• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಜ್ರಿವಾಲ್ ಸರ್ಕಾರಕ್ಕೆ ವರ್ಷ ಮೂರು, ವೈಫಲ್ಯಗಳವು ನೂರಾರು!

TNN Correspondent Posted On February 15, 2018
0


0
Shares
  • Share On Facebook
  • Tweet It

ಅದು 2015. ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಬೇಸತ್ತಿದ್ದ ಜನ ಹಾಗೂ ಜನಲೋಕಪಾಲ್ ಬಿಲ್ ಜಾರಿಗಾಗಿ ಹೋರಾಟ ನಡೆಸುತ್ತಿದ್ದ ಅಣ್ಣಾ ಹಜಾರೆ ಪಕ್ಕ ಕುಳಿತಿದ್ದ ಅರವಿಂದ್ ಕೇಜ್ರಿವಾಲ್ ಅವರನ್ನು ನೋಡಿದ್ದ ಜನ, ಆಮ್ ಆದ್ಮಿ ಪಕ್ಷಕ್ಕೆ ಮತ ನೀಡಿ ಗೆಲ್ಲಿಸಿದ್ದರು. ಅದಾವುದೋ ವಿಶ್ವಾಸ ಇಟ್ಟು ಮತ ನೀಡಿದ್ದರು.

ಆದರೆ ಈ ಮೂರು ವರ್ಷಗಳಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ಹೇಗೆ ಆಡಳಿತ ನಡೆಸಿದ, ನೀಡಿದ ಭರವಸೆಗಳೆಲ್ಲವನ್ನೂ ಈಡೇರಿಸಿದೆಯಾ? ದೆಹಲಿಯನ್ನು ಅಭಿವೃದ್ಧಿಗೊಳಿಸಿದೆಯಾ? ಯಾವಾಗಲೂ ಕೇಂದ್ರ ಸರ್ಕಾರವನ್ನೇ ಟೀಕಿಸುವ ಅರವಿಂದ್ ಕೇಜ್ರಿವಾಲ್ ದೆಹಲಿಯಲ್ಲಿ ಯಾವ ರೀತಿ ಆಡಳಿತ ನಡೆಸಿದ್ದಾರೆ?

ಇಲ್ಲ, ದೆಹಲಿ ಸರ್ಕಾರ ನೀಡಿದ ಭರವಸೆ ಈಡೇರಿಸಿಲ್ಲ ಎಂಬುದು ಸ್ಪಷ್ಟವಾಗುತ್ತದೆ. ಹೌದು, ಈ ಮೂರು ವರ್ಷಗಳ ಅವಧಿಯ ಆಪ್ ಸರ್ಕಾರದ ಮಾರ್ಕ್ಸ್ ಕಾರ್ಡ್ ನೋಡಿದರೆ, ಅರವಿಂದ್ ಕೇಜ್ರಿವಾಲ್ ಮೂರು ವರ್ಷದಲ್ಲಿ ಬರೀ ವೈಫಲ್ಯ, ಭರವಸೆ ಈಡೇರಿಸದಿರುವಿಕೆಯೇ ಕಾಣುತ್ತದೆ. ಹಾಗಾದರೆ ಆಪ್ ಸರ್ಕಾರ ಜನರಿಗೆ ನೀಡಿದ ಭರವಸೆ ಏನಾಗಿದ್ದವು, ಯಾವ ಯೋಜನೆ ಘೋಷಿಸಿದ್ದರು? ಅವುಗಳ ಸ್ಥಿತಿ ಏನು? ಹೇಗೆ ಸರ್ಕಾರ ವೈಫಲ್ಯವಾಗಿದೆ ಎಂಬುದಕ್ಕೆ ಇಲ್ಲೊಂದಿಷ್ಟು ಅಂಶಗಳಿವೆ ನೋಡಿ.

