• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಿಎಂ ಸಿದ್ದರಾಮಯ್ಯ ಮಂಡಿಸಿದ್ದು ರಾಜ್ಯ ಬಜೆಟ್ ಅಲ್ಲ, ಅಲ್ಪಸಂಖ್ಯಾತರ ಬಜೆಟ್!

TNN Correspondent Posted On February 17, 2018
0


0
Shares
  • Share On Facebook
  • Tweet It

ಬೆಂಗಳೂರು: ಸಮಾಜವಾದ, ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎನ್ನುತ್ತಲೇ ಮುಖ್ಯಮಂತ್ರಿಯಾದ ಸಿದ್ದರಾಮಯ್ಯನವರು, ಸಿಎಂ ಪದವಿಗೇರುತ್ತಲೇ ಅಹಿಂದ ಪರ ವಾಲಿದರು, ಹಿಂದೂಗಳ ಹತ್ಯೆಯಾದರೂ ಸುಮ್ಮನಾದರು, ಹಿಂದೂಗಳ ಸಂಪ್ರದಾಯಕ್ಕೆ ಮೌಢ್ಯದ ಲೇಪನ ಹಚ್ಚಿದರು, ಮಠಗಳನ್ನು ಸರ್ಕಾರದ ಸುಪರ್ದಿಗೆ ಒಯ್ಯಲು ಯತ್ನಿಸಿದರು.

ಇದರ ಜತೆಗೆ ಅಲ್ಪಸಂಖ್ಯಾತರಿಗೆ ಹೆಚ್ಚಿನ ಒಲವು ತೋರಿಸಿದರು. ಮುಸ್ಲಿಮರಿಗಾಗಿಯೇ ಶಾದಿ ಭಾಗ್ಯ ಯೋಜನೆ ಜಾರಿಗೆ ತಂದು ಟೀಕೆಗೊಳಗಾದರು. ಟಿಪ್ಪು ಜಯಂತಿ ಆಚರಿಸಿ ಮುಸ್ಲಿಮರ ಓಲೈಕೆಗೆ ನಿಂತರು. ಹಲವು ಗಲಾಟೆಗಳಲ್ಲಿ ದಾಖಲಾದ ಪ್ರಕರಣ ಹಿಂಪಡೆಯುವಾಗ, ಹಿಂದೂಗಳನ್ನು ಮರೆತು, ಬರೀ “ಮುಗ್ಧ ಅಲ್ಪಸಂಖ್ಯಾತರ” ವಿರುದ್ಧದ ಪ್ರಕರಣ ಹಿಂಪಡೆಯಲು ಹೊರಟು ಟೀಕೆಗೊಳಗಾದರು.

ಇಂತಿಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯ ಬಜೆಟ್ ನಲ್ಲಿಯೂ ಅಲ್ಪಸಂಖ್ಯಾತರ ಪರವಾಗಿಯೇ ನಿಂತಿದ್ದಾರೆ. ಖಂಡಿತವಾಗಿಯೂ ಅಲ್ಪಸಂಖ್ಯಾತರಿಗೆ ಯೋಜನೆ ನೀಡಬೇಕು, ಆದರೆ ಮುಖ್ಯಮಂತ್ರಿಯವರು ಅಲ್ಪಸಂಖ್ಯಾತರಿಗಷ್ಟೇ ಹಣ ಮೀಸಲಿಟ್ಟದ್ದಾರೆ ಎನ್ನುವ ಮಟ್ಟಿಗೆ ಬಜೆಟ್ ನ್ನು ಅಲ್ಪಸಂಖ್ಯಾತಮಯಗೊಳಿಸಿದ್ದಾರೆ.

