• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನದಲ್ಲಿ ಹಿಂದೂ ಮಹಿಳೆ ಸೆನೆಟರ್ ಆಯ್ಕೆ ಸಂಭವ

TNN Correspondent Posted On February 14, 2018
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ನಿತ್ಯ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಅತ್ಯಾಚಾರ ಸುದ್ದಿಗಳ ಮಧ್ಯೆಯೇ ಪಾಕಿಸ್ತಾನದಿಂದ ಶುಭ ಸುದ್ದಿಯೊಂದು ಬಂದಿದ್ದು, ಮಾರ್ಚ್ ನಲ್ಲಿ ನಡೆಯಲಿರುವ ಸೆನೆಟರ್ ಆಯ್ಕೆ ಚುನಾವಣೆಗೆ ಹಿಂದೂ ಮಹಿಳೆಯೊಬ್ಬರು ನಾಮಪತ್ರ ಸಲ್ಲಿಸಿದ್ದಾರೆ.

ಪಾಕಿಸ್ತಾನದ ಸಿಂಧ ಪ್ರಾಂತ್ಯದ 38 ವರ್ಷದ ಹಿಂದೂ ಮಹಿಳೆ ಕೃಷ್ಣ ಕುಮಾರಿ ಪಾಕಿಸ್ತಾನ ಪೀಪಲ್ಸ್ ಪಾರ್ಟಿಯಿಂದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಮಾರ್ಚನಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಕೃಷ್ಣಕುಮಾರಿ ಸೆನೆಟರ್ ಆಗಿ ನೇಮಕವಾಗುವ ಸಾಧ್ಯತೆಗಳು ಹೆಚ್ಚಿವೆ.

ಪಾಕಿಸ್ತಾನ ಪೀಪಲ್ಸ್ ಪಕ್ಷದ ಎಲ್ಲ ಸದಸ್ಯರು ಕೃಷ್ಣಕುಮಾರಿಗೆ ಮತ ನೀಡಬೇಕು ಎಂದು ಪಕ್ಷ ಸೂಚನೆ ನೀಡಿದೆ. ಈ ಮೂಲಕ ಕೃಷ್ಣಕುಮಾರಿ 1947ರಿಂದ ಇದುವರೆಗೆ ಹಿಂದೂ ಮಹಿಳೆ ಸೆನೆಟರ್ ಆಯ್ಕೆಯಾದವರಲ್ಲಿ ಎರಡನೆಯವರಾಗಲಿದ್ದಾರೆ.

ಸಿಂಧ ಪ್ರದೇಶದ ಥಾರ್ ನವರಾದ ಕೃಷ್ಣಕುಮಾರಿ ಕಡು ಬಡತನದ ಕುಟುಂಬದಿಂದ ಬಂದವರು. ಪಾಕಿಸ್ತಾನ ಪೀಪಲ್ ಪಾರ್ಟಿ ಕೃಷ್ಣಕುಮಾರಿ ಹೆಸರನ್ನು ಘೋಷಿಸಿದೆ. ಪಾಕಿಸ್ತಾನದ ಪೀಪಲ್ ಪಾರ್ಟಿಯನ್ನು ಸೇರ್ಪಡೆಯಾಗಿರುವ ಅವರ ಸಹೋದರ ಬೆರೆನೋ ಯುನಿಯನ್ ಕೌನ್ಸಿಲ್ ಅಧ್ಯಕ್ಷರಾಗಿದ್ದಾರೆ. ಕಷ್ಟದಲ್ಲೇ ಬೆಳೆದಿರುವ ಕೃಷ್ಣಕುಮಾರಿ ಅವರ ಕುಟುಂಬ ಜಮಿನ್ದಾರ್ ಬಳಿ ಕೆಲಸ ಮಾಡಿದ್ದರು.

16ನೇ ವಯಸ್ಸಿನಲ್ಲಿ ಮದುವೆಯಾದ ಕುಮಾರಿ, ಆಗ 9ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿದ್ದರು. ಆದರೆ ಪತ್ನಿ ಲಾಲಚಂದ್ ಸಹಾಯದಿಂದ 2013ರಲ್ಲಿ ಸಿಂಧ್ ವಿಶ್ವವಿದ್ಯಾಲಯದಿಂದ ಪದವಿ ಪಡೆದರು. ಸಾಮಾಜಿಕ ಕಾರ್ಯಕರ್ತೆಯಾಗಿ ಥಾರ್ ಪ್ರದೇಶದಲ್ಲಿ ಹಲವು ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಅಲ್ಲದೇ ಸಮಾಜ ಸೇವೆಯಲ್ಲಿ ಕುಮಾರಿ ತೊಡಗಿದ್ದಾರೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search