• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಚಿಂದಿ ಉಡಾಯಿಸಿದ ಯೋಧರಲ್ಲಿ ಒಬ್ಬರು ನಮ್ಮ ಕರಾವಳಿಯವರು ಎಂಬುದೇ ಹೆಮ್ಮೆ.

ShriMane Posted On February 15, 2018
0


0
Shares
  • Share On Facebook
  • Tweet It

ಕೇವಲ ಮೂರು ದಿನಗಳ ಹಿಂದೆ ಜಮ್ಮು ಕಾಶ್ಮೀರದ ಕರಣ್ ನಗರಕ್ಕೆ ರಣ ಹೇಡಿಗಳಂತೆ ನುಗ್ಗಿದ ಲಷ್ಕರ್-ಎ-ತೋಯ್ಬಾ ಭಯೋತ್ಪಾದಕರು ಕಟ್ಟಡವೊಂದರಲ್ಲಿ ಅವಿತು ಕುಳಿತು ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದರು. ಇಂತಹ ಅಪಾಯಕಾರಿ ಹಾಗೂ ಅನಿರೀಕ್ಷಿತ ದಾಳಿಯಿಂದ ಕಂಗೆಡದ ಭಾರತದ ಸಿ.ಆರ್.ಪಿ.ಎಫ್ ಯೋಧರು ತಕ್ಕ ಉತ್ತರ ನೀಡಿ ಭಯೋತ್ಪಾದಕರನ್ನು ಮುಲಾಜಿಲ್ಲದೇ ಹೊಡೆದುರುಳಿಸಿದ್ದಾರೆ.

ಇಂತಹ ವೀರ ಯೋಧರು ಭಾರತೀಯರು ಎಂದು ಹೇಳಿಕೊಳ್ಳುವುದೇ ಹೆಮ್ಮೆ. ಅವರು ನಮ್ಮ ರಾಜ್ಯದವರಾಗಿದ್ದರೆ ಇನ್ನೂ ಹೆಚ್ಚು ಖುಷಿ. ಅಕಸ್ಮಾತ್ ನಮ್ಮ ಜಿಲ್ಲೆಯವರೇ ಆಗಿ ಬಿಟ್ಟರೆ?
ನಾವೇ ಭಯೋತ್ಪಾದಕರ ವಿರುದ್ಧ ಹೋರಾಡಿ ಗೆದ್ದಷ್ಟು ಸಂತಸ ಪಡುತ್ತೇವೆ. ಈಗ ಆಗಿದ್ದೂ ಅದೇ.

 

ಭಯೋತ್ಪಾದಕರನ್ನು ಯಮಲೋಕಕ್ಕೆ ಅಟ್ಟುವಲ್ಲಿ ಯಶಸ್ವಿಯಾಗಿರುವ ವೀರ ಯೋಧರ ಪೈಕಿ ನಮ್ಮ ದಕ್ಷಿಣ ಕನ್ನಡ ಜಿಲ್ಲೆಯ ಯೋಧರೊಬ್ಬರು ಇದ್ದಾರೆ. ಅವರೇ ಜುಬೇರ್. ಪುತ್ತೂರು ತಾಲೂಕಿನ ನೇರೆಂಕಿ ಎಂಬ ಪುಟ್ಟ ಊರಿನವರು.

ತಮ್ಮೂರಿನ ಯೋಧ ದೇಶ ಕಾಯುತ್ತಾ ಭಯೋತ್ಪಾದಕರನ್ನು ಹೆಡೆಮುರಿ ಕಟ್ಟಿ ಭಾರತಾಂಬೆಯ ಸೇವೆ ಮಾಡುತ್ತಿರುವುದನ್ನು ನೆನೆದು ಭಾರತ ಮಾತೆ ಇಂತಹ ಯೋಧರಿಗೆ ಇನ್ನೂ ಹೆಚ್ಚಿನ ಧೈರ್ಯ ಹಾಗೂ ಶಕ್ತಿ ಕೊಟ್ಟು ಕಾಪಾಡಲಿ ಎಂದು ಹಾರೈಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
ShriMane January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
ShriMane January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!

  • Privacy Policy
  • Contact
© Tulunadu Infomedia.

Press enter/return to begin your search