• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಧಾನ ಸಭೆ ಚುನಾವಣೆ ಡಿಸೆಂಬರ್ ಗೆ ಮುಂದೂಡಿಕೆ -ಐವನ್

TNN Correspondent Posted On February 16, 2018
0


0
Shares
  • Share On Facebook
  • Tweet It

ಗುರುವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ ಬಿ ಜೆ ಪಿ ರಾಜಕೀಯ ದಾಳವನ್ನು ಉಪಯೋಗಿಸಿ ರಾಷ್ಟ್ರಪತಿಯವರ ಅನುಮೋದನೆ ಪಡೆದು ಸಂವಿಧಾನ ತಿದ್ದುಪಡಿ ಮಾಡಿ ಚುನಾವಣೆ ಡಿಸೆಂಬರ್ ನಲ್ಲಿ ನಡೆಯುವಂತೆ ಪ್ರಯತ್ನಿಸುತ್ತದೆ ಎಂದು ತಿಳಿಸಿದರು.ಲೋಕ ಸಭೆ ಚುನಾವಣೆಯೊಂದಿಗೆ 9 ರಾಜ್ಯಗಳ ಚುನಾವಣೆಯನ್ನು ಏಕಾಕಾಲದಲ್ಲಿ ನಡೆಸುವುದು ಕೇಂದ್ರ ಸರಕಾರದ ಉದ್ದೇಶ ಎಂದು ಹೇಳಿದರು.
*ಗೊಂದಲದ ಹೇಳಿಕೆಗಳು*
ಒಂದು ಕಡೆ ಮಾರ್ಚ್ 1 ತಾರೀಕಿಗೆ ಚುನಾವಣೆ ದಿನಾಂಕ ಘೋಷಣೆಯಾಗಲಿದೆ ಎಂದು ಐವನ್ ಹೇಳಿದ್ದು, ಅದರ ಬೆನ್ನಲ್ಲೇ ಡಿಸೆಂಬರ್ ನಲ್ಲಿ ಚುನಾವಣೆ ನಡೆಯಬಹುದು ಎಂದು ಹೇಳಿದ್ದಾರೆ.ಮತ್ತೊಂದು ಕಡೆ ಲೋಕ ಸಭಾ ಚುನಾವಣೆ ಬಹುತೇಕ ಮುಂದಿನ ವರ್ಷ ಮೇ ತಿಂಗಳಲ್ಲಿ ನಡೆಯಲಿದ್ದು ವಿಧಾನಸಭೆ ಚುನಾವಣೆ ಏಕಾಕಾಲದಲ್ಲಿ ನಡೆಯುವುದಾದರೆ ಡಿಸೆಂಬರ್ ನಲ್ಲಿ ಅದು ಹೇಗೆ ಸಾಧ್ಯ ಎಂಬುವುದು ಜನ ಸಾಮಾನ್ಯರ ಪ್ರಶ್ನೆಯಾಗಿದೆ.
*ಈ ಬಾರಿ MLA ನಾನೇ*
ಮುಖ್ಯ ಮಂತ್ರಿ ಸಿದ್ಧರಾಮಯ್ಯ ಈ ಹಿಂದೆ ಹಾಲಿ ಶಾಸಕರಿಗೆ ಮುಂದಿನ ಟಿಕೆಟ್ ಎಂದು ಕೆಲವು ಕಡೆ ಹೇಳಿಕೊಂಡು ಬಂದಿದ್ದಾರೆ ಆದರೆ ಐವನ್ ಅವರು ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ ಎಂದು ಹೇಳಿರುವುದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿದೆ.
*ಸೋಲಿನ ಭೀತಿಯಿಂದ ಗೊಂದಲದ ಹೇಳಿಕೆ?*
ಕೆಲವೊಂದು ಸಮೀಕ್ಷೆಗಳ ಮೂಲಕ ಈ ಬಾರಿ ಮುಲ್ಕಿ ಮೂಡಬಿದರೆ ಕ್ಷೇತ್ರದಲ್ಲಿ ಕಮಲ ಅರಳಲಿದೆ ಎಂದು ಹೇಳಲಾಗಿದ್ದು ಕಾಂಗ್ರೆಸ್ ನಾಯಕರಲ್ಲಿ ಭೀತಿ ಸೃಷ್ಟಿಸಿದೆ.ಈಗಾಗಲೇ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಗೆ ಕಣ್ಣಿಟ್ಟಿರುವ ಮಿಥುನ್, ಐವನ್, ಅಭಯ ಚಂದ್ರರಿಗೆ ಟಿಕೆಟ್ ದೊರೆತರೆ ಸಮೀಕ್ಷೆಗಳನ್ನು ನಿಜ ಮಾಡಲು ಪ್ರಯತ್ನಿಸಬಹುದು ಎಂಬ ಮಾತು. ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
0
Shares
  • Share On Facebook
  • Tweet It


Ivan


Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search