• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

48 ದಿನದಲ್ಲಿ ಪಾಕಿಸ್ತಾನದ 20 ಯೋಧರನ್ನು ಹೊಡೆದುರುಳಿಸಿದ ಭಾರತೀಯ ಯೋಧರಿಗೊಂದು ಸಲಾಂ

TNN Correspondent Posted On February 16, 2018


  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನಿ ಸೈನಿಕರು, ಉಗ್ರರು ಭಾರತೀಯ ಸೈನಿಕರನ್ನು ಹತ್ಯೆ ಮಾಡುತ್ತಿದ್ದರೆ ಪ್ರತಿ ಭಾರತೀಯನ ರಕ್ತವೂ ಕುದಿಯುತ್ತಿದೆ. ಎಲ್ಲೋ ಅದಾದುದ್ದೀನ್ ಓವೈಸಿಯಂತಹ ಕೆಲವು ಕುತ್ಸಿತ ಮನಸ್ಸುಗಳು ಮಾತ್ರ ಹುತಾತ್ಮರಾದ ಯೋಧರಲ್ಲಿ ಜಾತಿ, ಧರ್ಮ ಹುಡುಕುತ್ತಾರೆ. ಆದರೂ ನಮ್ಮ ಸೈನಿಕರು ಮಾತ್ರ ಎದೆ ಉಬ್ಬಿಸಿಕೊಂಡೇ ಶತ್ರುಗಳ ಎದುರು ಹೋರಾಡುತ್ತಾರೆ.

ಇಂತಹ ಹೆಮ್ಮೆಯ ಭಾರತೀಯ ಸೈನಿಕರು ಮತ್ತೊಂದು ಸಾಧನೆ ಮೆರೆದಿದ್ದು, 2018ರ ಈ 48 ದಿನಗಳಲ್ಲಿ ಜಮ್ಮು-ಕಾಶ್ಮಿರದ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಬರೋಬ್ಬರಿ 20 ಸೈನಿಕರನ್ನು ಹೊಡೆದುರುಳಿಸಿದೆ.

ಪಾಕಿಸ್ತಾನದ ಪ್ರತಿ ಕುತಂತ್ರಕ್ಕೂ ಭಾರತ ಪ್ರತಿತಂತ್ರವನ್ನು ರೂಪಿಸುತ್ತಿದ್ದು, ಪಾಕಿಸ್ತಾನಿ ಸೈನಿಕರಿಗಿಂತ ದುಪ್ಪಟ್ಟು ಆಕ್ರೋಶದಿಂದ ಹೋರಾಡುತ್ತಿದ್ದಾರೆ. ಅದಕ್ಕಾಗಿಯೇ 20 ಸೈನಿಕರನ್ನುಹತ್ಯೆ ಮಾಡುವ ಜತೆಗೆ ಶತ್ರುರಾಷ್ಟ್ರದ ಏಳು ಸೈನಿಕರು ಜೀವನ್ಮರಣದ ನಡುವೆ ಹೋರಾಡುವ ರೀತಿಯಲ್ಲಿ ಗಾಯಗೊಳಿಸಿದ್ದಾರೆ.

ಭಾರತೀಯ ಸೈನ್ಯದ ಪ್ರತಿ ಸೇನಾ ನೆಲೆಗಳು ತುಂಬ ಎಚ್ಚರದಿಂದ ಕಾರ್ಯನಿರ್ವಹಿಸುತ್ತಿವೆ. ಪಾಕಿಸ್ತಾನದ ಪ್ರತಿಯೊಂದು ಚಲನವಲನ ಗಮನಿಸುತ್ತಿದ್ದು, ಸಣ್ಣ ಸುಳಿವು ಸಿಕ್ಕರೂ ಸೈನಿಕರು ದಾಳಿ ಮಾಡುತ್ತಿದ್ದಾರೆ. ಅಲ್ಲದೆ ಶತ್ರುವಿನ ಎದೆಗೆ ಗುಂಡಿಡಲು ಪ್ರತಿ ಸೈನಿಕರು ಮುಕ್ತ ಸ್ವಾತಂತ್ರ್ಯ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದೇ ಕಾರಣಕ್ಕೆ ಬಾಲ ಸುಟ್ಟ ಬೆಕ್ಕಿನಂತಾಗಿರುವ ಪಾಕಿಸ್ತಾನ ಹಲವು ತಂತ್ರ ಮಾಡುತ್ತಿದೆ. ಸುಮಾರು 35 ನೆಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಆದರೂ ಭಾರತದ ಯೋಧರು ಅದಕ್ಕೆ ಪ್ರತಿತಂತ್ರ ರೂಪಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. 2017ರಲ್ಲಿ ಭಾರತೀಯ ಸೈನಿಕರು ದಾಖಲೆಯ ಪ್ರಮಾಣದಲ್ಲಿ, ಅಂದರೆ ಪಾಕಿಸ್ತಾನದ 213 ಉಗ್ರರನ್ನು ಹೊಡೆದುರುಳಿಸಿದೆ.

  • Share On Facebook
  • Tweet It


- Advertisement -


Trending Now
ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
Tulunadu News June 29, 2022
ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
Tulunadu News June 27, 2022
Leave A Reply

  • Recent Posts

    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
  • Popular Posts

    • 1
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 2
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • 3
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 4
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 5
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search