• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೇಂದ್ರದ ಆರೋಗ್ಯ ಭದ್ರತಾ ಯೋಜನೆಗೂ ಮಮತಾ ಬ್ಯಾನರ್ಜಿ ವಿರೋಧ, ಮೋದಿ ವಿರುದ್ಧದ ವಿನಾಕಾರಣ ದ್ವೇಷವೇ ಕಾರಣವೇ?

TNN Correspondent Posted On February 15, 2018


  • Share On Facebook
  • Tweet It

ಕೋಲ್ಕತ್ತಾ: ಈ ಮಮತಾ ಬ್ಯಾನರ್ಜಿಯವರಿಗೆ ಏನಾಗಿದೆ? ಸಿಪಿಎಂ ದುರಾಡಳಿತದ ವಿರುದ್ಧ ಹೋರಾಡಿ ಸಿಎಂ ಆದ ಇವರು, ಮುಖ್ಯಮಂತ್ರಿಯಾದ ಬಳಿಕ ಅಭಿವೃದ್ಧಿ ಯಾವುದು, ಉತ್ತಮ ಆಡಳಿತ ಯಾವುದು ಎಂಬುದನ್ನು ಸಹ ಅರಿಯಲು ಮರೆತುಬಿಟ್ಟರೇ ಎಂಬ ಪ್ರಶ್ನೆ ಕಾಡುತ್ತಿದೆ.

ಅದಕ್ಕೆ ಸಾಕ್ಷಿಯಾಗಿ ಕೇಂದ್ರ ಸರ್ಕಾರ ಜಾರಿಗೆ ತಂದ, ವಿಶ್ವದ ಗಮನ ಸೆಳೆದ ನೋಟು ನಿಷೇದ, ಸರಕು ಮತ್ತು ಸೇವಾ ತೆರಿಗೆಗೂ ಮಮತಾ ಬ್ಯಾನರ್ಜಿ ವಿರೋಧ ವ್ಯಕ್ತಪಡಿಸಿದರು. ಇಡೀ ದೇಶದ ಜನರೇ ಈ ಯೋಜನೆ ಬೆಂಬಲಿಸಿದರೂ, ಮೋದಿ ವಿರುದ್ಧ ತಾವು ಹೊಂದಿರುವ ಆಕ್ರೋಶ, ವಿನಾಕಾರಣ ದ್ವೇಷವೇ ಮಮತಾ ಬ್ಯಾನರ್ಜಿ ಅವರಿಗೆ ಹೀಗೆ ಮಾಡಿಸಿರಬೇಕು.

ಈಗ ಮತ್ತದೇ ರಾಗ ಹಾಡಿರುವ ಮಮತಾ ಬ್ಯಾನರ್ಜಿಯವರು, ಕೇಂದ್ರ ಸರ್ಕಾರ ಕಳೆದ ಬಜೆಟ್ಟಿನಲ್ಲಿ ಘೋಷಿಸಿರುವ, ವಿಶ್ವದ ಬೃಹತ್ ಆರೋಗ್ಯ ಭದ್ರತಾ ಯೋಜನೆ ಎಂದೇ ಖ್ಯಾತಿಯಾಗಿರುವ ರಾಷ್ಟ್ರೀಯ ಆರೋಗ್ಯ ಭದ್ರತಾ ಯೋಜನೆಗೆ ಬ್ಯಾನರ್ಜಿ ವಿರೋಧ ವ್ಯಕ್ತಪಡಿಸಿದ್ದಾರೆ.

ದೇಶದ ಸುಮಾರು 10 ಕೋಟಿ ಕುಟುಂಬಗಳು ಕೆಳ ಹಾಗೂ ಮಧ್ಯಮ ದರ್ಜೆಯ ಆಸ್ಪತ್ರೆಗಳಲ್ಲಿ ವಾರ್ಷಿಕ 5 ಲಕ್ಷ ರೂಪಾಯಿವರೆಗೆ ಚಿಕಿತ್ಸೆ ಪಡೆಯುವ ಸೌಲಭ್ಯವಿರುವ, ಸುಮಾರು 50 ಕೋಟಿ ಜನರಿಗೆ ಅನುಕೂಲ ಇರುವ ಯೋಜನೆಯನ್ನೇ ಮಮತಾ ವಿರೋಧಿಸುತ್ತಾರೆ, ಎಂದರೆ ಮಮತಾ ಎಷ್ಟರಮಟ್ಟಿಗೆ ಅಭಿವೃದ್ಧಿ ಹಾಗೂ ಜನಕಲ್ಯಾಣದ ಪರ ಇದ್ದಾರೆ ಎಂಬುದು ಸಾಬೀತಾಗುತ್ತದೆ.

ನಮಗೆ ಕೇಂದ್ರ ಸರ್ಕಾರದ ಯಾವುದೇ ಯೋಜನೆ, ನೆರವು ಬೇಕಾಗಿಲ್ಲ. ನಾವು ಈಗಾಗಲೇ ರಾಜ್ಯದಲ್ಲಿ ಜನರಿಗೆ ಆರೋಗ್ಯ ಸುಧಾರಣೆಗಾಗಿ ಯೋಜನೆ ಜಾರಿಗೊಳಿಸಿವೆ. ರಾಷ್ಟ್ರೀಯ ಆರೋಗ್ಯ ಭದ್ರತಾ ಯೋಜನೆಯಲ್ಲಿ ಯಾವುದೇ ಹೊಸತನವಿಲ್ಲ ಎಂದು ಮಮತಾ ಉದ್ಧಟತನದ ಹೇಳಿಕೆ ಸಹ ನೀಡಿದ್ದಾರೆ.

  • Share On Facebook
  • Tweet It


- Advertisement -


Trending Now
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
Tulunadu News March 27, 2023
Leave A Reply

  • Recent Posts

    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
  • Popular Posts

    • 1
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 2
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 3
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 4
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 5
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search