• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕನ್ನಡಪರ ಸಂಘಟನೆಗಳಿಗೇ ರಾಜ್ಯದ ಇತಿಹಾಸ ಗೊತ್ತಿಲ್ಲ ಎಂದು ಅವಮಾನ ಮಾಡಿದ ಕಾಂಗ್ರೆಸ್ ಸಚಿವ!

TNN Correspondent Posted On February 17, 2018
0


0
Shares
  • Share On Facebook
  • Tweet It

ಕಲಬುರಗಿ: ಇತ್ತೀಚೆಗಷ್ಟೇ ಸರ್ಕಾರದಿಂದಲೇ ಬಹಮನಿ ಸುಲ್ತಾನರ ಉತ್ಸವ ಆಯೋಜಿಸಿ ರಾಜ್ಯದ ಜನ ಹಾಗೂ ಸ್ವತಃ ಮುಖ್ಯಮಂತ್ರಿಯವರಿಂದಲೇ ಟೀಕೆಗೆ ಒಳಗಾದ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಮತ್ತೊಂದು ಹೇಳಿಕೆ ನೀಡುವ ಮೂಲಕ ಕನ್ನಡಪರ ಸಂಘಟನೆಗಳಿಗೆ ಅವಮಾನ ಮಾಡಿದ್ದಾರೆ.

ಬಹುಮನಿ ಸುಲ್ತಾನರ ಉತ್ಸವ ಆಚರಣೆಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳ ವಿರುದ್ಧ ಕೆಂಡಾಮಂಡಲವಾದ ಶರಣ ಪ್ರಕಾಶ್ ಪಾಟೀಲ್, “ಕನ್ನಡಪರ ಸಂಘಟನೆಗಳಿಗೆ ಇತಿಹಾಸದ ಅರಿವೇ ಇಲ್ಲ” ಎಂದು ಹೇಳಿಕೆ ನೀಡಿದ್ದಾರೆ.

ಇದಕ್ಕೆ ಹಲವು ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ನಾನು ಇತಿಹಾಸ ಅರಿತಿದ್ದು, ಕನ್ನಡ ಪರ ಸಂಘಟನೆಗಳು ಹಾಗೂ ಹೋರಾಟಗಾರರು ರಾಜ್ಯದ ಇತಿಹಾಸವನ್ನು ಅರಿತೇ ಸಂಘಟನೆ ಕಟ್ಟಿದ್ದಾರೆ. ಇದು ಗೊತ್ತಿದ್ದರೂ ಸಚಿವ ಕನ್ನಡ ಪರ ಸಂಘಟನೆಗಳಿಗೆ ಅವಮಾನ ಮಾಡಿದ್ದು, ಕೂಡಲೇ ಕ್ಷಮೆಯಾಚಿಸಬೇಕು ಎಂದು ಹಸಿರು ಸೇನೆ (ಕಲಬುರಗಿ)ಸಂಸ್ಥಾಪಕ ಅಧ್ಯಕ್ಷ ವೀರಣ್ಣ ಕೊರಳಿ ಆಗ್ರಹಿಸಿದ್ದಾರೆ.

ಹಸನಗಂಗು, ಬಹುಮನ್ ಶಾ ಅವರಿಂದ ಹಿಡಿದು ಕಲೀ ಅಲ್ಲಾ ಶಾ ವರೆಗಿನ ಇತಿಹಾಸ ನಮಗೆ ಗೊತ್ತಿದೆ. 13 ರಿಂದ 15ನೇ ಶತಮಾನದವರೆಗೆ ಆಳ್ವಿಕೆ ನಡೆಸಿದ ಬಹುಮನಿ ಸುಲ್ತಾನರು 17 ಅರಸರನ್ನು ಕಂಡಿದ್ದು, ಅವರಲ್ಲಿ ಮೂವರು ಬಾಲ್ಯಾವಸ್ಥೆಯಲ್ಲೇ ಅಧಿಕಾರದ ಗದ್ದುಗೆಯೇರಿದ್ದರು ಎಂಬುದು ತಿಳಿದಿದೆ ಎಂದು ಕೊರಳಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಅಷ್ಟೇ ಅಲ್ಲ, ಹಿಂದೂ ಹಾಗೂ ಮುಸ್ಲಿಮರಿಗೆ ಬಹುಮನಿ ಸುಲ್ತಾನರು ಯಾವುದೇ ಕೊಡುಗೆ ನೀಡಿಲ್ಲ. ಅವರ ಅವಧಿಯಲ್ಲಿ ಹಿಂದೂ ದೇವಾಲಯ ಧ್ವಂಸಗೊಳಿಸಲಾಗಿದೆ. ಹಿಂದೂಗಳನ್ನು ಕೊಂದಿದ್ದಾರೆ. ಅಂತಹವರ ಜಯಂತಿ ಆಚರಿಸುವ ಹಾಗೂ ಕನ್ನಡಪರ ಹೋರಾಟಗಾರರಿಗೆ ಕರುನಾಡಿನ ಇತಿಹಾಸ ತಿಳಿಸುವ ಯಾವ ಅವಶ್ಯಕತೆಯೂ ಸಚಿವರಿಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search