• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಐ ಲವ್ ಪಾಕಿಸ್ತಾನ ಎಂದ ಮಣಿ ಶಂಕರ್ ಅಯ್ಯರ್ ವಿರುದ್ಧ ಪ್ರಕರಣ ದಾಖಲು!

TNN Correspondent Posted On February 16, 2018
0


0
Shares
  • Share On Facebook
  • Tweet It

ಜೈಪುರ: ಐ ಲವ್ ಪಾಕಿಸ್ತಾನ ಎಂದ ಕಾಂಗ್ರೆಸ್ ಉಚ್ಚಾಟಿತ ನಾಯಕ ಮಣಿಶಂಕರ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದ್ದು, ಇದರಿಂದ ಮಣಿಶಂಕರ್ ಅಯ್ಯರ್ ಅವರಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ರಾಜಸ್ಥಾನದ ಕೋಟಾದ ಬಿಜೆಪಿ ಹಿಂದುಳಿದ ವರ್ಗಗಳ ವಿಭಾಗದ ಮುಖ್ಯಸ್ಥ ಅಶೋಕ್ ಚೌಧರಿ ಅವರು ಕೋಟಾ ಹೆಚ್ಚುವರಿ ಮುಖ್ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಭಾರತೀಯ ದಂಡ ಸಂಹಿತೆ 124 (ಎ), 500 ಮತ್ತು 504ರ ಅನ್ವಯ ಪ್ರಕರಣ ದಾಖಲಿಸಿದ್ದಾರೆ.

ನಾನು ಭಾರತವನ್ನು ಪ್ರೀತಿಸುವ ಕಾರಣಕ್ಕಾಗಿಯೇ ಪಾಕಿಸ್ತಾನವನ್ನೂ ಪ್ರೀತಿಸುತ್ತೇನೆ ಎಂದು ಮಣಿಶಂಕರ್ ಅಯ್ಯರ್ ಪಾಕಿಸ್ತಾನದ ಕರಾಚಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿಕೆ ನೀಡಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.

ಅಷ್ಟೇ ಅಲ್ಲ, ಭಾರತ ಹಾಗೂ ಪಾಕಿಸ್ತಾನ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಅದಕ್ಕಾಗಿ ತುಸು ಕಾಲಾವಶಕಾಶ ಬೇಕು. ಸಮಸ್ಯೆ ಇತ್ಯರ್ಥ ಮಾಡಿಕೊಳ್ಳಲು ಇಸ್ಲಾಮಾಬಾದ್ (ಪಾಕಿಸ್ತಾನ ಸರ್ಕಾರ) ಏನೋ ಒಪ್ಪಿದೆ. ಆದರೆ ಭಾರತ ಒಪ್ಪಿಲ್ಲ ಎಂದು ಮಣಿಶಂಕರ್ ಅಯ್ಯರ್ ಪಾಕಿಸ್ತಾನದ ನೆಲದಲ್ಲೇ ಭಾರತಕ್ಕೆ ಮುಜುಗರವಾಗುವ ಹಾಗೆ ಮಾತನಾಡಿದ್ದರು.

ಇದನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ ಈಗ ಮಣಿಶಂಕರ್ ಅಯ್ಯರ್ ಅವರ ವಿರುದ್ಧ ಮಾನನಷ್ಟ ಹಾಗೂ ದೇಶದ್ರೋಹದ ಪ್ರಕರಣ ದಾಖಲಿಸಿದೆ. ಇದೇ ಮಣಿಶಂಕರ್ ಅಯ್ಯರ್ ಹಿಂದೆ ಮೋದಿ ಅವರನ್ನು ನೀಚ, ಚಾಯ್ ವಾಲಾ ಎಂದಿದ್ದರು. ನೀಚ ಎಂದಿದ್ದಕ್ಕೆ ಕಾಂಗ್ರೆಸ್ ಇವರನ್ನು ಪಕ್ಷದಿಂದ ಉಚ್ಚಾಟಿಸಿದೆ.

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search