• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಗ್ರರ ಗುಂಡೇಟಿನಿಂದ ಗಾಯಗೊಂಡ ನಂತರ ಹೆಣ್ಣು ಮಗುವಿಗೆ ಜನ್ಮನೀಡಿದ ಯೋಧನ ಪತ್ನಿ

TNN Correspondent Posted On February 13, 2018
0


0
Shares
  • Share On Facebook
  • Tweet It

ಶ್ರೀನಗರ:  ಜಮ್ಮು ಕಾಶ್ಮೀರದ ಸುಂಜ್ವಾನ್ ಸೇನಾ ಕ್ಯಾಂಪ್ ಮೇಲೆ ಉಗ್ರರ ದಾಳಿ ವೇಳೆ ಗುಂಡೇಟಿನಿಂದ ಗಾಯಗೊಂಡಿದ್ದ ಯೋಧನ ಪತ್ನಿಯೊಬ್ಬರು ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ.

ಶನಿವಾರ ಜೈಷ್ ಎ ಮಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕರು ಶ್ರೀನಗರದ ಸುಂಜನ್ವಾ ಉಗ್ರರ ಸೇನಾ ಶಿಬಿರದ ಮೇಲೆ ತಡರಾತ್ರಿ ದಾಳಿ ನಡೆಸಿದ್ದರು. ಈ ವೇಳೆ ಐದು ಯೋಧರು ಹುತಾತ್ಮರಾಗಿದ್ದರು. ಅಲ್ಲದೇ 11 ಜನ ನಾಗರೀಕರು ಗಾಯಗೊಂಡಿದ್ದರು. ಈ ವೇಳೆ ಅಲ್ಲಿದ್ದ ನಿವಾಸಿಗಳನ್ನು ಸ್ಥಳಾಂತರಿಸಲಾಗಿತ್ತು.

ಉಗ್ರರ ದಾಳಿಯಲ್ಲಿ ಗರ್ಭಿಣಿಯಾಗಿದ್ದ ಯೋಧನ ಪತ್ನಿ ಶಹ್‍ಝಾದಾ ಖಾನ್ ಎಂಬುವವರಿಗೆ ಗುಂಡೇಟು ಬಿದ್ದಿತ್ತು. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು. ಸತ್ವಾರಿ ಮಿಲಿಟರಿ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗು 2.5 ಕೆಜಿ ತೂಕವಿದ್ದು, ಪ್ರಸ್ತುತ ತಾಯಿ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಶಹ್‍ಝಾದಾ ಅವರಿಗೆ ಸಿಜೇರಿಯನ್ ಮೂಲಕ ಹೆರಿಗೆ ಮಾಡಲಾಗಿದೆ. ಉಗ್ರರ ದಾಳಿಯಿಂದಾಗಿ ಐವರು ಯೋಧರು ಹುತಾತ್ಮರಾಗಿದ್ದಾರೆ. ಹಾಗೂ ಒಬ್ಬ ನಾಗರೀಕ  ಮೃತಪಟ್ಟಿದ್ದಾರೆ. ಹುತಾತ್ಮ ಯೋಧ ಸುಬೇದಾರ್ ಮದನ್ ಲಾಲ್ ಚೌಧರ್ ಬರಿಗೈಯಲ್ಲೇ ಯೋಧರನ್ನು ಎದುರಿಸಿದ್ರು.

ಗರ್ಭಿಣಿ ಶಹ್‍ಝಾದಾ ಖಾನ್ ಅವರನ್ನ ಹೆಲಿಕಾಪ್ಟರ್ ಮೂಲಕ ಕ್ಯಾಂಪ್‍ನಿಂದ ಏರ್‍ಲಿಫ್ಟ್ ಮಾಡಿ ಮಿಲಿಟರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ವೈದ್ಯರು ರಾತ್ರಿಯಿಡೀ ಕಾರ್ಯ ನಿರ್ವಹಿಸಿ ತಾಯಿ-ಮಗುವಿನ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಿಳೆಯ ಪತಿ ನಾಜಿರ್ ಅಹ್ಮದ್ ಕೂಡ ಗುಂಡೇಟಿನಿಂದ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search