• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಜ್ರಿವಾಲ್ ಸರ್ಕಾರಕ್ಕೆ ವರ್ಷ ಮೂರು, ವೈಫಲ್ಯಗಳವು ನೂರಾರು!

TNN Correspondent Posted On February 15, 2018
0


0
Shares
  • Share On Facebook
  • Tweet It

ಅದು 2015. ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಬೇಸತ್ತಿದ್ದ ಜನ ಹಾಗೂ ಜನಲೋಕಪಾಲ್ ಬಿಲ್ ಜಾರಿಗಾಗಿ ಹೋರಾಟ ನಡೆಸುತ್ತಿದ್ದ ಅಣ್ಣಾ ಹಜಾರೆ ಪಕ್ಕ ಕುಳಿತಿದ್ದ ಅರವಿಂದ್ ಕೇಜ್ರಿವಾಲ್ ಅವರನ್ನು ನೋಡಿದ್ದ ಜನ, ಆಮ್ ಆದ್ಮಿ ಪಕ್ಷಕ್ಕೆ ಮತ ನೀಡಿ ಗೆಲ್ಲಿಸಿದ್ದರು. ಅದಾವುದೋ ವಿಶ್ವಾಸ ಇಟ್ಟು ಮತ ನೀಡಿದ್ದರು.

ಆದರೆ ಈ ಮೂರು ವರ್ಷಗಳಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ಹೇಗೆ ಆಡಳಿತ ನಡೆಸಿದ, ನೀಡಿದ ಭರವಸೆಗಳೆಲ್ಲವನ್ನೂ ಈಡೇರಿಸಿದೆಯಾ? ದೆಹಲಿಯನ್ನು ಅಭಿವೃದ್ಧಿಗೊಳಿಸಿದೆಯಾ? ಯಾವಾಗಲೂ ಕೇಂದ್ರ ಸರ್ಕಾರವನ್ನೇ ಟೀಕಿಸುವ ಅರವಿಂದ್ ಕೇಜ್ರಿವಾಲ್ ದೆಹಲಿಯಲ್ಲಿ ಯಾವ ರೀತಿ ಆಡಳಿತ ನಡೆಸಿದ್ದಾರೆ?

ಇಲ್ಲ, ದೆಹಲಿ ಸರ್ಕಾರ ನೀಡಿದ ಭರವಸೆ ಈಡೇರಿಸಿಲ್ಲ ಎಂಬುದು ಸ್ಪಷ್ಟವಾಗುತ್ತದೆ. ಹೌದು, ಈ ಮೂರು ವರ್ಷಗಳ ಅವಧಿಯ ಆಪ್ ಸರ್ಕಾರದ ಮಾರ್ಕ್ಸ್ ಕಾರ್ಡ್ ನೋಡಿದರೆ, ಅರವಿಂದ್ ಕೇಜ್ರಿವಾಲ್ ಮೂರು ವರ್ಷದಲ್ಲಿ ಬರೀ ವೈಫಲ್ಯ, ಭರವಸೆ ಈಡೇರಿಸದಿರುವಿಕೆಯೇ ಕಾಣುತ್ತದೆ. ಹಾಗಾದರೆ ಆಪ್ ಸರ್ಕಾರ ಜನರಿಗೆ ನೀಡಿದ ಭರವಸೆ ಏನಾಗಿದ್ದವು, ಯಾವ ಯೋಜನೆ ಘೋಷಿಸಿದ್ದರು? ಅವುಗಳ ಸ್ಥಿತಿ ಏನು? ಹೇಗೆ ಸರ್ಕಾರ ವೈಫಲ್ಯವಾಗಿದೆ ಎಂಬುದಕ್ಕೆ ಇಲ್ಲೊಂದಿಷ್ಟು ಅಂಶಗಳಿವೆ ನೋಡಿ.

