• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಿಎಂ ಸಿದ್ದರಾಮಯ್ಯ ಮಂಡಿಸಿದ್ದು ರಾಜ್ಯ ಬಜೆಟ್ ಅಲ್ಲ, ಅಲ್ಪಸಂಖ್ಯಾತರ ಬಜೆಟ್!

TNN Correspondent Posted On February 17, 2018
0


0
Shares
  • Share On Facebook
  • Tweet It

ಬೆಂಗಳೂರು: ಸಮಾಜವಾದ, ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎನ್ನುತ್ತಲೇ ಮುಖ್ಯಮಂತ್ರಿಯಾದ ಸಿದ್ದರಾಮಯ್ಯನವರು, ಸಿಎಂ ಪದವಿಗೇರುತ್ತಲೇ ಅಹಿಂದ ಪರ ವಾಲಿದರು, ಹಿಂದೂಗಳ ಹತ್ಯೆಯಾದರೂ ಸುಮ್ಮನಾದರು, ಹಿಂದೂಗಳ ಸಂಪ್ರದಾಯಕ್ಕೆ ಮೌಢ್ಯದ ಲೇಪನ ಹಚ್ಚಿದರು, ಮಠಗಳನ್ನು ಸರ್ಕಾರದ ಸುಪರ್ದಿಗೆ ಒಯ್ಯಲು ಯತ್ನಿಸಿದರು.

ಇದರ ಜತೆಗೆ ಅಲ್ಪಸಂಖ್ಯಾತರಿಗೆ ಹೆಚ್ಚಿನ ಒಲವು ತೋರಿಸಿದರು. ಮುಸ್ಲಿಮರಿಗಾಗಿಯೇ ಶಾದಿ ಭಾಗ್ಯ ಯೋಜನೆ ಜಾರಿಗೆ ತಂದು ಟೀಕೆಗೊಳಗಾದರು. ಟಿಪ್ಪು ಜಯಂತಿ ಆಚರಿಸಿ ಮುಸ್ಲಿಮರ ಓಲೈಕೆಗೆ ನಿಂತರು. ಹಲವು ಗಲಾಟೆಗಳಲ್ಲಿ ದಾಖಲಾದ ಪ್ರಕರಣ ಹಿಂಪಡೆಯುವಾಗ, ಹಿಂದೂಗಳನ್ನು ಮರೆತು, ಬರೀ “ಮುಗ್ಧ ಅಲ್ಪಸಂಖ್ಯಾತರ” ವಿರುದ್ಧದ ಪ್ರಕರಣ ಹಿಂಪಡೆಯಲು ಹೊರಟು ಟೀಕೆಗೊಳಗಾದರು.

ಇಂತಿಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯ ಬಜೆಟ್ ನಲ್ಲಿಯೂ ಅಲ್ಪಸಂಖ್ಯಾತರ ಪರವಾಗಿಯೇ ನಿಂತಿದ್ದಾರೆ. ಖಂಡಿತವಾಗಿಯೂ ಅಲ್ಪಸಂಖ್ಯಾತರಿಗೆ ಯೋಜನೆ ನೀಡಬೇಕು, ಆದರೆ ಮುಖ್ಯಮಂತ್ರಿಯವರು ಅಲ್ಪಸಂಖ್ಯಾತರಿಗಷ್ಟೇ ಹಣ ಮೀಸಲಿಟ್ಟದ್ದಾರೆ ಎನ್ನುವ ಮಟ್ಟಿಗೆ ಬಜೆಟ್ ನ್ನು ಅಲ್ಪಸಂಖ್ಯಾತಮಯಗೊಳಿಸಿದ್ದಾರೆ.

