• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಬಾಂಗ್ಲಾ ಮುಸ್ಲಿಂ ವ್ಯಕ್ತಿಯೊಂದಿಗೆ ಮದುವೆಯಾಗಿದ್ದ ತಮಿಳು ಹಿಂದೂ ಯುವತಿ ಅನುಮಾನಾಸ್ಪದ ಸಾವು

TNN Correspondent Posted On February 13, 2018
0


0
Shares
  • Share On Facebook
  • Tweet It

ಢಾಕಾ: ಬಾಂಗ್ಲಾದೇಶದ ಮುಸ್ಲಿಂ ವ್ಯಕ್ತಿಯೊಂದಿಗೆ ಮದುವೆಯಾಗಿದ್ದ ತಮಿಳುನಾಡಿನ ಹಿಂದೂ ಯುವತಿ ಬಾಂಗ್ಲಾದೇಶಲ್ಲಿ ಅನುಮಾನಸ್ಪದವಾಗಿ ಮೃತಪಟ್ಟಿದ್ದಾಳೆ. ಕೇಂದ್ರ ಬಾಂಗ್ಲಾದೇಶದ ಮುನ್ಶಿಗಂಜ್ ಜಿಲ್ಲೆಯ ಲೋಹಗಂಜ್ ಠಾಣಾದ ಹಟ್ ವೋಗ್ಡಿಯಾ ಗ್ರಾಮದಲ್ಲಿ ಮೃತಪಟ್ಟಿದ್ದು, ಹಲವು ಅನುಮಾನಗಳನ್ನು ಮೂಡಿಸಿದೆ. ಈ ಘಟನೆ ಶುಕ್ರವಾರ ನಡೆದಿದೆ. ಯುವತಿ ಭಾರತೀಯ ನಾಗರೀಕತ್ವವವನ್ನು ಹೊಂದಿದ್ದು, ತಮಿಳುನಾಡಿನ ಮೂಲದವಳಾಗಿದ್ದಾಳೆ.

ಯುವತಿ ದೇವಿ (ಫಾತೀಮಾ) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ. ಆದರೆ ಯುವತಿಯ ಅಕ್ಕಪಕ್ಕದವರು ಹೇಳುವ ಪ್ರಕಾರ ವಾಸ್ತವವ ಬೇರೆಯೇ ಇದೆ. ಯುವತಿಯ ಪತಿ ಮಾಧಕ ವ್ಯಸನಿಯಾಗಿದ್ದ, ನಿತ್ಯ ಯುವತಿಗೆ ಕಿರುಕುಳ ನೀಡುತ್ತಿದ್ದ. ಯುವತಿ ಸಾಯುವ ಮುನ್ನಾದಿನವೇ ನೆರೆಹೊರೆಯವರು ಇಬ್ಬರ ಜಗಳವನ್ನು ಕೇಳಿಸಿಕೊಂಡಿದ್ದರು ಎನ್ನಲಾಗಿದೆ.

ಯುವತಿ ಮರಣ ಹೊಂದಿದ ತಕ್ಷಣ ಅವಳ ಅತ್ತೆ ಶವವನ್ನು ಹೂತು ಹಾಕಲು ಸಿದ್ಧತೆ ನಡೆಸಿದ್ದಳು. ಆದರೆ ಅನುಮಾನಸ್ಪದ ಸಾವು ಎಂದು ಅರಿತ ಲೋಹಗಂಜ್ ಠಾಣೆ ಪೊಲೀಸರು ಬಿಕ್ರಾಂಪುರ ಸಾರ್ವಜನಿಕ ಆಸ್ಪತ್ರೆಗೆ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಕೊಟ್ಟಿದ್ದಾರೆ ಎಂದು ಢಾಕಾ ಮೂಲದ ಅಂತರ್ಜಾಲ ಪತ್ರಿಕೆ eibela.com ವರದಿ ಮಾಡಿದೆ.

ಕೆಲ ದಿನಗಳ ಹಿಂದೆ ಕೆಲಸ ಅರಸಿ ತಮಿಳುನಾಡಿಗೆ ಬಂದಿದ್ದ ರೀಮು ಎಂಬಾತ ಹಿಂದೂ ಯುವತಿಯನ್ನು ಪ್ರೀತಿಸಿ, ಮತಾಂತರಿಸಿ ಮದುವೆಯಾಗಿ. ದೇವಿಯ ಹೆಸರನ್ನು ಫಾತೀಮಾ ಎಂದು ಬದಲಾಯಿಸಿದ್ದ. ಅಲ್ಲದೇ ವಿಸಾ ಇಲ್ಲದೇ ಬಾಂಗ್ಲಾದೇಶಕ್ಕೆ ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ.

ಈ ಕುರಿತು ತನಿಖೆ ನಡೆಸುತ್ತಿರುವ ಲೋಹಗಂಜ್ ಪೊಲೀಸ್ ಠಾಣೆ ಎಂಡಿ ಅನಿಚುರ್ ರೆಹೆಮಾನ್ ‘ತಮಿಳುನಾಡಿನಲ್ಲಿರುವ ಯುವತಿಯ ಸಂಬಂಧಿಕರ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಅವರಿಗೆ ಮಾಹಿತಿ ನೀಡಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಪ್ರಸ್ತುತ ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ

  • Privacy Policy
  • Contact
© Tulunadu Infomedia.

Press enter/return to begin your search