• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಂದ್ರದ ಆರೋಗ್ಯ ಭದ್ರತಾ ಯೋಜನೆಗೂ ಮಮತಾ ಬ್ಯಾನರ್ಜಿ ವಿರೋಧ, ಮೋದಿ ವಿರುದ್ಧದ ವಿನಾಕಾರಣ ದ್ವೇಷವೇ ಕಾರಣವೇ?

TNN Correspondent Posted On February 15, 2018
0


0
Shares
  • Share On Facebook
  • Tweet It

ಕೋಲ್ಕತ್ತಾ: ಈ ಮಮತಾ ಬ್ಯಾನರ್ಜಿಯವರಿಗೆ ಏನಾಗಿದೆ? ಸಿಪಿಎಂ ದುರಾಡಳಿತದ ವಿರುದ್ಧ ಹೋರಾಡಿ ಸಿಎಂ ಆದ ಇವರು, ಮುಖ್ಯಮಂತ್ರಿಯಾದ ಬಳಿಕ ಅಭಿವೃದ್ಧಿ ಯಾವುದು, ಉತ್ತಮ ಆಡಳಿತ ಯಾವುದು ಎಂಬುದನ್ನು ಸಹ ಅರಿಯಲು ಮರೆತುಬಿಟ್ಟರೇ ಎಂಬ ಪ್ರಶ್ನೆ ಕಾಡುತ್ತಿದೆ.

ಅದಕ್ಕೆ ಸಾಕ್ಷಿಯಾಗಿ ಕೇಂದ್ರ ಸರ್ಕಾರ ಜಾರಿಗೆ ತಂದ, ವಿಶ್ವದ ಗಮನ ಸೆಳೆದ ನೋಟು ನಿಷೇದ, ಸರಕು ಮತ್ತು ಸೇವಾ ತೆರಿಗೆಗೂ ಮಮತಾ ಬ್ಯಾನರ್ಜಿ ವಿರೋಧ ವ್ಯಕ್ತಪಡಿಸಿದರು. ಇಡೀ ದೇಶದ ಜನರೇ ಈ ಯೋಜನೆ ಬೆಂಬಲಿಸಿದರೂ, ಮೋದಿ ವಿರುದ್ಧ ತಾವು ಹೊಂದಿರುವ ಆಕ್ರೋಶ, ವಿನಾಕಾರಣ ದ್ವೇಷವೇ ಮಮತಾ ಬ್ಯಾನರ್ಜಿ ಅವರಿಗೆ ಹೀಗೆ ಮಾಡಿಸಿರಬೇಕು.

ಈಗ ಮತ್ತದೇ ರಾಗ ಹಾಡಿರುವ ಮಮತಾ ಬ್ಯಾನರ್ಜಿಯವರು, ಕೇಂದ್ರ ಸರ್ಕಾರ ಕಳೆದ ಬಜೆಟ್ಟಿನಲ್ಲಿ ಘೋಷಿಸಿರುವ, ವಿಶ್ವದ ಬೃಹತ್ ಆರೋಗ್ಯ ಭದ್ರತಾ ಯೋಜನೆ ಎಂದೇ ಖ್ಯಾತಿಯಾಗಿರುವ ರಾಷ್ಟ್ರೀಯ ಆರೋಗ್ಯ ಭದ್ರತಾ ಯೋಜನೆಗೆ ಬ್ಯಾನರ್ಜಿ ವಿರೋಧ ವ್ಯಕ್ತಪಡಿಸಿದ್ದಾರೆ.

ದೇಶದ ಸುಮಾರು 10 ಕೋಟಿ ಕುಟುಂಬಗಳು ಕೆಳ ಹಾಗೂ ಮಧ್ಯಮ ದರ್ಜೆಯ ಆಸ್ಪತ್ರೆಗಳಲ್ಲಿ ವಾರ್ಷಿಕ 5 ಲಕ್ಷ ರೂಪಾಯಿವರೆಗೆ ಚಿಕಿತ್ಸೆ ಪಡೆಯುವ ಸೌಲಭ್ಯವಿರುವ, ಸುಮಾರು 50 ಕೋಟಿ ಜನರಿಗೆ ಅನುಕೂಲ ಇರುವ ಯೋಜನೆಯನ್ನೇ ಮಮತಾ ವಿರೋಧಿಸುತ್ತಾರೆ, ಎಂದರೆ ಮಮತಾ ಎಷ್ಟರಮಟ್ಟಿಗೆ ಅಭಿವೃದ್ಧಿ ಹಾಗೂ ಜನಕಲ್ಯಾಣದ ಪರ ಇದ್ದಾರೆ ಎಂಬುದು ಸಾಬೀತಾಗುತ್ತದೆ.

ನಮಗೆ ಕೇಂದ್ರ ಸರ್ಕಾರದ ಯಾವುದೇ ಯೋಜನೆ, ನೆರವು ಬೇಕಾಗಿಲ್ಲ. ನಾವು ಈಗಾಗಲೇ ರಾಜ್ಯದಲ್ಲಿ ಜನರಿಗೆ ಆರೋಗ್ಯ ಸುಧಾರಣೆಗಾಗಿ ಯೋಜನೆ ಜಾರಿಗೊಳಿಸಿವೆ. ರಾಷ್ಟ್ರೀಯ ಆರೋಗ್ಯ ಭದ್ರತಾ ಯೋಜನೆಯಲ್ಲಿ ಯಾವುದೇ ಹೊಸತನವಿಲ್ಲ ಎಂದು ಮಮತಾ ಉದ್ಧಟತನದ ಹೇಳಿಕೆ ಸಹ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search