• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

48 ದಿನದಲ್ಲಿ ಪಾಕಿಸ್ತಾನದ 20 ಯೋಧರನ್ನು ಹೊಡೆದುರುಳಿಸಿದ ಭಾರತೀಯ ಯೋಧರಿಗೊಂದು ಸಲಾಂ

TNN Correspondent Posted On February 16, 2018
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನಿ ಸೈನಿಕರು, ಉಗ್ರರು ಭಾರತೀಯ ಸೈನಿಕರನ್ನು ಹತ್ಯೆ ಮಾಡುತ್ತಿದ್ದರೆ ಪ್ರತಿ ಭಾರತೀಯನ ರಕ್ತವೂ ಕುದಿಯುತ್ತಿದೆ. ಎಲ್ಲೋ ಅದಾದುದ್ದೀನ್ ಓವೈಸಿಯಂತಹ ಕೆಲವು ಕುತ್ಸಿತ ಮನಸ್ಸುಗಳು ಮಾತ್ರ ಹುತಾತ್ಮರಾದ ಯೋಧರಲ್ಲಿ ಜಾತಿ, ಧರ್ಮ ಹುಡುಕುತ್ತಾರೆ. ಆದರೂ ನಮ್ಮ ಸೈನಿಕರು ಮಾತ್ರ ಎದೆ ಉಬ್ಬಿಸಿಕೊಂಡೇ ಶತ್ರುಗಳ ಎದುರು ಹೋರಾಡುತ್ತಾರೆ.

ಇಂತಹ ಹೆಮ್ಮೆಯ ಭಾರತೀಯ ಸೈನಿಕರು ಮತ್ತೊಂದು ಸಾಧನೆ ಮೆರೆದಿದ್ದು, 2018ರ ಈ 48 ದಿನಗಳಲ್ಲಿ ಜಮ್ಮು-ಕಾಶ್ಮಿರದ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಬರೋಬ್ಬರಿ 20 ಸೈನಿಕರನ್ನು ಹೊಡೆದುರುಳಿಸಿದೆ.

ಪಾಕಿಸ್ತಾನದ ಪ್ರತಿ ಕುತಂತ್ರಕ್ಕೂ ಭಾರತ ಪ್ರತಿತಂತ್ರವನ್ನು ರೂಪಿಸುತ್ತಿದ್ದು, ಪಾಕಿಸ್ತಾನಿ ಸೈನಿಕರಿಗಿಂತ ದುಪ್ಪಟ್ಟು ಆಕ್ರೋಶದಿಂದ ಹೋರಾಡುತ್ತಿದ್ದಾರೆ. ಅದಕ್ಕಾಗಿಯೇ 20 ಸೈನಿಕರನ್ನುಹತ್ಯೆ ಮಾಡುವ ಜತೆಗೆ ಶತ್ರುರಾಷ್ಟ್ರದ ಏಳು ಸೈನಿಕರು ಜೀವನ್ಮರಣದ ನಡುವೆ ಹೋರಾಡುವ ರೀತಿಯಲ್ಲಿ ಗಾಯಗೊಳಿಸಿದ್ದಾರೆ.

ಭಾರತೀಯ ಸೈನ್ಯದ ಪ್ರತಿ ಸೇನಾ ನೆಲೆಗಳು ತುಂಬ ಎಚ್ಚರದಿಂದ ಕಾರ್ಯನಿರ್ವಹಿಸುತ್ತಿವೆ. ಪಾಕಿಸ್ತಾನದ ಪ್ರತಿಯೊಂದು ಚಲನವಲನ ಗಮನಿಸುತ್ತಿದ್ದು, ಸಣ್ಣ ಸುಳಿವು ಸಿಕ್ಕರೂ ಸೈನಿಕರು ದಾಳಿ ಮಾಡುತ್ತಿದ್ದಾರೆ. ಅಲ್ಲದೆ ಶತ್ರುವಿನ ಎದೆಗೆ ಗುಂಡಿಡಲು ಪ್ರತಿ ಸೈನಿಕರು ಮುಕ್ತ ಸ್ವಾತಂತ್ರ್ಯ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದೇ ಕಾರಣಕ್ಕೆ ಬಾಲ ಸುಟ್ಟ ಬೆಕ್ಕಿನಂತಾಗಿರುವ ಪಾಕಿಸ್ತಾನ ಹಲವು ತಂತ್ರ ಮಾಡುತ್ತಿದೆ. ಸುಮಾರು 35 ನೆಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಆದರೂ ಭಾರತದ ಯೋಧರು ಅದಕ್ಕೆ ಪ್ರತಿತಂತ್ರ ರೂಪಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. 2017ರಲ್ಲಿ ಭಾರತೀಯ ಸೈನಿಕರು ದಾಖಲೆಯ ಪ್ರಮಾಣದಲ್ಲಿ, ಅಂದರೆ ಪಾಕಿಸ್ತಾನದ 213 ಉಗ್ರರನ್ನು ಹೊಡೆದುರುಳಿಸಿದೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search