• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕನ್ನಡಪರ ಸಂಘಟನೆಗಳಿಗೇ ರಾಜ್ಯದ ಇತಿಹಾಸ ಗೊತ್ತಿಲ್ಲ ಎಂದು ಅವಮಾನ ಮಾಡಿದ ಕಾಂಗ್ರೆಸ್ ಸಚಿವ!

TNN Correspondent Posted On February 17, 2018
0


0
Shares
  • Share On Facebook
  • Tweet It

ಕಲಬುರಗಿ: ಇತ್ತೀಚೆಗಷ್ಟೇ ಸರ್ಕಾರದಿಂದಲೇ ಬಹಮನಿ ಸುಲ್ತಾನರ ಉತ್ಸವ ಆಯೋಜಿಸಿ ರಾಜ್ಯದ ಜನ ಹಾಗೂ ಸ್ವತಃ ಮುಖ್ಯಮಂತ್ರಿಯವರಿಂದಲೇ ಟೀಕೆಗೆ ಒಳಗಾದ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಮತ್ತೊಂದು ಹೇಳಿಕೆ ನೀಡುವ ಮೂಲಕ ಕನ್ನಡಪರ ಸಂಘಟನೆಗಳಿಗೆ ಅವಮಾನ ಮಾಡಿದ್ದಾರೆ.

ಬಹುಮನಿ ಸುಲ್ತಾನರ ಉತ್ಸವ ಆಚರಣೆಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳ ವಿರುದ್ಧ ಕೆಂಡಾಮಂಡಲವಾದ ಶರಣ ಪ್ರಕಾಶ್ ಪಾಟೀಲ್, “ಕನ್ನಡಪರ ಸಂಘಟನೆಗಳಿಗೆ ಇತಿಹಾಸದ ಅರಿವೇ ಇಲ್ಲ” ಎಂದು ಹೇಳಿಕೆ ನೀಡಿದ್ದಾರೆ.

ಇದಕ್ಕೆ ಹಲವು ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ನಾನು ಇತಿಹಾಸ ಅರಿತಿದ್ದು, ಕನ್ನಡ ಪರ ಸಂಘಟನೆಗಳು ಹಾಗೂ ಹೋರಾಟಗಾರರು ರಾಜ್ಯದ ಇತಿಹಾಸವನ್ನು ಅರಿತೇ ಸಂಘಟನೆ ಕಟ್ಟಿದ್ದಾರೆ. ಇದು ಗೊತ್ತಿದ್ದರೂ ಸಚಿವ ಕನ್ನಡ ಪರ ಸಂಘಟನೆಗಳಿಗೆ ಅವಮಾನ ಮಾಡಿದ್ದು, ಕೂಡಲೇ ಕ್ಷಮೆಯಾಚಿಸಬೇಕು ಎಂದು ಹಸಿರು ಸೇನೆ (ಕಲಬುರಗಿ)ಸಂಸ್ಥಾಪಕ ಅಧ್ಯಕ್ಷ ವೀರಣ್ಣ ಕೊರಳಿ ಆಗ್ರಹಿಸಿದ್ದಾರೆ.

ಹಸನಗಂಗು, ಬಹುಮನ್ ಶಾ ಅವರಿಂದ ಹಿಡಿದು ಕಲೀ ಅಲ್ಲಾ ಶಾ ವರೆಗಿನ ಇತಿಹಾಸ ನಮಗೆ ಗೊತ್ತಿದೆ. 13 ರಿಂದ 15ನೇ ಶತಮಾನದವರೆಗೆ ಆಳ್ವಿಕೆ ನಡೆಸಿದ ಬಹುಮನಿ ಸುಲ್ತಾನರು 17 ಅರಸರನ್ನು ಕಂಡಿದ್ದು, ಅವರಲ್ಲಿ ಮೂವರು ಬಾಲ್ಯಾವಸ್ಥೆಯಲ್ಲೇ ಅಧಿಕಾರದ ಗದ್ದುಗೆಯೇರಿದ್ದರು ಎಂಬುದು ತಿಳಿದಿದೆ ಎಂದು ಕೊರಳಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಅಷ್ಟೇ ಅಲ್ಲ, ಹಿಂದೂ ಹಾಗೂ ಮುಸ್ಲಿಮರಿಗೆ ಬಹುಮನಿ ಸುಲ್ತಾನರು ಯಾವುದೇ ಕೊಡುಗೆ ನೀಡಿಲ್ಲ. ಅವರ ಅವಧಿಯಲ್ಲಿ ಹಿಂದೂ ದೇವಾಲಯ ಧ್ವಂಸಗೊಳಿಸಲಾಗಿದೆ. ಹಿಂದೂಗಳನ್ನು ಕೊಂದಿದ್ದಾರೆ. ಅಂತಹವರ ಜಯಂತಿ ಆಚರಿಸುವ ಹಾಗೂ ಕನ್ನಡಪರ ಹೋರಾಟಗಾರರಿಗೆ ಕರುನಾಡಿನ ಇತಿಹಾಸ ತಿಳಿಸುವ ಯಾವ ಅವಶ್ಯಕತೆಯೂ ಸಚಿವರಿಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!

  • Privacy Policy
  • Contact
© Tulunadu Infomedia.

Press enter/return to begin your search