• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಉಗ್ರರಲ್ಲಿ ಮುಸ್ಲಿಮರ ಸಂಖ್ಯೆ ಎಷ್ಟು ಗೊತ್ತೆ ಓವೈಸಿ?: ಸುಬ್ರಮಣಿಯನ್ ಸ್ವಾಮಿ

TNN Correspondent Posted On February 15, 2018


  • Share On Facebook
  • Tweet It

ದೆಹಲಿ: ದೇಶಕ್ಕಾಗಿ ಜಾತಿ, ಧರ್ಮ ಮೀರಿ ಜೀವನ್ಮರಣದ ಮಧ್ಯೆ ಹೋರಾಡುವ ಯೋಧರಲ್ಲೂ ಧರ್ಮದ ವಿಷ ಬೀಜ ಬಿತ್ತಲು ಪ್ರಯತ್ನಿಸಿದ ಎಐಎಂಐಎಂ ಮುಖ್ಯಸ್ಥ ಅಸಾವುದ್ದೀನ್ ಓವೈಸಿಗೆ ನಿನ್ನೆ ಸೇನೆಯ ಹಿರಿಯ ಅಧಿಕಾರಿಗಳು ಖಡಕ್ ಉತ್ತರ ನೀಡಿದ್ದರು. ಇದೀಗ ಬಿಜೆಪಿ ಪೈರ್ ಬ್ರ್ಯಾಂಡ್ ನಾಯಕ ಸುಬ್ರಮಣಿಯನ್ ಸ್ವಾಮಿ ಓವೈಸಿಯ ಬುಡಕ್ಕೆ ಕೈ ಹಾಕಿದ್ದು ‘ಸೈನಿಕರಲ್ಲಿ ಧರ್ಮ ಹುಡುಕುವ ಓವೈಸಿಗೆ  ಉಗ್ರರಲ್ಲಿ ಎಷ್ಟು ಜನ ಮುಸ್ಲಿಮರು ಇದ್ದಾರೆ ಎಂಬುದು ಗೊತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಸುಂಜ್ವಾನಾ ಸೇನಾ ಶಿಬಿರದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಹುತಾತ್ಮರಾದ ಏಳು ಜನರಲ್ಲಿ ಐವರು ಕಾಶ್ಮೀರದ ಮುಸ್ಲಿಮರು ಎಂದು ಹೇಳುವ ಮೂಲಕ ಹುತಾತ್ಮರ ವಿಚಾರದಲ್ಲೂ ಧರ್ಮ ಸೇರಿಸಿದ ಎಐಎಂಐಎಂ ಮುಖ್ಯಸ್ಥ ಅಸಾವುದ್ದಿನ್‌ ಓವೈಸಿಗೆ ತಕ್ಕ ಉತ್ತರದೊಂದಿಗೆ ಖಡಕ್ ಪ್ರಶ್ನೆಯನ್ನು ಕೇಳಿದ್ದಾರೆ.

ಟ್ವೀಟ್ ಮೂಲಕ ಓವೈಸಿಗೆ ಪ್ರಶ್ನಿಸಿರುವ ಸುಬ್ರಮಣಿಯನ್ ಸ್ವಾಮಿ ‘ ದೇಶಕ್ಕಾಗಿ ಅದೆಷ್ಟು ಮುಸ್ಲಿಂ ಯೋಧರು ಪ್ರಾಣತ್ಯಾಗ ಮಾಡಿದ್ದಾರೆ. ಅದರಂತೆ, ಅದೆಷ್ಟು ಮುಸ್ಲಿಮರು ಭಯೋತ್ಪಾದಕ ಸಂಘಟನೆ ಸೇರುವ ಮೂಲಕ ಭಾರತೀಯ ಸೇನೆ ಮೇಲೆ ದಾಳಿ ನಡೆಸುತ್ತಿದ್ದಾರೆ ಎನ್ನುವುದನ್ನು ಓವೈಸಿ ಸ್ಪಷ್ಟಪಡಿಸಲಿ’ ಎಂದು ಕೇಳಿದ್ದಾರೆ.

ಓವೈಸಿಯ ಹೇಳಿಕೆಯಿಂದ ಕೆಂಡಾಮಂಡಲರಾಗಿರುವ ಭಾರತೀಯ ಸೇನೆಯ ಲೆಫ್ಟಿನೆಂಟ್ ಜನರಲ್ ದೇವರಾಜ್ ಅನ್ಬು ಅವರು, ಹುತಾತ್ಮ ಯೋಧರನ್ನು ನಾವು ಕೋಮುವಾದೀಕರಣ ಗೊಳಿಸುವುದಿಲ್ಲ. ಈ ರೀತಿ ಅಸಂಬದ್ಧ ಹೇಳಿಕೆ ನೀಡುವವರಿಗೆ ಸೇನೆಯ ಬಗ್ಗೆ ಸರಿಯಾಗಿ ಗೊತ್ತಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

Owaisi can count Muslims army men killed. But can he also count how many Muslims are in terrorists organisation attacking the army?

— Subramanian Swamy (@Swamy39) February 15, 2018

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search