  • ಮೊದಲಿಗೆ ಸಾರಿಗೆ ವಿಚಾರಕ್ಕೆ ಬರುವುದಾದರೆ ದೆಹಲಿಯಲ್ಲಿ 2000 ಹವಾನಿಯಂತ್ರಣ ರಹಿತ (ಎಸಿ), 1000 ಹವಾ ನಿಯಂತ್ರಿತ (ಎಸಿ) ನೂತನ ಬಸ್ ಸೌಲಭ್ಯ ನೀಡುವುದಾಗಿ ಭರವಸೆ ನೀಡಿದ್ದರು ಕೇಜ್ರಿವಾಲ್, ಅದಾವುದೂ ಈಡೇರಿಲ್ಲ.
  • ರಾಜ್ಯಾದ್ಯಂತ ಐದು ಕಿಲೋ ಮೀಟರ್ ಗೆ ಒಂದರಂತೆ ಸುಮಾರು 1000 ಕ್ಲಿನಿಕ್ ತೆರೆಯುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ ಇದುವರೆಗೆ ಕೇಂದ್ರಾಡಳಿತ ಪ್ರದೇಶದಲ್ಲಿ 160 ಕ್ಲಿನಿಕ್ ಮಾತ್ರ ತೆರೆಯಲಾಗಿದೆ.
  • ಅಧಿಕಾರಕ್ಕೆ ಬಂದರೆ ಎಲ್ಲರಿಗೂ ಉಚಿತ ವೈಫೈ ನೀಡುತ್ತೇವೆ ಎಂದು ಆಪ್ ಪ್ರಣಾಳಿಕೆಯಲ್ಲಿ ಘೋಷಿಸಲಾಗಿತ್ತು. ಇದುವರೆಗೆ ಉಚಿತ ವೈಫೈ ನೀಡುವುದು ಬಿಡಿ, ಯೋಜನೆ ಜಾರಿಗೆ ಟೆಂಡರ್ ಸಹ ಕರೆದಿಲ್ಲ.
  • ಜನರಿಗೆ ಕಡಿಮೆ ಹಣದಲ್ಲಿ ಊಟ ನೀಡಲು ಒಂದು ನೂರು “ಆಮ್ ಆದ್ಮಿ ಕ್ಯಾಂಟೀನ್’’ ತೆರೆಯುತ್ತೇವೆ ಎಂದು ಕೇಜ್ರಿವಾಲ್ ಅವರು ಬಡಾಯಿ ಕೊಚ್ಚಿಕೊಂಡಿದ್ದರು. ಆದರೆ ಒಂದೇ ಒಂದು ತೆರೆಯಲಾಗಿತ್ತು ಹಾಗೂ ಎರಡೇ ತಿಂಗಳಲ್ಲಿ ಅದನ್ನು ಮುಚ್ಚಲಾಯಿತು.
  • ದೆಹಲಿಯಾದ್ಯಂತ ಸುಮಾರು 1.5 ಲಕ್ಷ ಸಮುದಾಯ ಶೌಚಾಲಯ ನಿರ್ಮಿಸಿ ಜನರಿಗೆ ಅನುಕೂಲ ಮಾಡುತ್ತೇವೆ ಎಂದು ನೀಡಿದ್ದ ಭರವಸೆ ಸುಳ್ಳಾಗಿದ್ದು, ಇದುವರೆಗೆ ಕೇವಲ 21 ಸಾವಿರ ಶೌಚಾಲಯ ನಿರ್ಮಿಸಲಾಗಿದೆ.
  • 5 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಿ ದೆಹಲಿಯ ಸುಮಾರು 10 ಪ್ರಮುಖ ರಸ್ತೆಗಳನ್ನು ಮರು ಡಾಂಬರೀಕರಣ ಮಾಡಿ ಸಂಚಾರಕ್ಕೆ ಅನುಕೂಲ ಮಾಡುತ್ತೇವೆ ಎಂಬ ಭರವಸೆ ಇನ್ನೂ ಭರವಸೆಯಾಗಿಯೇ ಉಳಿದಿದೆ.
  • ಅಕ್ರಮವಾಗಿ ನಿರ್ಮಿಸಿದ ಬಡಾವಣೆ ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲವಾಗುವ ಯೋಜನೆ ಜಾರಿಗೊಳಿಸುತ್ತೇವೆ ಎಂದಿತ್ತು ಸರ್ಕಾರ. ಮೂರು ವರ್ಷದಿಂದ ಇನ್ನೂ ಸರ್ವೇಯಲ್ಲೇ ಕಾಲಕಳೆಯುತ್ತಿದೆ.

ಇಷ್ಟೇ ಅಲ್ಲ, ಮನೆ ಬಾಗಿಲಿಗೆ ಸರ್ಕಾರದ ಯೋಜನೆ ತಲುಪಿಸುವುದು, ಆರೋಗ್ಯ ಕಾರ್ಡ್ ವಿತರಣೆ, ವಿದ್ಯುತ್ ಚಾಲಿತ ಬಸ್ ಸೇರಿ ಹಲವು ಯೋಜನೆಗಳು ಸರ್ಕಾರದ ಮುಂದಿವೆ. ಆದರೆ ಯಾವ ಯೋಜನೆಯನ್ನೂ ಸಮರ್ಪಕವಾಗಿ ಮಾಡದೆ ಜನರಿಗೆ ಬರೀ ಭರವಸೆಯಲ್ಲೇ ಸರ್ಕಾರ ಕಾಲ ಕಳೆಯುತ್ತಿದೆ. ಇದರ ನಡುವೆಯ ಪಕ್ಷದ ಆಂತರಿಕ ಭಿನ್ನಮತ, 21 ಶಾಸಕರ ಅಮಾನತು ಸೇರಿ ಹಲವು ಹಗರಣಗಳು ಕೇಜ್ರಿವಾಲ್ ಸರ್ಕಾರದ ಮೇಲಿವೆ. ಒಟ್ಟಿನಲ್ಲಿ ಜನರಿಗೆ ನೀಡಿದ ಭರವಸೆ ಈಡೇರಿಸುವಲ್ಲಿ ಮಾತ್ರ ಆಫ್ ವಿಫಲವಾಗಿದೆ ಎಂಬುದು ಅಂಕಿ-ಅಂಶಗಳಿಂದ ಸಾಬೀತಾಗಿದೆ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search