  • ಮೊದಲಿಗೆ ಸಾರಿಗೆ ವಿಚಾರಕ್ಕೆ ಬರುವುದಾದರೆ ದೆಹಲಿಯಲ್ಲಿ 2000 ಹವಾನಿಯಂತ್ರಣ ರಹಿತ (ಎಸಿ), 1000 ಹವಾ ನಿಯಂತ್ರಿತ (ಎಸಿ) ನೂತನ ಬಸ್ ಸೌಲಭ್ಯ ನೀಡುವುದಾಗಿ ಭರವಸೆ ನೀಡಿದ್ದರು ಕೇಜ್ರಿವಾಲ್, ಅದಾವುದೂ ಈಡೇರಿಲ್ಲ.
  • ರಾಜ್ಯಾದ್ಯಂತ ಐದು ಕಿಲೋ ಮೀಟರ್ ಗೆ ಒಂದರಂತೆ ಸುಮಾರು 1000 ಕ್ಲಿನಿಕ್ ತೆರೆಯುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ ಇದುವರೆಗೆ ಕೇಂದ್ರಾಡಳಿತ ಪ್ರದೇಶದಲ್ಲಿ 160 ಕ್ಲಿನಿಕ್ ಮಾತ್ರ ತೆರೆಯಲಾಗಿದೆ.
  • ಅಧಿಕಾರಕ್ಕೆ ಬಂದರೆ ಎಲ್ಲರಿಗೂ ಉಚಿತ ವೈಫೈ ನೀಡುತ್ತೇವೆ ಎಂದು ಆಪ್ ಪ್ರಣಾಳಿಕೆಯಲ್ಲಿ ಘೋಷಿಸಲಾಗಿತ್ತು. ಇದುವರೆಗೆ ಉಚಿತ ವೈಫೈ ನೀಡುವುದು ಬಿಡಿ, ಯೋಜನೆ ಜಾರಿಗೆ ಟೆಂಡರ್ ಸಹ ಕರೆದಿಲ್ಲ.
  • ಜನರಿಗೆ ಕಡಿಮೆ ಹಣದಲ್ಲಿ ಊಟ ನೀಡಲು ಒಂದು ನೂರು “ಆಮ್ ಆದ್ಮಿ ಕ್ಯಾಂಟೀನ್’’ ತೆರೆಯುತ್ತೇವೆ ಎಂದು ಕೇಜ್ರಿವಾಲ್ ಅವರು ಬಡಾಯಿ ಕೊಚ್ಚಿಕೊಂಡಿದ್ದರು. ಆದರೆ ಒಂದೇ ಒಂದು ತೆರೆಯಲಾಗಿತ್ತು ಹಾಗೂ ಎರಡೇ ತಿಂಗಳಲ್ಲಿ ಅದನ್ನು ಮುಚ್ಚಲಾಯಿತು.
  • ದೆಹಲಿಯಾದ್ಯಂತ ಸುಮಾರು 1.5 ಲಕ್ಷ ಸಮುದಾಯ ಶೌಚಾಲಯ ನಿರ್ಮಿಸಿ ಜನರಿಗೆ ಅನುಕೂಲ ಮಾಡುತ್ತೇವೆ ಎಂದು ನೀಡಿದ್ದ ಭರವಸೆ ಸುಳ್ಳಾಗಿದ್ದು, ಇದುವರೆಗೆ ಕೇವಲ 21 ಸಾವಿರ ಶೌಚಾಲಯ ನಿರ್ಮಿಸಲಾಗಿದೆ.
  • 5 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಿ ದೆಹಲಿಯ ಸುಮಾರು 10 ಪ್ರಮುಖ ರಸ್ತೆಗಳನ್ನು ಮರು ಡಾಂಬರೀಕರಣ ಮಾಡಿ ಸಂಚಾರಕ್ಕೆ ಅನುಕೂಲ ಮಾಡುತ್ತೇವೆ ಎಂಬ ಭರವಸೆ ಇನ್ನೂ ಭರವಸೆಯಾಗಿಯೇ ಉಳಿದಿದೆ.
  • ಅಕ್ರಮವಾಗಿ ನಿರ್ಮಿಸಿದ ಬಡಾವಣೆ ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲವಾಗುವ ಯೋಜನೆ ಜಾರಿಗೊಳಿಸುತ್ತೇವೆ ಎಂದಿತ್ತು ಸರ್ಕಾರ. ಮೂರು ವರ್ಷದಿಂದ ಇನ್ನೂ ಸರ್ವೇಯಲ್ಲೇ ಕಾಲಕಳೆಯುತ್ತಿದೆ.

ಇಷ್ಟೇ ಅಲ್ಲ, ಮನೆ ಬಾಗಿಲಿಗೆ ಸರ್ಕಾರದ ಯೋಜನೆ ತಲುಪಿಸುವುದು, ಆರೋಗ್ಯ ಕಾರ್ಡ್ ವಿತರಣೆ, ವಿದ್ಯುತ್ ಚಾಲಿತ ಬಸ್ ಸೇರಿ ಹಲವು ಯೋಜನೆಗಳು ಸರ್ಕಾರದ ಮುಂದಿವೆ. ಆದರೆ ಯಾವ ಯೋಜನೆಯನ್ನೂ ಸಮರ್ಪಕವಾಗಿ ಮಾಡದೆ ಜನರಿಗೆ ಬರೀ ಭರವಸೆಯಲ್ಲೇ ಸರ್ಕಾರ ಕಾಲ ಕಳೆಯುತ್ತಿದೆ. ಇದರ ನಡುವೆಯ ಪಕ್ಷದ ಆಂತರಿಕ ಭಿನ್ನಮತ, 21 ಶಾಸಕರ ಅಮಾನತು ಸೇರಿ ಹಲವು ಹಗರಣಗಳು ಕೇಜ್ರಿವಾಲ್ ಸರ್ಕಾರದ ಮೇಲಿವೆ. ಒಟ್ಟಿನಲ್ಲಿ ಜನರಿಗೆ ನೀಡಿದ ಭರವಸೆ ಈಡೇರಿಸುವಲ್ಲಿ ಮಾತ್ರ ಆಫ್ ವಿಫಲವಾಗಿದೆ ಎಂಬುದು ಅಂಕಿ-ಅಂಶಗಳಿಂದ ಸಾಬೀತಾಗಿದೆ.

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search