• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೇಂದ್ರದ ಆರೋಗ್ಯ ಭದ್ರತಾ ಯೋಜನೆಗೂ ಮಮತಾ ಬ್ಯಾನರ್ಜಿ ವಿರೋಧ, ಮೋದಿ ವಿರುದ್ಧದ ವಿನಾಕಾರಣ ದ್ವೇಷವೇ ಕಾರಣವೇ?

TNN Correspondent Posted On February 15, 2018


  • Share On Facebook
  • Tweet It

ಕೋಲ್ಕತ್ತಾ: ಈ ಮಮತಾ ಬ್ಯಾನರ್ಜಿಯವರಿಗೆ ಏನಾಗಿದೆ? ಸಿಪಿಎಂ ದುರಾಡಳಿತದ ವಿರುದ್ಧ ಹೋರಾಡಿ ಸಿಎಂ ಆದ ಇವರು, ಮುಖ್ಯಮಂತ್ರಿಯಾದ ಬಳಿಕ ಅಭಿವೃದ್ಧಿ ಯಾವುದು, ಉತ್ತಮ ಆಡಳಿತ ಯಾವುದು ಎಂಬುದನ್ನು ಸಹ ಅರಿಯಲು ಮರೆತುಬಿಟ್ಟರೇ ಎಂಬ ಪ್ರಶ್ನೆ ಕಾಡುತ್ತಿದೆ.

ಅದಕ್ಕೆ ಸಾಕ್ಷಿಯಾಗಿ ಕೇಂದ್ರ ಸರ್ಕಾರ ಜಾರಿಗೆ ತಂದ, ವಿಶ್ವದ ಗಮನ ಸೆಳೆದ ನೋಟು ನಿಷೇದ, ಸರಕು ಮತ್ತು ಸೇವಾ ತೆರಿಗೆಗೂ ಮಮತಾ ಬ್ಯಾನರ್ಜಿ ವಿರೋಧ ವ್ಯಕ್ತಪಡಿಸಿದರು. ಇಡೀ ದೇಶದ ಜನರೇ ಈ ಯೋಜನೆ ಬೆಂಬಲಿಸಿದರೂ, ಮೋದಿ ವಿರುದ್ಧ ತಾವು ಹೊಂದಿರುವ ಆಕ್ರೋಶ, ವಿನಾಕಾರಣ ದ್ವೇಷವೇ ಮಮತಾ ಬ್ಯಾನರ್ಜಿ ಅವರಿಗೆ ಹೀಗೆ ಮಾಡಿಸಿರಬೇಕು.

ಈಗ ಮತ್ತದೇ ರಾಗ ಹಾಡಿರುವ ಮಮತಾ ಬ್ಯಾನರ್ಜಿಯವರು, ಕೇಂದ್ರ ಸರ್ಕಾರ ಕಳೆದ ಬಜೆಟ್ಟಿನಲ್ಲಿ ಘೋಷಿಸಿರುವ, ವಿಶ್ವದ ಬೃಹತ್ ಆರೋಗ್ಯ ಭದ್ರತಾ ಯೋಜನೆ ಎಂದೇ ಖ್ಯಾತಿಯಾಗಿರುವ ರಾಷ್ಟ್ರೀಯ ಆರೋಗ್ಯ ಭದ್ರತಾ ಯೋಜನೆಗೆ ಬ್ಯಾನರ್ಜಿ ವಿರೋಧ ವ್ಯಕ್ತಪಡಿಸಿದ್ದಾರೆ.

ದೇಶದ ಸುಮಾರು 10 ಕೋಟಿ ಕುಟುಂಬಗಳು ಕೆಳ ಹಾಗೂ ಮಧ್ಯಮ ದರ್ಜೆಯ ಆಸ್ಪತ್ರೆಗಳಲ್ಲಿ ವಾರ್ಷಿಕ 5 ಲಕ್ಷ ರೂಪಾಯಿವರೆಗೆ ಚಿಕಿತ್ಸೆ ಪಡೆಯುವ ಸೌಲಭ್ಯವಿರುವ, ಸುಮಾರು 50 ಕೋಟಿ ಜನರಿಗೆ ಅನುಕೂಲ ಇರುವ ಯೋಜನೆಯನ್ನೇ ಮಮತಾ ವಿರೋಧಿಸುತ್ತಾರೆ, ಎಂದರೆ ಮಮತಾ ಎಷ್ಟರಮಟ್ಟಿಗೆ ಅಭಿವೃದ್ಧಿ ಹಾಗೂ ಜನಕಲ್ಯಾಣದ ಪರ ಇದ್ದಾರೆ ಎಂಬುದು ಸಾಬೀತಾಗುತ್ತದೆ.

ನಮಗೆ ಕೇಂದ್ರ ಸರ್ಕಾರದ ಯಾವುದೇ ಯೋಜನೆ, ನೆರವು ಬೇಕಾಗಿಲ್ಲ. ನಾವು ಈಗಾಗಲೇ ರಾಜ್ಯದಲ್ಲಿ ಜನರಿಗೆ ಆರೋಗ್ಯ ಸುಧಾರಣೆಗಾಗಿ ಯೋಜನೆ ಜಾರಿಗೊಳಿಸಿವೆ. ರಾಷ್ಟ್ರೀಯ ಆರೋಗ್ಯ ಭದ್ರತಾ ಯೋಜನೆಯಲ್ಲಿ ಯಾವುದೇ ಹೊಸತನವಿಲ್ಲ ಎಂದು ಮಮತಾ ಉದ್ಧಟತನದ ಹೇಳಿಕೆ ಸಹ ನೀಡಿದ್ದಾರೆ.

  • Share On Facebook
  • Tweet It


- Advertisement -


Trending Now
ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
Tulunadu News September 29, 2023
ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
Tulunadu News September 29, 2023
Leave A Reply

  • Recent Posts

    • ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
  • Popular Posts

    • 1
      ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • 2
      ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • 3
      ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • 4
      ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • 5
      ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search