ನಾನು ಹಿಂದೂ ಎನ್ನುವ ಸಿಎಂ ಬಜೆಟ್ಟಿನಲ್ಲಿ ಎಲ್ಲಿಯೂ ಹಿಂದೂಗಳಿಗೆ ಇಷ್ಟು ಅನುದಾನ ಅಂತ ಕೊಟ್ಟಿಲ್ಲ. ಬಜೆಟ್ ಕಾಪಿ ಹುಡುಕಾಡಿದರೂ ಸಿಗುವುದಿಲ್ಲ. ಹಾಗಾದರೆ ಬರೀ ಅಲ್ಪಸಂಖ್ಯಾತರಿಗಷ್ಟೇ ಮುಖ್ಯಮಂತ್ರಿಯವರು ಜಾರಿಗೆ ತಂದ ಯೋಜನೆ ಯಾವುದು, ಅವರಿಗಷ್ಟೇ ಎಷ್ಟು ಹಣ ನೀಡಿದ್ದಾರೆ ಎಂಬುದನ್ನು ನೀವೇ ನೋಡಿ ಹಾಗೂ ಸಿದ್ದರಾಮಯ್ಯನವರ ಹಿಂದೂ ವಿರೋಧಿ ಮನಸ್ಥಿತಿಯನ್ನು ಅರಿಯಿರಿ.

  • ಬೆಂಗಳೂರಿನ ಕೇಂದ್ರ ವಿಶ್ವವಿದ್ಯಾಲಯದಲ್ಲಿ ಅಲ್ಪ ಸಂಖ್ಯಾತರ ಅಧ್ಯಯನ ಪೀಠ ಸ್ಥಾಪನೆ
  • ಅಲ್ಪಸಂಖ್ಯಾತ ಮಹಿಳೆಯರಿಗೆ ಸ್ಟಾರ್ಟ್ ಅಪ್ ಕೈಗೊಳ್ಳಲು ಬೇಕಾದ ಸಾಲಕ್ಕೆ 15 ಕೋಟಿ ರೂ. ಮಂಜೂರು.
  • ಕರ್ನಾಟಕ ವಕ್ಫ್ ಪರಿಷತ್ತಿನ ಕಾರ್ಪಸ್ ಫಂಡಿಗೆ 20 ಕೋಟಿ ರೂ. ಅನುದಾನ.
  • ಅಲ್ಪಸಂಖ್ಯಾತರ ವಸತಿ ನಿಲಯ, ಶಾಲೆ, ಕಾಲೇಜುಗಳಲ್ಲಿ ದುರ್ಘಟನೆಗೊಳಗಾದ ಅಲ್ಪಸಂಖ್ಯಾತರಿಗೆ ಪರಿಹಾರ.
  • ಮದರಸಾಗಳಿಗೆ 15 ಕೋಟಿ ರೂಪಾಯಿ ಸಹಾಯಧನ ಮಂಜೂರು.
  • ಅಲ್ಪಸಂಖ್ಯಾತರಿಗೆ ಸಾಲ ನೀಡಲು ಹೊಸ ಯೋಜನೆ ಘೋಷಣೆ. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮೂಲಕ ವೃತ್ತಿ ಕೈಗೊಳ್ಳಲು ಸಾಲ ಯೋಜನೆಗಾಗಿ 30 ಕೋಟಿ ರೂ. ಮಂಜೂರು.
  • ಕ್ರೈಸ್ತ ಸಮುದಾಯದ ಅಭಿವೃದ್ಧಿಗಾಗಿ 200 ಕೋಟಿ ರೂಪಾಯಿ ಮುಂಗಡಪತ್ರದಲ್ಲಿ ಮಂಜೂರು.

ಹೀಗೆ ಸಾಲು ಸಾಲಾಗಿ ಮುಖ್ಯಮಂತ್ರಿಯವರು ಅಲ್ಪಸಂಖ್ಯಾತರಿಗೆ ಬಜೆಟ್ಟಿನಲ್ಲಿ ಯೋಜನೆ, ಹಣ ನೀಡಿದ್ದಾರೆ. ಆದರೆ ಹಿಂದೂ ಎನ್ನುವ ಸಿಎಂ ಸಾಹೇಬ್ರು ಹಿಂದೂಗಳಿಗಾಗಿ ಏನು ಮಾಡಿದ್ದಾರೆ? ಸಿದ್ದರಾಮಯ್ಯನವರು ಇದಕ್ಕೆ ಉತ್ತರಿಸಬೇಕು.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search