• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಾಂಗ್ಲಾ ಮುಸ್ಲಿಂ ವ್ಯಕ್ತಿಯೊಂದಿಗೆ ಮದುವೆಯಾಗಿದ್ದ ತಮಿಳು ಹಿಂದೂ ಯುವತಿ ಅನುಮಾನಾಸ್ಪದ ಸಾವು

TNN Correspondent Posted On February 13, 2018


  • Share On Facebook
  • Tweet It

ಢಾಕಾ: ಬಾಂಗ್ಲಾದೇಶದ ಮುಸ್ಲಿಂ ವ್ಯಕ್ತಿಯೊಂದಿಗೆ ಮದುವೆಯಾಗಿದ್ದ ತಮಿಳುನಾಡಿನ ಹಿಂದೂ ಯುವತಿ ಬಾಂಗ್ಲಾದೇಶಲ್ಲಿ ಅನುಮಾನಸ್ಪದವಾಗಿ ಮೃತಪಟ್ಟಿದ್ದಾಳೆ. ಕೇಂದ್ರ ಬಾಂಗ್ಲಾದೇಶದ ಮುನ್ಶಿಗಂಜ್ ಜಿಲ್ಲೆಯ ಲೋಹಗಂಜ್ ಠಾಣಾದ ಹಟ್ ವೋಗ್ಡಿಯಾ ಗ್ರಾಮದಲ್ಲಿ ಮೃತಪಟ್ಟಿದ್ದು, ಹಲವು ಅನುಮಾನಗಳನ್ನು ಮೂಡಿಸಿದೆ. ಈ ಘಟನೆ ಶುಕ್ರವಾರ ನಡೆದಿದೆ. ಯುವತಿ ಭಾರತೀಯ ನಾಗರೀಕತ್ವವವನ್ನು ಹೊಂದಿದ್ದು, ತಮಿಳುನಾಡಿನ ಮೂಲದವಳಾಗಿದ್ದಾಳೆ.

ಯುವತಿ ದೇವಿ (ಫಾತೀಮಾ) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ. ಆದರೆ ಯುವತಿಯ ಅಕ್ಕಪಕ್ಕದವರು ಹೇಳುವ ಪ್ರಕಾರ ವಾಸ್ತವವ ಬೇರೆಯೇ ಇದೆ. ಯುವತಿಯ ಪತಿ ಮಾಧಕ ವ್ಯಸನಿಯಾಗಿದ್ದ, ನಿತ್ಯ ಯುವತಿಗೆ ಕಿರುಕುಳ ನೀಡುತ್ತಿದ್ದ. ಯುವತಿ ಸಾಯುವ ಮುನ್ನಾದಿನವೇ ನೆರೆಹೊರೆಯವರು ಇಬ್ಬರ ಜಗಳವನ್ನು ಕೇಳಿಸಿಕೊಂಡಿದ್ದರು ಎನ್ನಲಾಗಿದೆ.

ಯುವತಿ ಮರಣ ಹೊಂದಿದ ತಕ್ಷಣ ಅವಳ ಅತ್ತೆ ಶವವನ್ನು ಹೂತು ಹಾಕಲು ಸಿದ್ಧತೆ ನಡೆಸಿದ್ದಳು. ಆದರೆ ಅನುಮಾನಸ್ಪದ ಸಾವು ಎಂದು ಅರಿತ ಲೋಹಗಂಜ್ ಠಾಣೆ ಪೊಲೀಸರು ಬಿಕ್ರಾಂಪುರ ಸಾರ್ವಜನಿಕ ಆಸ್ಪತ್ರೆಗೆ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಕೊಟ್ಟಿದ್ದಾರೆ ಎಂದು ಢಾಕಾ ಮೂಲದ ಅಂತರ್ಜಾಲ ಪತ್ರಿಕೆ eibela.com ವರದಿ ಮಾಡಿದೆ.

ಕೆಲ ದಿನಗಳ ಹಿಂದೆ ಕೆಲಸ ಅರಸಿ ತಮಿಳುನಾಡಿಗೆ ಬಂದಿದ್ದ ರೀಮು ಎಂಬಾತ ಹಿಂದೂ ಯುವತಿಯನ್ನು ಪ್ರೀತಿಸಿ, ಮತಾಂತರಿಸಿ ಮದುವೆಯಾಗಿ. ದೇವಿಯ ಹೆಸರನ್ನು ಫಾತೀಮಾ ಎಂದು ಬದಲಾಯಿಸಿದ್ದ. ಅಲ್ಲದೇ ವಿಸಾ ಇಲ್ಲದೇ ಬಾಂಗ್ಲಾದೇಶಕ್ಕೆ ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ.

ಈ ಕುರಿತು ತನಿಖೆ ನಡೆಸುತ್ತಿರುವ ಲೋಹಗಂಜ್ ಪೊಲೀಸ್ ಠಾಣೆ ಎಂಡಿ ಅನಿಚುರ್ ರೆಹೆಮಾನ್ ‘ತಮಿಳುನಾಡಿನಲ್ಲಿರುವ ಯುವತಿಯ ಸಂಬಂಧಿಕರ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಅವರಿಗೆ ಮಾಹಿತಿ ನೀಡಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಪ್ರಸ್ತುತ ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search