• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕನ್ನಡಪರ ಸಂಘಟನೆಗಳಿಗೇ ರಾಜ್ಯದ ಇತಿಹಾಸ ಗೊತ್ತಿಲ್ಲ ಎಂದು ಅವಮಾನ ಮಾಡಿದ ಕಾಂಗ್ರೆಸ್ ಸಚಿವ!

TNN Correspondent Posted On February 17, 2018
0


0
Shares
  • Share On Facebook
  • Tweet It

ಕಲಬುರಗಿ: ಇತ್ತೀಚೆಗಷ್ಟೇ ಸರ್ಕಾರದಿಂದಲೇ ಬಹಮನಿ ಸುಲ್ತಾನರ ಉತ್ಸವ ಆಯೋಜಿಸಿ ರಾಜ್ಯದ ಜನ ಹಾಗೂ ಸ್ವತಃ ಮುಖ್ಯಮಂತ್ರಿಯವರಿಂದಲೇ ಟೀಕೆಗೆ ಒಳಗಾದ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಮತ್ತೊಂದು ಹೇಳಿಕೆ ನೀಡುವ ಮೂಲಕ ಕನ್ನಡಪರ ಸಂಘಟನೆಗಳಿಗೆ ಅವಮಾನ ಮಾಡಿದ್ದಾರೆ.

ಬಹುಮನಿ ಸುಲ್ತಾನರ ಉತ್ಸವ ಆಚರಣೆಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳ ವಿರುದ್ಧ ಕೆಂಡಾಮಂಡಲವಾದ ಶರಣ ಪ್ರಕಾಶ್ ಪಾಟೀಲ್, “ಕನ್ನಡಪರ ಸಂಘಟನೆಗಳಿಗೆ ಇತಿಹಾಸದ ಅರಿವೇ ಇಲ್ಲ” ಎಂದು ಹೇಳಿಕೆ ನೀಡಿದ್ದಾರೆ.

ಇದಕ್ಕೆ ಹಲವು ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ನಾನು ಇತಿಹಾಸ ಅರಿತಿದ್ದು, ಕನ್ನಡ ಪರ ಸಂಘಟನೆಗಳು ಹಾಗೂ ಹೋರಾಟಗಾರರು ರಾಜ್ಯದ ಇತಿಹಾಸವನ್ನು ಅರಿತೇ ಸಂಘಟನೆ ಕಟ್ಟಿದ್ದಾರೆ. ಇದು ಗೊತ್ತಿದ್ದರೂ ಸಚಿವ ಕನ್ನಡ ಪರ ಸಂಘಟನೆಗಳಿಗೆ ಅವಮಾನ ಮಾಡಿದ್ದು, ಕೂಡಲೇ ಕ್ಷಮೆಯಾಚಿಸಬೇಕು ಎಂದು ಹಸಿರು ಸೇನೆ (ಕಲಬುರಗಿ)ಸಂಸ್ಥಾಪಕ ಅಧ್ಯಕ್ಷ ವೀರಣ್ಣ ಕೊರಳಿ ಆಗ್ರಹಿಸಿದ್ದಾರೆ.

ಹಸನಗಂಗು, ಬಹುಮನ್ ಶಾ ಅವರಿಂದ ಹಿಡಿದು ಕಲೀ ಅಲ್ಲಾ ಶಾ ವರೆಗಿನ ಇತಿಹಾಸ ನಮಗೆ ಗೊತ್ತಿದೆ. 13 ರಿಂದ 15ನೇ ಶತಮಾನದವರೆಗೆ ಆಳ್ವಿಕೆ ನಡೆಸಿದ ಬಹುಮನಿ ಸುಲ್ತಾನರು 17 ಅರಸರನ್ನು ಕಂಡಿದ್ದು, ಅವರಲ್ಲಿ ಮೂವರು ಬಾಲ್ಯಾವಸ್ಥೆಯಲ್ಲೇ ಅಧಿಕಾರದ ಗದ್ದುಗೆಯೇರಿದ್ದರು ಎಂಬುದು ತಿಳಿದಿದೆ ಎಂದು ಕೊರಳಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಅಷ್ಟೇ ಅಲ್ಲ, ಹಿಂದೂ ಹಾಗೂ ಮುಸ್ಲಿಮರಿಗೆ ಬಹುಮನಿ ಸುಲ್ತಾನರು ಯಾವುದೇ ಕೊಡುಗೆ ನೀಡಿಲ್ಲ. ಅವರ ಅವಧಿಯಲ್ಲಿ ಹಿಂದೂ ದೇವಾಲಯ ಧ್ವಂಸಗೊಳಿಸಲಾಗಿದೆ. ಹಿಂದೂಗಳನ್ನು ಕೊಂದಿದ್ದಾರೆ. ಅಂತಹವರ ಜಯಂತಿ ಆಚರಿಸುವ ಹಾಗೂ ಕನ್ನಡಪರ ಹೋರಾಟಗಾರರಿಗೆ ಕರುನಾಡಿನ ಇತಿಹಾಸ ತಿಳಿಸುವ ಯಾವ ಅವಶ್ಯಕತೆಯೂ ಸಚಿವರಿಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search