• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಗ್ರರ ಗುಂಡೇಟಿನಿಂದ ಗಾಯಗೊಂಡ ನಂತರ ಹೆಣ್ಣು ಮಗುವಿಗೆ ಜನ್ಮನೀಡಿದ ಯೋಧನ ಪತ್ನಿ

TNN Correspondent Posted On February 13, 2018
0


0
Shares
  • Share On Facebook
  • Tweet It

ಶ್ರೀನಗರ:  ಜಮ್ಮು ಕಾಶ್ಮೀರದ ಸುಂಜ್ವಾನ್ ಸೇನಾ ಕ್ಯಾಂಪ್ ಮೇಲೆ ಉಗ್ರರ ದಾಳಿ ವೇಳೆ ಗುಂಡೇಟಿನಿಂದ ಗಾಯಗೊಂಡಿದ್ದ ಯೋಧನ ಪತ್ನಿಯೊಬ್ಬರು ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ.

ಶನಿವಾರ ಜೈಷ್ ಎ ಮಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕರು ಶ್ರೀನಗರದ ಸುಂಜನ್ವಾ ಉಗ್ರರ ಸೇನಾ ಶಿಬಿರದ ಮೇಲೆ ತಡರಾತ್ರಿ ದಾಳಿ ನಡೆಸಿದ್ದರು. ಈ ವೇಳೆ ಐದು ಯೋಧರು ಹುತಾತ್ಮರಾಗಿದ್ದರು. ಅಲ್ಲದೇ 11 ಜನ ನಾಗರೀಕರು ಗಾಯಗೊಂಡಿದ್ದರು. ಈ ವೇಳೆ ಅಲ್ಲಿದ್ದ ನಿವಾಸಿಗಳನ್ನು ಸ್ಥಳಾಂತರಿಸಲಾಗಿತ್ತು.

ಉಗ್ರರ ದಾಳಿಯಲ್ಲಿ ಗರ್ಭಿಣಿಯಾಗಿದ್ದ ಯೋಧನ ಪತ್ನಿ ಶಹ್‍ಝಾದಾ ಖಾನ್ ಎಂಬುವವರಿಗೆ ಗುಂಡೇಟು ಬಿದ್ದಿತ್ತು. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು. ಸತ್ವಾರಿ ಮಿಲಿಟರಿ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗು 2.5 ಕೆಜಿ ತೂಕವಿದ್ದು, ಪ್ರಸ್ತುತ ತಾಯಿ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಶಹ್‍ಝಾದಾ ಅವರಿಗೆ ಸಿಜೇರಿಯನ್ ಮೂಲಕ ಹೆರಿಗೆ ಮಾಡಲಾಗಿದೆ. ಉಗ್ರರ ದಾಳಿಯಿಂದಾಗಿ ಐವರು ಯೋಧರು ಹುತಾತ್ಮರಾಗಿದ್ದಾರೆ. ಹಾಗೂ ಒಬ್ಬ ನಾಗರೀಕ  ಮೃತಪಟ್ಟಿದ್ದಾರೆ. ಹುತಾತ್ಮ ಯೋಧ ಸುಬೇದಾರ್ ಮದನ್ ಲಾಲ್ ಚೌಧರ್ ಬರಿಗೈಯಲ್ಲೇ ಯೋಧರನ್ನು ಎದುರಿಸಿದ್ರು.

ಗರ್ಭಿಣಿ ಶಹ್‍ಝಾದಾ ಖಾನ್ ಅವರನ್ನ ಹೆಲಿಕಾಪ್ಟರ್ ಮೂಲಕ ಕ್ಯಾಂಪ್‍ನಿಂದ ಏರ್‍ಲಿಫ್ಟ್ ಮಾಡಿ ಮಿಲಿಟರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ವೈದ್ಯರು ರಾತ್ರಿಯಿಡೀ ಕಾರ್ಯ ನಿರ್ವಹಿಸಿ ತಾಯಿ-ಮಗುವಿನ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಿಳೆಯ ಪತಿ ನಾಜಿರ್ ಅಹ್ಮದ್ ಕೂಡ ಗುಂಡೇಟಿನಿಂದ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search