಲ್ಲ.

0
Shares
  • Share On Facebook
  • Tweet It




Trending Now
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
  • Popular Posts

    • 1
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 2
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search