• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

48 ದಿನದಲ್ಲಿ ಪಾಕಿಸ್ತಾನದ 20 ಯೋಧರನ್ನು ಹೊಡೆದುರುಳಿಸಿದ ಭಾರತೀಯ ಯೋಧರಿಗೊಂದು ಸಲಾಂ

TNN Correspondent Posted On February 16, 2018
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನಿ ಸೈನಿಕರು, ಉಗ್ರರು ಭಾರತೀಯ ಸೈನಿಕರನ್ನು ಹತ್ಯೆ ಮಾಡುತ್ತಿದ್ದರೆ ಪ್ರತಿ ಭಾರತೀಯನ ರಕ್ತವೂ ಕುದಿಯುತ್ತಿದೆ. ಎಲ್ಲೋ ಅದಾದುದ್ದೀನ್ ಓವೈಸಿಯಂತಹ ಕೆಲವು ಕುತ್ಸಿತ ಮನಸ್ಸುಗಳು ಮಾತ್ರ ಹುತಾತ್ಮರಾದ ಯೋಧರಲ್ಲಿ ಜಾತಿ, ಧರ್ಮ ಹುಡುಕುತ್ತಾರೆ. ಆದರೂ ನಮ್ಮ ಸೈನಿಕರು ಮಾತ್ರ ಎದೆ ಉಬ್ಬಿಸಿಕೊಂಡೇ ಶತ್ರುಗಳ ಎದುರು ಹೋರಾಡುತ್ತಾರೆ.

ಇಂತಹ ಹೆಮ್ಮೆಯ ಭಾರತೀಯ ಸೈನಿಕರು ಮತ್ತೊಂದು ಸಾಧನೆ ಮೆರೆದಿದ್ದು, 2018ರ ಈ 48 ದಿನಗಳಲ್ಲಿ ಜಮ್ಮು-ಕಾಶ್ಮಿರದ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಬರೋಬ್ಬರಿ 20 ಸೈನಿಕರನ್ನು ಹೊಡೆದುರುಳಿಸಿದೆ.

ಪಾಕಿಸ್ತಾನದ ಪ್ರತಿ ಕುತಂತ್ರಕ್ಕೂ ಭಾರತ ಪ್ರತಿತಂತ್ರವನ್ನು ರೂಪಿಸುತ್ತಿದ್ದು, ಪಾಕಿಸ್ತಾನಿ ಸೈನಿಕರಿಗಿಂತ ದುಪ್ಪಟ್ಟು ಆಕ್ರೋಶದಿಂದ ಹೋರಾಡುತ್ತಿದ್ದಾರೆ. ಅದಕ್ಕಾಗಿಯೇ 20 ಸೈನಿಕರನ್ನುಹತ್ಯೆ ಮಾಡುವ ಜತೆಗೆ ಶತ್ರುರಾಷ್ಟ್ರದ ಏಳು ಸೈನಿಕರು ಜೀವನ್ಮರಣದ ನಡುವೆ ಹೋರಾಡುವ ರೀತಿಯಲ್ಲಿ ಗಾಯಗೊಳಿಸಿದ್ದಾರೆ.

ಭಾರತೀಯ ಸೈನ್ಯದ ಪ್ರತಿ ಸೇನಾ ನೆಲೆಗಳು ತುಂಬ ಎಚ್ಚರದಿಂದ ಕಾರ್ಯನಿರ್ವಹಿಸುತ್ತಿವೆ. ಪಾಕಿಸ್ತಾನದ ಪ್ರತಿಯೊಂದು ಚಲನವಲನ ಗಮನಿಸುತ್ತಿದ್ದು, ಸಣ್ಣ ಸುಳಿವು ಸಿಕ್ಕರೂ ಸೈನಿಕರು ದಾಳಿ ಮಾಡುತ್ತಿದ್ದಾರೆ. ಅಲ್ಲದೆ ಶತ್ರುವಿನ ಎದೆಗೆ ಗುಂಡಿಡಲು ಪ್ರತಿ ಸೈನಿಕರು ಮುಕ್ತ ಸ್ವಾತಂತ್ರ್ಯ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದೇ ಕಾರಣಕ್ಕೆ ಬಾಲ ಸುಟ್ಟ ಬೆಕ್ಕಿನಂತಾಗಿರುವ ಪಾಕಿಸ್ತಾನ ಹಲವು ತಂತ್ರ ಮಾಡುತ್ತಿದೆ. ಸುಮಾರು 35 ನೆಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಆದರೂ ಭಾರತದ ಯೋಧರು ಅದಕ್ಕೆ ಪ್ರತಿತಂತ್ರ ರೂಪಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. 2017ರಲ್ಲಿ ಭಾರತೀಯ ಸೈನಿಕರು ದಾಖಲೆಯ ಪ್ರಮಾಣದಲ್ಲಿ, ಅಂದರೆ ಪಾಕಿಸ್ತಾನದ 213 ಉಗ್ರರನ್ನು ಹೊಡೆದುರುಳಿಸಿದೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search