• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಯಲಾಯ್ತು ಕಾಂಗ್ರೆಸ್ ಮಾಜಿ ನಾಯಕನ ಪಾಕಿಸ್ತಾನ ಪ್ರೇಮ, ಐ ಲವ್ ಪಾಕಿಸ್ತಾನ ಎಂದ ಮಣಿಶಂಕರ್ ಅಯ್ಯರ್!

TNN Correspondent Posted On February 13, 2018


  • Share On Facebook
  • Tweet It

ದೆಹಲಿ: ಭಾರತವೊಂದೇ ಅಲ್ಲ ಇಡೀ ವಿಶ್ವವೇ ಪಾಕಿಸ್ತಾನವನ್ನು ದ್ವೇಷಿಸುತ್ತಿದೆ. ಅದರಲ್ಲೂ ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನ ಪದೇಪದೆ ದಾಳಿ ಮಾಡುವ ಮೂಲಕ ನಮ್ಮ ಯೋಧರು ಹುತಾತ್ಮರಾಗುತ್ತಿದ್ದಾರೆ. ಈ ವಾರದಲ್ಲೇ ಭಾರತದ ಐವರು ಯೋಧರು ಹುತಾತ್ಮರಾಗಿದ್ದಾರೆ.

ಇಂಥ ಪಾಕಿಸ್ತಾನವನ್ನು ಮಟ್ಟಹಾಕಲು ಭಾರತ ಸರ್ಕಾರ ಹಾಗೂ ಸೇನೆ ಯೋಜನೆ ರೂಪಿಸುತ್ತಿದ್ದರೆ, ಕಾಂಗ್ರೆಸ್ಸಿನಿಂದ ಅಮಾನತಗೊಂಡಿರುವ ಮಣಿಶಂಕರ್ ಅಯ್ಯರ್ ಮಾತ್ರ ಐ ಲವ್ ಪಾಕಿಸ್ತಾನ್ ಎಂದು ಹೇಳುವ ಮೂಲಕ ತಮ್ಮ ಮನಸ್ಸಿನೊಳಗಿನ ಪಾಕಿಸ್ತಾನ ಪ್ರೇಮವನ್ನು ಜಗಜ್ಜಾಹೀರುಗೊಳಿಸಿದ್ದಾರೆ.

ಕರಾಚಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಮಣಿಶಂಕರ್ ಅಯ್ಯರ್, “ನಾನು ಭಾರತದಷ್ಟೇ ಪಾಕಿಸ್ತಾನವನ್ನು ಪ್ರೀತಿಸುತ್ತೇನೆ ಹಾಗೂ ಭಾರತವನ್ನು ಪ್ರೀತಿಸುತ್ತಿರುವ ಕಾರಣಕ್ಕಾಗಿಯೇ ಪಾಕಿಸ್ತಾನವನ್ನು” ಇಷ್ಟಪಡುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.

ಸ್ವಾತಂತ್ರ್ಯ ಬಂದಾಗಿನಿಂದ ಇದುವರೆಗೆ ಭಾರತದ ಜತೆ ಸ್ನೇಹ ಹಸ್ತ ಚಾಚುವ ನಾಟಕವಾಡಿ ಮತ್ತೆ ತನ್ನ ಚಾಳಿ ಮುಂದುವರಿಸಿ ಆಗಾಗ ಭಾರತದೊಳಗೆ ಉಗ್ರರನ್ನು ಬಿಟ್ಟು ಕುತಂತ್ರ ಮೆರೆಯುವ ಪಾಕಿಸ್ತಾನವನ್ನು ನಾನು ಪ್ರೀತಿಸುತ್ತೇನೆ ಎನ್ನುವ ಮಣಿಶಂಕರ್ ಅಯ್ಯರ್ ನಿಷ್ಠೆ ಯಾರಿಗೆ? ಭಾರತದೊಳಗಿದ್ದು, ಶತ್ರುರಾಷ್ಟ್ರವನ್ನು ಮೆಚ್ಚುವ ಅಯ್ಯರ್ ಮಾತು ಸರಿಯೇ ಎಂಬ ಪ್ರಶ್ನೆಗಳು ಕಾಡತೊಡಗಿವೆ.

ಇದೇ ಅಯ್ಯರ್ ಗುಜರಾತ್ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ನೀಚ ಎಂದು ಕರೆಯುವ ಮೂಲಕ ತಮ್ಮ ಮನಸ್ಸಿನಲ್ಲಿದ್ದ ಕೊಳಕು ಹೊರಹಾಕಿದ್ದರು ಹಾಗೂ ಅದೇ ಕಾರಣಕ್ಕಾಗಿಯೇ ಪಕ್ಷದಿಂದ ಅಮಾನತುಗೊಂಡಿದ್ದರು.

  • Share On Facebook
  • Tweet It


- Advertisement -


Trending Now
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
Tulunadu News July 2, 2022
Leave A Reply

  • Recent Posts

    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
  • Popular Posts

    • 1
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 2
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 3
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 4
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 5
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search