ನಾನು ಹಿಂದೂ ಎನ್ನುವ ಸಿಎಂ ಬಜೆಟ್ಟಿನಲ್ಲಿ ಎಲ್ಲಿಯೂ ಹಿಂದೂಗಳಿಗೆ ಇಷ್ಟು ಅನುದಾನ ಅಂತ ಕೊಟ್ಟಿಲ್ಲ. ಬಜೆಟ್ ಕಾಪಿ ಹುಡುಕಾಡಿದರೂ ಸಿಗುವುದಿಲ್ಲ. ಹಾಗಾದರೆ ಬರೀ ಅಲ್ಪಸಂಖ್ಯಾತರಿಗಷ್ಟೇ ಮುಖ್ಯಮಂತ್ರಿಯವರು ಜಾರಿಗೆ ತಂದ ಯೋಜನೆ ಯಾವುದು, ಅವರಿಗಷ್ಟೇ ಎಷ್ಟು ಹಣ ನೀಡಿದ್ದಾರೆ ಎಂಬುದನ್ನು ನೀವೇ ನೋಡಿ ಹಾಗೂ ಸಿದ್ದರಾಮಯ್ಯನವರ ಹಿಂದೂ ವಿರೋಧಿ ಮನಸ್ಥಿತಿಯನ್ನು ಅರಿಯಿರಿ.

  • ಬೆಂಗಳೂರಿನ ಕೇಂದ್ರ ವಿಶ್ವವಿದ್ಯಾಲಯದಲ್ಲಿ ಅಲ್ಪ ಸಂಖ್ಯಾತರ ಅಧ್ಯಯನ ಪೀಠ ಸ್ಥಾಪನೆ
  • ಅಲ್ಪಸಂಖ್ಯಾತ ಮಹಿಳೆಯರಿಗೆ ಸ್ಟಾರ್ಟ್ ಅಪ್ ಕೈಗೊಳ್ಳಲು ಬೇಕಾದ ಸಾಲಕ್ಕೆ 15 ಕೋಟಿ ರೂ. ಮಂಜೂರು.
  • ಕರ್ನಾಟಕ ವಕ್ಫ್ ಪರಿಷತ್ತಿನ ಕಾರ್ಪಸ್ ಫಂಡಿಗೆ 20 ಕೋಟಿ ರೂ. ಅನುದಾನ.
  • ಅಲ್ಪಸಂಖ್ಯಾತರ ವಸತಿ ನಿಲಯ, ಶಾಲೆ, ಕಾಲೇಜುಗಳಲ್ಲಿ ದುರ್ಘಟನೆಗೊಳಗಾದ ಅಲ್ಪಸಂಖ್ಯಾತರಿಗೆ ಪರಿಹಾರ.
  • ಮದರಸಾಗಳಿಗೆ 15 ಕೋಟಿ ರೂಪಾಯಿ ಸಹಾಯಧನ ಮಂಜೂರು.
  • ಅಲ್ಪಸಂಖ್ಯಾತರಿಗೆ ಸಾಲ ನೀಡಲು ಹೊಸ ಯೋಜನೆ ಘೋಷಣೆ. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮೂಲಕ ವೃತ್ತಿ ಕೈಗೊಳ್ಳಲು ಸಾಲ ಯೋಜನೆಗಾಗಿ 30 ಕೋಟಿ ರೂ. ಮಂಜೂರು.
  • ಕ್ರೈಸ್ತ ಸಮುದಾಯದ ಅಭಿವೃದ್ಧಿಗಾಗಿ 200 ಕೋಟಿ ರೂಪಾಯಿ ಮುಂಗಡಪತ್ರದಲ್ಲಿ ಮಂಜೂರು.

ಹೀಗೆ ಸಾಲು ಸಾಲಾಗಿ ಮುಖ್ಯಮಂತ್ರಿಯವರು ಅಲ್ಪಸಂಖ್ಯಾತರಿಗೆ ಬಜೆಟ್ಟಿನಲ್ಲಿ ಯೋಜನೆ, ಹಣ ನೀಡಿದ್ದಾರೆ. ಆದರೆ ಹಿಂದೂ ಎನ್ನುವ ಸಿಎಂ ಸಾಹೇಬ್ರು ಹಿಂದೂಗಳಿಗಾಗಿ ಏನು ಮಾಡಿದ್ದಾರೆ? ಸಿದ್ದರಾಮಯ್ಯನವರು ಇದಕ್ಕೆ ಉತ್ತರಿಸಬೇಕು.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search