• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಚಿಂದಿ ಉಡಾಯಿಸಿದ ಯೋಧರಲ್ಲಿ ಒಬ್ಬರು ನಮ್ಮ ಕರಾವಳಿಯವರು ಎಂಬುದೇ ಹೆಮ್ಮೆ.

ShriMane Posted On February 15, 2018


  • Share On Facebook
  • Tweet It

ಕೇವಲ ಮೂರು ದಿನಗಳ ಹಿಂದೆ ಜಮ್ಮು ಕಾಶ್ಮೀರದ ಕರಣ್ ನಗರಕ್ಕೆ ರಣ ಹೇಡಿಗಳಂತೆ ನುಗ್ಗಿದ ಲಷ್ಕರ್-ಎ-ತೋಯ್ಬಾ ಭಯೋತ್ಪಾದಕರು ಕಟ್ಟಡವೊಂದರಲ್ಲಿ ಅವಿತು ಕುಳಿತು ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದರು. ಇಂತಹ ಅಪಾಯಕಾರಿ ಹಾಗೂ ಅನಿರೀಕ್ಷಿತ ದಾಳಿಯಿಂದ ಕಂಗೆಡದ ಭಾರತದ ಸಿ.ಆರ್.ಪಿ.ಎಫ್ ಯೋಧರು ತಕ್ಕ ಉತ್ತರ ನೀಡಿ ಭಯೋತ್ಪಾದಕರನ್ನು ಮುಲಾಜಿಲ್ಲದೇ ಹೊಡೆದುರುಳಿಸಿದ್ದಾರೆ.

ಇಂತಹ ವೀರ ಯೋಧರು ಭಾರತೀಯರು ಎಂದು ಹೇಳಿಕೊಳ್ಳುವುದೇ ಹೆಮ್ಮೆ. ಅವರು ನಮ್ಮ ರಾಜ್ಯದವರಾಗಿದ್ದರೆ ಇನ್ನೂ ಹೆಚ್ಚು ಖುಷಿ. ಅಕಸ್ಮಾತ್ ನಮ್ಮ ಜಿಲ್ಲೆಯವರೇ ಆಗಿ ಬಿಟ್ಟರೆ?
ನಾವೇ ಭಯೋತ್ಪಾದಕರ ವಿರುದ್ಧ ಹೋರಾಡಿ ಗೆದ್ದಷ್ಟು ಸಂತಸ ಪಡುತ್ತೇವೆ. ಈಗ ಆಗಿದ್ದೂ ಅದೇ.

 

ಭಯೋತ್ಪಾದಕರನ್ನು ಯಮಲೋಕಕ್ಕೆ ಅಟ್ಟುವಲ್ಲಿ ಯಶಸ್ವಿಯಾಗಿರುವ ವೀರ ಯೋಧರ ಪೈಕಿ ನಮ್ಮ ದಕ್ಷಿಣ ಕನ್ನಡ ಜಿಲ್ಲೆಯ ಯೋಧರೊಬ್ಬರು ಇದ್ದಾರೆ. ಅವರೇ ಜುಬೇರ್. ಪುತ್ತೂರು ತಾಲೂಕಿನ ನೇರೆಂಕಿ ಎಂಬ ಪುಟ್ಟ ಊರಿನವರು.

ತಮ್ಮೂರಿನ ಯೋಧ ದೇಶ ಕಾಯುತ್ತಾ ಭಯೋತ್ಪಾದಕರನ್ನು ಹೆಡೆಮುರಿ ಕಟ್ಟಿ ಭಾರತಾಂಬೆಯ ಸೇವೆ ಮಾಡುತ್ತಿರುವುದನ್ನು ನೆನೆದು ಭಾರತ ಮಾತೆ ಇಂತಹ ಯೋಧರಿಗೆ ಇನ್ನೂ ಹೆಚ್ಚಿನ ಧೈರ್ಯ ಹಾಗೂ ಶಕ್ತಿ ಕೊಟ್ಟು ಕಾಪಾಡಲಿ ಎಂದು ಹಾರೈಸುತ್ತಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
ShriMane May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
ShriMane May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search